Tanker Mafia ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ?: ದೆಹಲಿ ಸರ್ಕಾರಕ್ಕೆ ಸುಪ್ರೀಂ ತರಾಟೆ
ನಿಮಗಾಗದಿದ್ದರೆ ಪೊಲೀಸರಿಗೆ ಸೂಚಿಸ್ತೇವೆ: ನ್ಯಾಯಪೀಠ
Team Udayavani, Jun 12, 2024, 8:31 PM IST
ನವದೆಹಲಿ: ದೆಹಲಿಯಲ್ಲಿ ನೀರಿನ ಕೊರತೆ ಹೆಚ್ಚಿ ಜನರು ಪರದಾಡುತ್ತಿರುವ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ನೀರನ್ನು ಪೋಲು ಮಾಡುತ್ತಿರುವುದರ ಬಗ್ಗೆ ಹಾಗೂ ಟ್ಯಾಂಕರ್ ಮಾಫಿಯಾ ಕುರಿತಂತೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದೆ.
ಹಿಮಾಚಲ ಪ್ರದೇಶದಿಂದ ಹೆಚ್ಚುವರಿ ನೀರನ್ನು ಒದಗಿಸಲಾಗಿದೆ ಅದನ್ನು ಹರ್ಯಾಣ ಸರ್ಕಾರ ದೆಹಲಿಗೆ ಬಿಡುಗಡೆಗೊಳಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ದಿಲ್ಲಿ ಸರ್ಕಾರ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿತ್ತು. ನ್ಯಾ.ಪ್ರಶಾಂತ್ ಕುಮಾರ್ ಮಿಶ್ರಾ ಹಾಗೂ ನ್ಯಾ.ಪ್ರಸನ್ನ ಬಿ ವರಾಲೆ ಅವರ ರಜಾಕಾಲದ ನ್ಯಾಯಪೀಠವು ಈ ಅರ್ಜಿ ಆಲಿಸಿದೆ.
ಇದೇ ವೇಳೆ ದಿಲ್ಲಿ ಸರ್ಕಾರವನ್ನು ತರಾಟೆ ತೆಗೆದುಕೊಂಡು, ದಿಲ್ಲಿಯಲ್ಲಿ ಟ್ಯಾಂಕರ್ಗಳಿಗೆ ತುಂಬಿಸಿ ಮಾರಾಟ ಮಾಡಲು ನೀರು ಇದೆ ಎನ್ನುವುದಾದರೆ ಅದೇ ನೀರು ಏಕೆ ಪೈಪ್ಲೈನ್ಗಳಲ್ಲಿ ಬರುವುದಿಲ್ಲ? ಈ ಮಾಫಿಯಾ ಕುರಿತಂತೆ ಯಾವ ಕ್ರಮ ಕೈಗೊಂಡಿದ್ದೀರಿ? ನಿಮಗೆ ಇದನ್ನು ಪರಿಹರಿಸಲು ಸಾಧ್ಯವಾಗದಿದ್ದರೆ ಹೇಳಿ, ನಾವು ದಿಲ್ಲಿ ಪೊಲೀಸರಿಗೆ ಈ ಬಗ್ಗೆ ಕ್ರಮಕ್ಕೆ ಸೂಚಿಸುತ್ತೇವೆ ಎಂದೂ ಹೇಳಿದೆ.
ಏತನ್ಮಧ್ಯೆ, ನೀರು ಪೋಲಾಗುತ್ತಿರುವುದನ್ನು ತಡೆಗಟ್ಟಲು ಪೈಪ್ಲೈನ್ಗಳ ಪರಿಶೀಲನೆಗಾಗಿ ತಂಡ ರಚಿಸಿ, ಎಲ್ಲಾ ಪೈಪ್ಲೈನ್ಗಳನ್ನು ಪರಿಶೀಲಿಸಿ ನೀರು ಸೋರಿಕೆಯಾಗುತ್ತಿದ್ದಲ್ಲಿ ಅದನ್ನು 12 ಗಂಟೆ ಒಳಗೆ ಸರಿಪಡಿಸಲು ಆದೇಶಿಸಲಾಗಿದೆ ಎಂದು ದಿಲ್ಲಿ ಜಲ ಸಚಿವೆ ಆತಿಶಿ ಹೇಳಿದ್ದಾರೆ.
ಮತ್ತೂಂದೆಡೆ ದಿಲ್ಲಿ ಬಿಜೆಪಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್ದೇವ್ ಅವರು ಪೊಲೀಸ್ ಕಮಿಷನರ್ ಅವರನ್ನು ಭೇಟಿಯಾಗಿ ಟ್ಯಾಂಕರ್ ಮಾಫಿಯಾ ಬಗ್ಗೆ ಎಫ್ಐಆರ್ ದಾಖಲಿಸಿ, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: Falls: ಕಪಿಲತೀರ್ಥ ಜಲಪಾತ…: ಇದು ಕಲ್ಯಾಣ ಕರ್ನಾಟಕದಲ್ಲಿ ಇರೋ ಏಕೈಕ ಜಲಪಾತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.