T20 WC; ನೇಪಾಳ -ಲಂಕಾ ಪಂದ್ಯ ಮಳೆಯಿಂದ ರದ್ದು: ದಕ್ಷಿಣ ಆಫ್ರಿಕಾ ಸೂಪರ್ 8 ಪ್ರವೇಶ

ಅಜೇಯ ಆಸ್ಟ್ರೇಲಿಯ ಸೂಪರ್ 8ಕ್ಕೆ... ಕೆನಡಾ ವಿರುದ್ಧ ಜಯ ; ಪಾಕ್ ಆಸೆ ಜೀವಂತ

Team Udayavani, Jun 12, 2024, 10:52 AM IST

1-reee

ನ್ಯೂಯಾರ್ಕ್ : ಶ್ರೀಲಂಕಾ ಮತ್ತು ನೇಪಾಳ ನಡುವಿನ ಪಂದ್ಯ ಮಳೆಯಿಂದ ವಾಶ್‌ಔಟ್ ಆದ ನಂತರ ಟಿ 20 ವಿಶ್ವಕಪ್‌ನ ಸೂಪರ್ 8 ಹಂತಕ್ಕೆ ಅಧಿಕೃತವಾಗಿ ಅರ್ಹತೆ ಪಡೆದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ದಕ್ಷಿಣ ಆಫ್ರಿಕಾ ಪಾತ್ರವಾಗಿದೆ.

ಪಂದ್ಯ ರದ್ದಾದುದು ಶ್ರೀಲಂಕಾದ ಮುಂದಿನ ಹಂತ ಪ್ರವೇಶದ ಸಾಧ್ಯತೆಗಳನ್ನು ಸಂಪೂರ್ಣವಾಗಿ ಕುಗ್ಗಿಸಿದೆ, ತಂಡ ಸರಣಿಯಿಂದ ಹೊರ ಬೀಳುವ ಅಂಚಿನಲ್ಲಿ ಇದೆ.

ಗ್ರೂಪ್ ಡಿ ಯಲ್ಲಿ ಬಾಂಗ್ಲಾದೇಶದ ವಿರುದ್ಧದ ಸೋಲಿನ ನಂತರ ಶ್ರೀಲಂಕಾ ಹಾದಿ ಕಠಿನ ವಾಗಿತ್ತು. ಶ್ರೀಲಂಕಾ ಉಳಿದ ಪಂದ್ಯಗಳನ್ನು ಗೆಲ್ಲಬೇಕಿತ್ತು. ಮೂರು ಪಂದ್ಯಗಳಿಂದ ಕೇವಲ ಒಂದು ಪಾಯಿಂಟ್ ಹೊಂದಿದೆ. ಅಂತಿಮ ಪಂದ್ಯವನ್ನು ಜೂನ್ 16 ರಂದು ನೆದರ್ಲ್ಯಾಂಡ್ಸ್ ವಿರುದ್ಧ ಆಡಲಿದೆ.

ಅಜೇಯ ಆಸ್ಟ್ರೇಲಿಯ ಸೂಪರ್ 8ಕ್ಕೆ
ಗ್ರೂಪ್ ಬಿ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡ ನಮೀಬಿಯಾ ವಿರುದ್ಧ 9 ವಿಕೆಟ್ ಭರ್ಜರಿ ಜಯ ಸಾಧಿಸಿ 3 ರಲ್ಲಿ 3 ಪಂದ್ಯಗಳನ್ನು ಗೆದ್ದು ಅಜೇಯವಾಗಿ ಸೂಪರ್ 8 ಹಂತಕ್ಕೆ ಪ್ರವೇಶಿಸಿದೆ. ನಮೀಬಿಯಾ 17 ಓವರ್ ಗಳಲ್ಲಿ 72ಕ್ಕೆ ಆಲೌಟಾದರೆ, ಗುರಿ ಬೆನ್ನಟ್ಟಿದ ಆಸೀಸ್ 5.4 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 74 ರನ್ ಗಳಿಸಿ ಸುಲಭ ಜಯ ತನ್ನದಾಗಿಸಿಕೊಂಡಿತು. ನಮೀಬಿಯಾ ಸರಣಿಯಿಂದ ಹೊರ ಬಿದ್ದಿತು.

