Andhra; ತಿರುಪತಿ ಸ್ವಚ್ಛಗೊಳಿಸುವೆ, ಹಿಂದೂ ಧರ್ಮ ರಕ್ಷಿಸುವೆ: ಚಂದ್ರಬಾಬು ನಾಯ್ಡು ಶಪಥ

ತಿರುಪತಿಯಲ್ಲಿ ಗೋವಿಂದನ ಜಪ ಮಾತ್ರ ನಡೆಯಬೇಕು... ಭ್ರಷ್ಟಾಚಾರದ ವಿರುದ್ಧ ತನಿಖೆಯಾಗುತ್ತದೆ

Team Udayavani, Jun 14, 2024, 6:30 AM IST

1-asaas

ತಿರುಪತಿ/ಅಮರಾವತಿ: ರಾಜ್ಯವನ್ನು “ಶುದ್ಧೀಕರಿಸುವ’ ಕಾರ್ಯವು ತಿರುಮಲದಿಂದಲೇ ಆರಂಭವಾಗಲಿದೆ. ಜಗನ್‌ ಸರಕಾರದ ವೇಳೆ ತಿರುಪತಿ-ತಿರುಮಲ ದೇವಸ್ಥಾನಂ ಟ್ರಸ್ಟ್‌ನಲ್ಲಿ ಅವ್ಯವಹಾರ ನಡೆದಿದೆ. ಭ್ರಷ್ಟಾಚಾರವನ್ನು ತೊಡೆದು ಹಾಕಿ “ತಿರುಮಲದಲ್ಲಿ ಹಿಂದೂ ಧರ್ಮ ರಕ್ಷಣೆ’ ಮಾಡಲಾಗುವುದು’ ಎಂದು ಆಂಧ್ರ ಪ್ರದೇಶದ ನೂತನ ಸಿಎಂ ಎನ್‌. ಚಂದ್ರಬಾಬು ನಾಯ್ಡು ಹೇಳಿದರು.

ಗುರುವಾರ ಕುಟುಂಬ ಸಮೇತರಾಗಿ ಅವರು ತಿರುಪತಿಯ ತಿರುಮಲಕ್ಕೆ ಆಗಮಿಸಿ ತಿಮ್ಮಪ್ಪನ ದರ್ಶನ ಪಡೆದರು. ಈ ವೇಳೆ ಮಾತನಾಡಿ, “ಕಳೆದ ಐದು ವರ್ಷಗಳಲ್ಲಿ ತಿರುಮಲವನ್ನು ಕೆಟ್ಟ ಪರಿಸ್ಥಿತಿಗೆ ತಳ್ಳಲಾಗಿದೆ. ಇಲ್ಲಿ ಗೋವಿಂದನ ಹೆಸರು ಮಾತ್ರವೇ ಕೇಳಬೇಕು. ಇಲ್ಲಿ ಬಂದಾಗ ವೈಕುಂಠದ ಅನುಭವವಾಗಬೇಕು’ ಎಂದರು.

“ಈ ಹಿಂದಿನ ಸರಕಾರವು ಟ್ರಸ್ಟ್‌ ಅನ್ನು ವಾಣಿಜ್ಯೀ ಕರಣಗೊಳಿಸಿದೆ. ಪ್ರಸಾದ ಗುಣಮಟ್ಟದಿಂದ ಕೂಡಿರ
ಬೇಕು. ಬೆಲೆ ಏರಿಕೆ ಮಾಡಬಾರದು ಮತ್ತು ದರ್ಶನದ ಟಿಕೆಟ್‌ಗಳನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲು ಅವಕಾಶ ಕೊಡಬಾರದು’ ಎಂದು ಸೂಚಿಸಿದರು. ಜಗನ್‌ ಸರಕಾರವು ಧಾರ್ಮಿಕ ಸ್ಥಳಗಳನ್ನು ಗಾಂಜಾ, ಮದ್ಯ ಮತ್ತು ಮಾಂಸಾಹಾರಿ ಕೇಂದ್ರಗಳನ್ನಾಗಿ ರೂಪಿ ಸಿದೆ ಎಂದು ಗಂಭೀರ ಆರೋಪ ಮಾಡಿದರು.

ಚೇರ್ಮನ್‌ ನೇಮಕ ವಿವಾದ
ಜಗನ್‌ ನೇತೃತ್ವದ ವೈಎಸ್‌ಆರ್‌ಪಿ ಸರಕಾರವು ಕಳೆದ ವರ್ಷ ತಿರುಪತಿ ತಿರುಮಲ ದೇವಸ್ಥಾನಂ ಟ್ರಸ್ಟ್‌ (ಟಿಟಿಡಿ) ಅಧ್ಯಕ್ಷರನ್ನಾಗಿ ತಿರುಪತಿ ಶಾಸಕ ಕರುಣಾಕರ್‌ ರೆಡ್ಡಿ ಭೂಮನ ಅವರನ್ನು ನೇಮಕ ಮಾಡಿತ್ತು. ಆಂಧ್ರದಲ್ಲಿ ಈ ನೇಮಕ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಭೂಮನ ಅವರಿಗೆ ಹಿಂದೂ ಧರ್ಮದಲ್ಲಿ ನಂಬಿಕೆ ಇಲ್ಲ. ಅವರು ಕ್ರೈಸ್ತ ಸಂಪರ್ಕ ಹೊಂದಿದ್ದಾರೆ ಎಂದು ಆಗ ಟಿಡಿಪಿ ಆರೋಪಿಸಿತ್ತು. ಈ ಹಿನ್ನೆಲೆಯಲ್ಲಿ ನಾಯ್ಡು ಹೇಳಿಕೆ ಮಹತ್ವ ಪಡೆದಿದೆ.

4 ಕಡತಗಳಿಗೆ ಸಹಿ
ತಿರುಪತಿ ಮತ್ತು ವಿಜಯವಾಡ ದೇವಸ್ಥಾನಗಳಿಗೆ ಭೇಟಿ ನೀಡಿದ ಬಳಿಕ ನೂತನ ಸಿಎಂ ಚಂದ್ರಬಾಬು ನಾಯ್ಡು ಅವರು ಅಮರಾವತಿಯ ಸಚಿವಾಲಯಕ್ಕೆ ಆಗಮಿಸಿ ಮುಖ್ಯಮಂತ್ರಿಯಾಗಿ ಕಾರ್ಯ ಕಲಾಪವನ್ನು ಆರಂಭಿಸಿದರು. ಈ ವೇಳೆ 16,347 ಶಿಕ್ಷಕರ ನೇಮಕಾತಿಗೆ ಅನುವು ಮಾಡಿಕೊಡುವ ಜಿಲ್ಲಾ ಆಯ್ಕೆ ಸಮಿತಿ (ಡಿಎಸ್‌ಸಿ) ಸಹಿತ ನಾಲ್ಕು ಕಡತಗಳಿಗೆ ಸಹಿ ಹಾಕಿದರು.

ಟಾಪ್ ನ್ಯೂಸ್

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.