Minister HKP: ವೇತನ ಪರಿಷ್ಕರಣೆ ಬಗ್ಗೆ ಯಾವುದೇ ತೀರ್ಮಾನವಿಲ್ಲ; ಸಚಿವ ಎಚ್ಕೆಪಿ
Team Udayavani, Jun 13, 2024, 8:47 PM IST
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹುನಿರೀಕ್ಷಿತ ವೇತನ ಪರಿಷ್ಕರಣೆ ಬಗ್ಗೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ಆದರೆ, ಈ ನಿಟ್ಟಿನಲ್ಲಿ ಯಾವುದೇ ತೀರ್ಮಾನ ಆಗಿಲ್ಲ.
7ನೇ ವೇತನ ಆಯೋಗ ವರದಿಯ ಶಿಫಾರಸುಗಳ ಜಾರಿ, ಅದರಿಂದಾಗಬಹುದಾದ ಆರ್ಥಿಕ ಹೊರೆ ಸೇರಿದಂತೆ ಇದಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು. ಆದರೆ, ಅಧಿಕೃತ ಪ್ರಸ್ತಾವನೆ ಬಾರದ ಹಿನ್ನೆಲೆಯಲ್ಲಿ ಯಾವುದೇ ನಿರ್ಣಯ ಕೈಗೊಂಡಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಚುನಾವಣೆ ನೀತಿ ಸಂಹಿತೆ ಮುಗಿಯುತ್ತಿದ್ದಂತೆ ವೇತನ ಪರಿಷ್ಕರಣೆ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಲಿದೆ ಎಂಬ ನಿರೀಕ್ಷೆ ಇತ್ತು. ಈ ಹಿನ್ನೆಲೆಯಲ್ಲಿ ಲಕ್ಷಾಂತರ ಸರ್ಕಾರಿ ನೌಕರರು ಸಚಿವ ಸಂಪುಟ ಸಭೆಯ ಎದುರುನೋಡುತ್ತಿದ್ದರು. ಆದರೆ, ನಿರೀಕ್ಷೆಗಳು ತಾತ್ಕಾಲಿಕವಾಗಿ ಹುಸಿಯಾದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.