ಕೆನಡಾ ವಿರುದ್ಧ ಜಯ ; ಪಾಕ್ ಆಸೆ ಜೀವಂತ

ಮಂಗಳವಾರ ನಡೆದ ಎ ಗುಂಪಿನ ಗೆಲ್ಲಲೇಬೇಕಾದ ಪಂದ್ಯದಲ್ಲಿ ಪಾಕಿಸ್ಥಾನ ತಂಡವು ಕೆನಡಾ ವಿರುದ್ಧ ಏಳು ವಿಕೆಟ್‌ಗಳ ಜಯ ಸಾಧಿಸಿದೆ.

ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಕೆನಡಾ ಆರನ್ ಜಾನ್ಸನ್ 52 ರನ್ ಗಳಿಸಿದರೂ ಪಾಕಿಸ್ಥಾನ ಏಳು ವಿಕೆಟ್‌ಗೆ ಸಾಧಾರಣ 106 ಕ್ಕೆ ನಿರ್ಬಂಧಿಸಿತು. ಇತರ ಬ್ಯಾಟ್ಸ್ ಮ್ಯಾನ್ ಗಳು ಪ್ರಭಾವ ಬೀರಲು ವಿಫಲರಾದರು.ಪಾಕ್ ಪರ ಮೊಹಮ್ಮದ್ ಅಮೀರ್ ಮತ್ತು ಹ್ಯಾರಿಸ್ ರೌಫ್ ತಲಾ ಎರಡು ವಿಕೆಟ್ ಪಡೆದರು.

ಗುರಿ ಬೆನ್ನಟ್ಟಿದ ಪಾಕಿಸ್ಥಾನ ಮೊಹಮ್ಮದ್ ರಿಜ್ವಾನ್ ಅವರ ಅಜೇಯ 53 ಮತ್ತು ನಾಯಕ ಬಾಬರ್ ಅಜಮ್ ಅವರ 33 ರನ್ ಕೊಡುಗೆಯಿಂದ 17.3 ಓವರ್‌ಗಳಲ್ಲಿ ಜಯ ಸಾಧಿಸಿತು. ಕೆನಡಾ ಪರ ದಿಲೋನ್ ಹೆಲಿಗರ್ 2 ವಿಕೆಟ್ ಪಡೆದರು.

ಪಾಕ್ ಹೇಗೆ ಮುಂದಿನ ಹಂತಕ್ಕೇರಬಹುದು?

ಮುಂದಿನ ಹಂತಕ್ಕೇರಲು ಪಾಕಿಸ್ಥಾನ ತಂಡವು ಉಳಿದ ಪಂದ್ಯವನ್ನು ಗೆಲ್ಲಲೇಬೇಕು. ಜೂನ್ 16 ರಂದು ಐರ್ಲೆಂಡ್ ವಿರುದ್ದ ಪಾಕ್ ಆಡಲಿದೆ. ಅಷ್ಟೇ ಅಲ್ಲದೆ ಯುಎಸ್ಎ ಮತ್ತು ಕೆನಡಾ ತಂಡಗಳು ಗುಂಪು ಹಂತದಲ್ಲಿ ಉಳಿದ ಪಂದ್ಯದ ಫಲಿತಾಂಶವೂ ನಿರ್ಣಾಯಕವಾಗಲಿದೆ. ಸೂಪರ್ 8 ಪ್ರವೇಶದ ತವಕದಲ್ಲಿರುವ ಯುಎಸ್ಎ ತಂಡಕ್ಕಿಂತ ಹೆಚ್ಚು ರನ್ ರೇಟ್ ಪಡೆದರೆ ಪಾಕ್ ಮುಂದಿನ ಹಂತಕ್ಕೆ ಅವಕಾಶ ಪಡೆಯಬಹುದು. ಯುಎಸ್ಎ ತಂಡ ಭಾರತ ಮತ್ತು ಐರ್ಲೆಂಡ್ ವಿರುದ್ದ ಭಾರೀ ಅಂತರದ ಸೋಲು ಅನುಭವಿಸಿದರೆ ಪಾಕ್ ಗೆ ಲಕ್ ಒಲಿಯಬಹುದು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.