ಮಂಗಳೂರು: ವೇಗ ನಿಯಂತ್ರಣಕ್ಕೆ “ಮೊಬೈಲ್‌ ಸ್ಪೀಡ್‌ ರಾಡರ್‌ ಗನ್‌’


Team Udayavani, Jun 14, 2024, 12:32 PM IST

Udayavani Kannada Newspaper

ಮಹಾನಗರ: ನಗರ ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಅತೀ ವೇಗ ಹಾಗೂ ಅಜಾಗರೂಕತೆಯ ವಾಹನ ಚಾಲನೆಯಿಂದಾಗಿ ಉಂಟಾಗುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಹಾಗೂ ನಿಗದಿತ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ಚಾಲಕರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು ಪೊಲೀಸ್‌ ಇಲಾಖೆ ಮುಂದಾಗಿದೆ.

ಗುರುವಾರ ಕಮಿಷನರ್‌ ಅನುಪಮ್‌ ಅಗರ್‌ವಾಲ್‌ ಅವರ ಅಧ್ಯಕ್ಷತೆಯಲ್ಲಿ “ರಸ್ತೆ ಸುರಕ್ಷ ಸಭೆ’ಯಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಹೊರಡಿಸಿರುವ ಅಧಿಸೂಚನೆಯಂತೆ ಕಮಿಷನರೇಟ್‌ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ನಗರ ಸಭೆ,  ಪುರಸಭೆ/ ಪಾಲಿಕೆ ವ್ಯಾಪ್ತಿಯ ಹಾಗೂ ಇತರ ರಸ್ತೆಗಳಲ್ಲಿ “ಮೊಬೈಲ್‌ ಸ್ಪೀಡ್‌ ರ್ಯಾಡರ್‌ ಗನ್‌’ ಉಪಯೋಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಉಪ ಪೊಲೀಸ್‌ ಆಯುಕ್ತ ಬಿ.ಪಿ. ದಿನೇಶ್‌ ಕುಮಾರ್‌, ಎನ್‌ಎಚ್‌ ಎಐ ಯೋಜನ ನಿರ್ದೇಶಕ ಅಬ್ದುಲ್ಲ ಜಾವೇದ್‌ ಅಝ್ಮಿ, ಪಿಐಯು ಅನಿರುದ್ಧ ಕಾಮತ್‌, ಪಿಡಬ್ಲೂéಡಿ ಇಲಾಖೆಯಿಂದ ಎಇ ಲಾಯಿಡ್‌ ಡಿ’ಸಿಲ್ವ, ಸ್ಮಾರ್ಟ್‌ ಸಿಟಿ ವತಿಯಿಂದ ಎಇಇ ಮಂಜು ಕೀರ್ತಿ ಎಸ್‌. ಮನಪಾದಿಂದ ಇಇ ಜ್ಞಾನೇಶ್‌, ಎಇಇ ಎಂ.ಎನ್‌. ಶಿವಲಿಂಗಪ್ಪ, ಎಇಇ ಮಿಥುನ್‌ ಉಪಸ್ಥಿತರಿದ್ದರು.

ವೇಗ ಮಿತಿ ಸೂಚನ ಫಲಕ ಅಳವಡಿಕೆ
ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯ ಎಲ್ಲ ರಸ್ತೆಗಳಲ್ಲಿ ವೇಗದ ಮಿತಿಯನ್ನು ಮೀರುವ ವಾಹನ ಚಾಲಕರ ವಿರುದ್ಧ “ಮೊಬೈಲ್‌ ಸ್ಪೀಡ್‌ ರ್ಯಾಡರ್‌ ಗನ್‌’ ಮೂಲಕ ಮಂಗಳೂರು  ಸಂಚಾರ ಪೊಲೀಸರು ಪ್ರಕರಣಗಳನ್ನು ದಾಖಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ವಿವಿಧ ವಾಹನಗಳಿಗೆ ನಿಗದಿಪಡಿಸಿರುವ
ವೇಗದ ಮಿತಿಯ ಸೂಚನ ಫಲಕಗಳನ್ನು ರಸ್ತೆಗಳ ಬದಿಯಲ್ಲಿ ಸಾಕಷ್ಟು ಕಡೆಗಳಲ್ಲಿ ಅಳವಡಿಸುವಂತೆ ಸೂಚಿಸಿದೆ.

ರಸ್ತೆಗಳನ್ನು ಉಪಯೋಗಿಸುವ ಎಲ್ಲ ವಾಹನ ಚಾಲಕರು ವೇಗದ ಮಿತಿಯ ಸೂಚನಾ ಫಲಕಗಳಲ್ಲಿ ಕಾಣಿಸಿದ ಮಿತಿಗಿಂತ ಕಡಿಮೆ ವೇಗದಲ್ಲಿ ವಾಹನವನ್ನು ಚಲಾಯಿಸಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ನಗರ ಟ್ರಾμಕ್‌ ಪೊಲೀಸರ “ಅಪಘಾತ ತಡೆ ಅಭಿಯಾನ’ಕ್ಕೆ ಸಹಕರಿಸುವಂತೆ ಆಯುಕ್ತರು ಮನವಿ ಮಾಡಿದ್ದಾರೆ.

