Chef Chidambara: ಇದು ರೆಗ್ಯುಲರ್‌ ಜಾನರ್‌ ಸಿನಿಮಾವಲ್ಲ..


Team Udayavani, Jun 12, 2024, 11:26 AM IST

Chef Chidambara: ಇದು ರೆಗ್ಯುಲರ್‌ ಜಾನರ್‌ ಸಿನಿಮಾವಲ್ಲ..

“ಇಲ್ಲಿ ನಡೆಯುವ ಪ್ರತಿ ಕೊಲೆಯ ಹಿಂದೆಯೂ ಒಂದು ನಗುವಿದೆ..’ – ಹೀಗೆ ಹೇಳಿ ನಕ್ಕರು ನಿರ್ದೇಶಕ ಆನಂದ್‌ ರಾಜ್‌. ಅವರ ನಗುವಿಗೆ ಕಾರಣ “ಶೆಫ್ ಚಿದಂಬರ’. ಸದ್ಯ ಟ್ರೇಲರ್‌ ಮೂಲಕ ಸದ್ದು ಮಾಡುತ್ತಿರುವ ಈ ಚಿತ್ರ ಜೂನ್‌ 14ಕ್ಕೆ ತೆರೆಕಾಣುತ್ತಿದೆ.

ಈ ಚಿತ್ರದ ಮೇಲೆ ನಿರ್ದೇಶಕರು ತುಂಬು ನಿರೀಕ್ಷೆಯಿಂದ ಎದುರು ನೋಡುತ್ತಿದ್ದಾರೆ. ಅದಕ್ಕೆ ಕಾರಣ ಸಿನಿಮಾದ ಕಥೆ. “ಇದು ರೆಗ್ಯುಲರ್‌ ಕಂಟೆಂಟ್‌ ಇರುವ ಸಿನಿಮಾವಲ್ಲ. ಇದೊಂದು ಕಾಮಿಡಿ ಥ್ರಿಲ್ಲರ್‌ ಚಿತ್ರ. ಇಲ್ಲೊಂದಿಷ್ಟು ಕೊಲೆಗಳು ನಡೆಯುತ್ತವೆ. ಅದರ ಹಿಂದೊಂದು ನಗುವಿದೆ. ಸಾವಿನಲ್ಲೂ ನಗು ಹೇಗೆ ಎಂದು ನೀವು ಕೇಳಬಹುದು. ಅದೇ ಈ ಸಿನಿಮಾದ ವಿಶೇಷತೆ’ ಎನ್ನುತ್ತಾರೆ ಆನಂದ್‌.

ನಿರ್ದೇಶಕ ಆನಂದ ರಾಜ್‌ ತಮ್ಮ ಚೊಚ್ಚಲ ಚಿತ್ರವಾದ “ರಾಘು’ವಿನಲ್ಲಿ ಹೊಸ ಪ್ರಯೋಗ ಮಾಡಿ ಗಮನ ಸೆಳೆದಿದ್ದರು. ಇಡೀ ಚಿತ್ರವನ್ನು ಒಂದೇ ಪಾತ್ರವನ್ನಿಟ್ಟು ಚಿತ್ರೀಕರಿಸಿದ್ದರು. ಚಿತ್ರಕ್ಕೆ ಮೆಚ್ಚುಗೆ ಜೊತೆಗೆ ಕಮರ್ಷಿಯಲ್‌ ಆಗಿಯೂ ಆ ಚಿತ್ರ ನಿರ್ಮಾಪಕರ ಮೊಗದಲ್ಲಿ ನಗು ತಂದಿತ್ತು. ಈಗ “ಶೆಫ್ ಚಿದಂಬರ’ ಮೂಲಕ ಮತ್ತೂಂದು ಪ್ರಯೋಗಕ್ಕೆ ಕೈ ಹಾಕಿದ್ದಾರೆ. “ಇದು ಡಾರ್ಕ್‌ ಕಾಮಿಡಿ ಸಿನಿಮಾ. ಕನ್ನಡದಲ್ಲಿ ಈ ತರಹದ ಜಾನರ್‌ ಬಂದಿರೋದು ಕಡಿಮೆ. ಅದಕ್ಕಿಂತ ಹೆಚ್ಚಾಗಿ ಶೆಫ್ ಚಿದಂಬರದಂತಹ ಕಥೆ ಬಂದೇ ಇಲ್ಲ. ಇದೊಂದು ಆ್ಯಕ್ಷನ್‌ ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಡಾರ್ಕ್‌ ಹ್ಯೂಮರ್‌ ಜಾನರ್‌ನ ಚಿತ್ರ. ಅನಿರುದ್ಧ್ ಅವರು ಶೆಫ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಿಧಿ ಸುಬ್ಬಯ್ಯ ಈತನಕ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರೆಚೆಲ್‌ ಡೇವಿಡ್‌ ಅವರ ಪಾತ್ರ ಕೂಡ ವಿಭಿನ್ನವಾಗಿದೆ’ ಎನ್ನುತ್ತಾರೆ. ಶೆಫ್ ಚಿದಂಬರನ ಹಿಂದೆ ಒಂದು ಸ್ಟ್ರಾಂಗ್‌ ಟೀಂ ಇದೆ. ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಗಣೇಶ್‌ ಪರಶುರಾಮ್‌ ಬರೆದಿದ್ದಾರೆ.

