Darshan ದೊಡ್ಡ ನಟ, ತತ್‌ಕ್ಷಣ ಕ್ರಮ ಅಸಾಧ್ಯ: ಫಿಲ್ಮ್ ಚೇಂಬರ್‌

ತಪ್ಪು ಸಾಬೀತಾದರೆ ನಿಷೇಧ... ಚಿಂತೆಯಲ್ಲಿ ನಿರ್ಮಾಪಕರು

Team Udayavani, Jun 14, 2024, 6:40 AM IST

Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಮೇಲಿನ ಆರೋಪ ಸಾಬೀತಾದರೆ ಅವರನ್ನು ನಿಷೇಧ ಮಾಡುವ ಕುರಿತು ನಿರ್ಧರಿಸು ತ್ತೇವೆ ಎಂದು ಕರ್ನಾಟಕ ಚಲನ ಚಿತ್ರ ವಾಣಿಜ್ಯ ಮಂಡಳಿ (ಫಿಲ್ಮ್ ಚೇಂಬರ್‌) ಅಧ್ಯಕ್ಷ ಎನ್‌.ಎಂ. ಸುರೇಶ್‌ ಹೇಳಿದ್ದಾರೆ. ಶನಿವಾರ ಚಿತ್ರದುರ್ಗಕ್ಕೆ ತೆರಳಿ ಹತ್ಯೆಗೆ ಒಳಗಾಗಿರುವ ರೇಣುಕಾ ಸ್ವಾಮಿ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಲಾಗುತ್ತದೆ ಎಂದಿದ್ದಾರೆ.

ಕೊಲೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್‌ ಅವರನ್ನು ಚಿತ್ರರಂಗದಿಂದ ನಿಷೇಧಿಸಬೇಕೆಂದು ಕೇಳಿ ಬಂದ ಕೂಗಿನ ಹಿನ್ನೆಲೆಯಲ್ಲಿ ಗುರುವಾರ ಚಿತ್ರರಂಗದ ಪ್ರಮುಖರ ಸಭೆಯನ್ನು ಫಿಲ್ಮ್ ಚೇಂಬರ್‌ ನಡೆಸಿತು. ಅನಂತರ ಮಾತನಾಡಿದ ಅಧ್ಯಕ್ಷ ಎನ್‌.ಎಂ. ಸುರೇಶ್‌, “ಈ ಅನ್ಯಾಯವನ್ನು ನಾವು ಖಂಡಿಸಲೇಬೇಕು. ಮೊದಲು ರೇಣುಕಾಸ್ವಾಮಿ ಕುಟುಂಬ ವನ್ನು ಭೇಟಿ ಮಾಡಲಿದ್ದೇವೆ. ದರ್ಶನ್‌ ದೊಡ್ಡ ನಟ, ಅವರ ಮೇಲೆ ಭಾರೀ ಬಂಡವಾಳ ಹೂಡಲಾಗಿದೆ, ಹಾಗಾಗಿ ನಿರ್ಮಾಪಕರ ಬಗ್ಗೆಯೂ ಯೋಚಿಸಬೇಕು. ಸದ್ಯ ನಿಷೇಧದ ಬಗ್ಗೆ ನಿರ್ಧರಿಸಲು ಆಗುವುದಿಲ್ಲ. ಈಗ ತನಿಖೆ ನಡೆಯುತ್ತಿದೆ. ತಪ್ಪು ಸಾಬೀತಾದರೆ ಕಲಾ ವಿದರ ಸಂಘದೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ’ ಎಂದಿದ್ದಾರೆ.

