ವಿದ್ಯಾರ್ಥಿಗಳ ಪಾಲಕರಿಗೆ ಬೆದರಿಕೆ ಕರೆ ಪ್ರಕರಣ;ಪೋಲಂಡ್,ಪಾಕಿಸ್ಥಾನದ ಕೋಡ್ ಸಂಖ್ಯೆ ಬಳಕೆ !
Team Udayavani, Jun 13, 2024, 7:25 AM IST
ಮಂಗಳೂರು: ಕಳೆದ ಎರಡು ದಿನಗಳಲ್ಲಿ ಮಂಗಳೂರು ನಗರ ಮತ್ತು ಸುರತ್ಕಲ್ ಭಾಗದ ಕಾಲೇಜು ವಿದ್ಯಾರ್ಥಿಗಳ ಹೆತ್ತವರಿಗೆ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಮಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು, ಜೂ. 11 ಮತ್ತು 12ರಂದು ಹಲವಾರು ವಿದ್ಯಾರ್ಥಿಗಳ ಹೆತ್ತವರಿಗೆ ಅಪರಿಚಿತರು ಪೊಲೀಸ್ ಅಧಿಕಾರಿಗಳಂತೆ ಬಿಂಬಿಸಿಕೊಂಡು ವಾಟ್ಸ್ಆ್ಯಪ್ ಮೂಲಕ ಕರೆ ಮಾಡಿ ಮಗ/ಮಗಳನ್ನು ಬಂಧಿಸಿದ್ದೇವೆ. ಅವರ ಬಿಡುಗಡೆಗೆ ಕೂಡಲೇ ಹಣ ನೀಡಿ ಎಂದಿದ್ದಾರೆ. ಹೆತ್ತವರು ಆತಂಕಿತರಾಗಿ ಶಾಲೆಗಳಲ್ಲಿ ವಿಚಾರಿಸಿದಾಗ ಅವರ ಮಕ್ಕಳು ಶಾಲೆಯಲ್ಲಿ ಸುರಕ್ಷಿತರಾಗಿರುವುದು ಗೊತ್ತಾಗಿದೆ. ಕರೆ ಬಂದಿರುವ ಸಂಖ್ಯೆಗಳನ್ನು ಪರಿಶೀಲಿಸಿದಾಗ ಪೋಲಂಡ್, ಪಾಕಿಸ್ಥಾನ ದೇಶಗಳ ಕೋಡ್ ಸಂಖ್ಯೆಯನ್ನು ಹೊಂದಿರುವುದು ಕಂಡುಬಂದಿದೆ ಎಂದು ತಿಳಿಸಿದ್ದಾರೆ.
ನಕಲಿ ಅಧಿಕಾರಿಗಳು ಹಣ ದೋಚಲು ನಡೆಸಿರುವ ತಂತ್ರ ಇದು. ಈ ರೀತಿ ವಾಟ್ಸ್ಆ್ಯಪ್ನಲ್ಲಿ ವಿದೇಶಗಳಿಂದ ಬರುವ ಯಾವುದೇ ಅಪರಿಚಿತ ವ್ಯಕ್ತಿಗಳ ಕರೆಗಳನ್ನು ಸ್ವೀಕರಿಸಬಾರದು. ಒಂದು ವೇಳೆ ಇಂತಹ ಕರೆಗಳನ್ನು ಸ್ವೀಕರಿಸಿದರೆ ಕೂಡಲೇ ಪಕ್ಕದ ಪೊಲೀಸ್ ಠಾಣೆಗೆ ತಿಳಿಸಬೇಕು. ಶಾಲಾ ಕಾಲೇಜುಗಳು ಕೂಡ ಇಂತಹ ನಕಲಿ ಕರೆಗಳ ಕುರಿತು ಹೆತ್ತವರು, ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಆಯುಕ್ತರು ತಿಳಿಸಿದ್ದಾರೆ.