ಉದಯಲೀಲಾ ಛಾಯಾಗ್ರಹಣ, ವಿಜೇತ್‌ ಚಂದ್ರ ಸಂಕಲನ, ರಿತ್ವಿಕ್‌ ಮುರಳೀಧರ್‌ ಸಂಗೀತ ನಿರ್ದೇಶನ, ಆಶಿಕ್‌ ಹುಸಗುಳ್ಳಿ ಡಿ.ಐ, ನರಸಿಂಹಮೂರ್ತಿ ಸಾಹಸ ನಿರ್ದೇಶನ ಹಾಗೂ ಮಾಧುರಿ ಪರಶುರಾಮ ಅವರ ನೃತ್ಯ ನಿರ್ದೇಶನ ಚಿತ್ರಕ್ಕಿದೆ. ತಾರಾಬಳಗದಲ್ಲಿ ಶರತ್‌ ಲೋಹಿತಾಶ್ವ, ಕೆ.ಎಸ್‌ ಶ್ರೀಧರ್‌, ಶಿವಮಣಿ ಮುಂತಾದವರು ನಟಿಸಿದ್ದಾರೆ ಎನ್ನುವುದು ಆನಂದ್‌ರಾಜ್‌ ಮಾತು.

ದಮ್ತಿ ಪಿಕ್ಚರ್ಸ್‌ ಲಾಂಛನದಲ್ಲಿ ರೂಪ ಡಿ.ಎನ್‌ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

 

ಟಾಪ್ ನ್ಯೂಸ್

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raakha kannada movie

Sandalwood; ತಂದೆ ಮಕ್ಕಳ ಸಂಬಂಧದ ಸುತ್ತ ‘ರಾಖಾ’

ajagrata producer gave fortuner car gift to the director

Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ

Kannada movie Taj releasing soon

Sandalwood; ಟ್ರೇಲರ್‌ನಲ್ಲಿ ‘ತಾಜ್‌’ ಪ್ರೀತಿ; ಹೊಸಬರ ಚಿತ್ರ ತೆರೆಗೆ ಸಿದ್ಧ

No problem anyone comes in front of Martin…: Producer Uday Mehta

Martin ಮುಂದೆ ಯಾರೇ ಬರಲಿ ನೋ ಪ್ರಾಬ್ಲಂ…: ನಿರ್ಮಾಪಕ ಉದಯ್‌ ಮೆಹ್ತಾ

6

Actor Darshan: ಜೈಲಿನ ಬಳಿ ಯಾರೂ ಬರಬೇಡಿ; ಫ್ಯಾನ್ಸ್‌ಗೆ ದರ್ಶನ್‌ ಮನವಿ

MUST WATCH

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

ಹೊಸ ಸೇರ್ಪಡೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.