ಸದ್ಯಕ್ಕಂತೂ ದರ್ಶನ್‌ ಸಿನೆಮಾ ಮಾಡಲು ಆಗುವುದಿಲ್ಲ. ನಾವು ರಾಜಿ ಮಾಡಿಕೊಂಡು ಯಾರನ್ನೂ ರಕ್ಷಿಸುವ ಪ್ರಮೇಯವೇ ಇಲ್ಲ. ಇಲ್ಲಿ ನಡೆದಿರುವುದು ಕೊಲೆ. ಯಾವುದೇ ಮುಚ್ಚುಮರೆ ಇಲ್ಲ. ನಿರ್ಮಾಪಕರ ಆರ್ಥಿಕ ಪರಿಸ್ಥಿತಿಯನ್ನೂ ನೋಡಬೇಕು. ಮುಂದಿನ ದಿನಗಳಲ್ಲಿ ಆ ನಿರ್ಮಾಪಕರನ್ನು ಕರೆಸಿ ಮಾತನಾಡುತ್ತೇವೆ ಎಂದಿದ್ದಾರೆ. ಇದೇವೇಳೆ ಮಂಡಳಿ ಮತ್ತೂಮ್ಮೆ ಸಭೆ ನಡೆಸಿ ಚರ್ಚಿಸಲು ನಿರ್ಧರಿಸಿದೆ.

ಚಿಂತೆಯಲ್ಲಿ ನಿರ್ಮಾಪಕರು

ನಟ ದರ್ಶನ್‌ ಅವರನ್ನು ನಿಷೇಧಿಸಬೇಕೆಂಬ ಒತ್ತಡ ಒಂದು ಕಡೆಯಾದರೆ, ಅವರ ಮೇಲೆ ನಿರ್ಮಾಪಕರು 50 ಕೋಟಿ ರೂ.ಗೂ ಹೆಚ್ಚು ಬಂಡವಾಳ ಹೂಡಿರುವುದು ಮಂಡಳಿಗೆ ತಲೆನೋವಾಗಿದೆ. ಈಗಾಗಲೇ ದರ್ಶನ್‌ “ಡೆವಿಲ್‌’, “ಸಿಂಧೂರ ಲಕ್ಷ್ಮಣ’, ಪ್ರೇಮ್‌ ನಿರ್ದೇಶನದ ಸಿನೆಮಾ, ತಮಿಳು, ತೆಲುಗು ನಿರ್ಮಾಪಕರ ಸಿನೆಮಾಗಳ ಜತೆಗೆ ಹಲವು ನಿರ್ಮಾಪಕರಿಗೆ ಸಿನೆಮಾ ಮಾಡುವುದಾಗಿ ಮುಂಗಡ ಪಡೆದಿದ್ದಾರೆ. 25 ಲಕ್ಷ ರೂ.ಗಳಿಂದ 3 ಕೋ.ರೂ.ವರೆಗೂ ಪಡೆದುಕೊಂಡಿದ್ದಾರೆ. ಇದಲ್ಲದೆ ಇನ್ನೊಂದಿಷ್ಟು ನಿರ್ಮಾಣ ಸಂಸ್ಥೆಗಳು ಮುಂದಿನ ದಿನಗಳಲ್ಲಿ ಸಿನೆಮಾ ಮಾಡುವುದಕ್ಕಾಗಿ ದರ್ಶನ್‌ಗೆ ಮುಂಗಡ ರೂಪದಲ್ಲಿ ಹಣ ನೀಡಿವೆ. “ಡೆವಿಲ್‌’ ಸಿನೆಮಾ ಕೆಲವೇ ದಿನ ಶೂಟಿಂಗ್‌ ಆಗಿದೆ. ಈಗಾಗಲೇ ಆ ಚಿತ್ರಕ್ಕೂ ದರ್ಶನ್‌ ಮುಂಗಡ, ಶೂಟಿಂಗ್‌ ವೆಚ್ಚವೆಂದು ಕೋಟಿಗಟ್ಟಲೆ ಹಣ ವ್ಯಯಿಸಿದ್ದು, ಸದ್ಯ ನಿರ್ಮಾಪಕರು ಚಿಂತೆಗೀಡಾಗಿದ್ದಾರೆ.

ಟಾಪ್ ನ್ಯೂಸ್

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.