ಡಾಟಾ ಬೇಸ್ ಕಳವು ಜಾಲ
ವಿದ್ಯಾರ್ಥಿಗಳ ಹೆತ್ತವರ ಮೊಬೈಲ್ ನಂಬರ್ನ್ನು ವಂಚಕರು “ಡಾಟಾ ಬೇಸ್ ಸೈಟ್’ಗಳಿಂದ ಖರೀದಿ ಮಾಡಿರುವ ಸಾಧ್ಯತೆ ಇದೆ. ನಮ್ಮ ದೇಶದಲ್ಲಿ ಇಂತಹ ಅನೇಕ ವೆಬ್ಸೈಟ್ಗಳು ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿವೆ. ಇದರಿಂದ ಅನೇಕ ಸಂಸ್ಥೆಗಳು ಕೂಡ ಅನಧಿಕೃತವಾಗಿ ಮೊಬೈಲ್ ಸಂಖ್ಯೆ, ಮತ್ತಿತರ ಮಾಹಿತಿಯನ್ನು ಪಡೆದುಕೊಳ್ಳುತ್ತವೆ. ಪರೀಕ್ಷಾ ಮಂಡಳಿಗಳಿಂದ ಸೈಬರ್ ವಂಚಕರು ಈ ರೀತಿಯ ಡಾಟಾ ಬೇಸ್ಗಳನ್ನು ಪಡೆದು ಅವುಗಳನ್ನು ಇತರ ವಂಚಕರಿಗೆ ಮಾರಾಟ ಮಾಡಿರುವ ಸಾಧ್ಯತೆ ಅಲ್ಲಗಳೆಯಲಾಗದು. ಹಾಗಾಗಿ ಪರೀಕ್ಷಾ ಮಂಡಳಿಗಳ ಬಗ್ಗೆಯೂ ತನಿಖೆ ನಡೆಸುವುದು ಸೂಕ್ತ. ಈ ರೀತಿಯಾಗಿ ಮಾಹಿತಿಯನ್ನು ಮಾರಾಟ ಮಾಡುವುದು “ಡಿಜಿಟಲ್ ಪರ್ಸನಲ್ ಡಾಟಾ ಪ್ರೊಟೆಕ್ಷನ್ ಆ್ಯಕ್ಟ್’ ಪ್ರಕಾರ ಅಪರಾಧ. ಆದರೆ ಈ ಕಾಯಿದೆ ನಮ್ಮ ದೇಶದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ ಎನ್ನುತ್ತಾರೆ ಮಂಗಳೂರಿನ ಸೈಬರ್ ಭದ್ರತಾ ತಜ್ಞ ಡಾ| ಅನಂತಪ್ರಭು ಜಿ. ಅವರು.
ಮತ್ತೆ ಇಬ್ಬರಿಗೆ ಕರೆ
ಬುಧವಾರ ಮತ್ತೆ ಇಬ್ಬರು ಹೆತ್ತವರಿಗೆ ಇದೇ ರೀತಿಯ ಕರೆಗಳು ಬಂದಿರುವುದಾಗಿ ತಿಳಿದು ಬಂದಿದೆ. ನಗರದ ಕಾಲೇಜಿನಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಯೋರ್ವರ ಹೆತ್ತವರಿಗೆ ಕರೆ ಮಾಡಿದ ಅಪರಿಚಿತರು “ನಿಮ್ಮ ಮಗನ ಮೇಲೆ ಡ್ರಗ್ಸ್ ಕೇಸ್ ಹಾಕಿದ್ದೇವೆ. ಈತನನ್ನು ಬಿಡಿಸಿಕೊಂಡು ಹೋಗಬೇಕಾದರೆ ಕೂಡಲೇ ಹಣ ನೀಡಿ’ ಎಂಬುದಾಗಿ ಹೇಳಿದ್ದಾರೆ. ಮತ್ತೋರ್ವರಿಗೆ ಮಗಳನ್ನು ಅಪಹರಣ ಮಾಡಲಾಗಿದೆ ಎಂಬುದಾಗಿ ಹೇಳಿ ಹಣಕ್ಕೆ ಒತ್ತಾಯಿಸಿದ್ದಾರೆ. ಹೆತ್ತವರು ಕೂಡಲೇ ಕಾಲೇಜಿಗೆ ಕರೆ ಮಾಡಿ ಕೇಳಿದಾಗ ಇದೊಂದು ನಕಲಿ ಬೆದರಿಕೆ ಕರೆ ಎಂಬುದಾಗಿ ಗೊತ್ತಾಗಿದೆ.
ನಂಬರ್ ಸಿಕ್ಕಿದ್ಹೇಗೆ: ಇನ್ನೂ ನಿಗೂಢ
ಪ್ರಥಮ ಪಿಯುಸಿಯ ಮಕ್ಕಳ ಹೆತ್ತವರ ನಂಬರ್ ವಂಚಕರ ಕೈಗೆ ಸಿಕ್ಕಿದ್ದು ಹೇಗೆ ಎಂಬುದು ಇನ್ನೂ ನಿಗೂಢವಾಗಿದೆ. ಇದರ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹೆತ್ತವರು ಹೀಗೆ ಮಾಡಿ
ತಮ್ಮ ಮಕ್ಕಳು ಶಿಕ್ಷಣ ಪಡೆಯುತ್ತಿರುವ ಸಂಸ್ಥೆಯ ಲ್ಯಾಂಡ್ಲೈನ್ ದೂರವಾಣಿ ಸಂಖ್ಯೆ ಮಾತ್ರವಲ್ಲದೆ ಮೊಬೈಲ್ ಸಂಖ್ಯೆ, ಕ್ಲಾಸ್ ಟೀಚರ್ ಮೊಬೈಲ್ ಸಂಖ್ಯೆಯನ್ನು ತೆಗೆದಿಟ್ಟುಕೊಂಡಿರಬೇಕು. ಸಂಶಯ ಬಂದಾಗ ಕೂಡಲೇ ಅವರಿಗೆ ಕರೆ ಮಾಡಿ ತಮ್ಮ ಮಕ್ಕಳ ಸುರಕ್ಷತೆ ಬಗ್ಗೆ ತಿಳಿದುಕೊಳ್ಳಬೇಕು ಎಂದು ಸೈಬರ್ ಭದ್ರತಾ ತಜ್ಞರು, ಪೊಲೀಸರು ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ
Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್ ನಜೀರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.