ವೇಗದ ಮಿತಿ ಹೀಗಿದೆ..
ಪ್ರಯಾಣಿಕರನ್ನು ಕರೆದೊಯ್ಯುವ 9ಕ್ಕಿಂತ ಕಡಿಮೆ ಸೀಟ್‌ ಹೊಂದಿರುವ ವಾಹನಗಳು ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ರಸ್ತೆ ವಿಭಜಕ ಹೊಂದಿರುವ 4 ಲೇನ್‌ಗಳಿಗಿಂತ ಜಾಸ್ತಿ ಇರುವ ರಸ್ತೆಗಳಲ್ಲಿ 100 ಕಿ.ಮೀ., ಪಾಲಿಕೆ, ನಗರಸಭೆ, ಪುರಸಭೆಯ ರಸ್ತೆಗಳಲ್ಲಿ 70 ಕಿ.ಮೀ., ಇತರ ರಸ್ತೆಗಳಲ್ಲಿ 70 ಕಿ.ಮೀ ವೇಗ ಮಿತಿ. 9ಕ್ಕಿಂತ ಹೆಚ್ಚು ಸೀಟ್‌ ಹೊಂದಿರುವ ವಾಹನಗಳು ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ರಸ್ತೆ ವಿಭಜಕ ಹೊಂದಿರುವ 4 ಲೇನ್‌ಗಳಿಗಿಂತ ಜಾಸ್ತಿ ಇರುವ ರಸ್ತೆಗಳಲ್ಲಿ 90 ಕಿ.ಮೀ., ಪಾಲಿಕೆ, ನಗರಸಭೆ, ಪುರಸಭೆಯ ರಸ್ತೆಗಳಲ್ಲಿ 60 ಕಿ.ಮೀ., ಮತ್ತು ಇತರ ರಸ್ತೆಗಳಲ್ಲಿ 60 ಕಿ.ಮೀ. ಎಲ್ಲ ರೀತಿಯ ಗೂಡ್ಸ್‌ ವಾಹನಗಳು ಮತ್ತು ಮೋಟಾರು ಸೈಕಲ್‌ಗ‌ಳು ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ರಸ್ತೆ ವಿಭಜಕ ಹೊಂದಿರುವ 4 ಲೇನ್‌ ಗಳಿಗಿಂತ ಜಾಸ್ತಿ ಇರುವ ರಸ್ತೆಗಳಲ್ಲಿ 80, ಪಾಲಿಕೆ, ನಗರಸಭೆ, ಪುರಸಭೆಯ ರಸ್ತೆಗಳಲ್ಲಿ 60 ಕಿ.ಮೀ. ಮತ್ತು ಇತರ ರಸ್ತೆಗಳಲ್ಲಿ 60 ಕಿ.ಮೀ., ತ್ರಿಚಕ್ರ ವಾಹನಗಳು ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ರಸ್ತೆ ವಿಭಜಕ ಹೊಂದಿರುವ 4 ಲೇನ್‌ಗಳಿಗಿಂತ ಜಾಸ್ತಿ ಇರುವ ರಸ್ತೆಗಳಲ್ಲಿ 50 ಕಿ.ಮೀ., ನಗರಸಭೆ, ಪುರಸಭೆಯ ರಸ್ತೆಗಳಲ್ಲಿ ಮತ್ತು ಇತರೆ ರಸ್ತೆಗಳಲ್ಲಿ 50 ಕಿ.ಮೀ. ವೇಗದ ಮಿತಿಯಲ್ಲಿ ಸಂಚರಿಸಬೇಕು.

ಟಾಪ್ ನ್ಯೂಸ್

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ

Shimoga; ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ

Sanju Movie Review

Sanju Movie Review: ಪ್ರೀತಿ ಪಯಣದಲ್ಲೊಂದು ವಿಷ ಘಳಿಗೆ

Tragedy: ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳು ಸೇರಿ ಒಂದೇ ಕುಟುಂಬದ ಐವರ ಶವ ಪತ್ತೆ…

Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ

2-bng

Bengaluru: ಹೂಡಿಕೆ ನೆಪದಲ್ಲಿ 6 ಕೋಟಿ ವಂಚನೆ: 10 ಜನ ಸೆರೆ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ

Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Mangaluru: ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ

Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ

MG Motor: ನೂತನ ಇವಿ ಕಾರು ಸಿಯುವಿ ಝಿಎಸ್‌ ವಿಂಡ್ಸರ್‌ ಮಾರುಕಟ್ಟೆಗೆ

MG Motor: ನೂತನ ಇವಿ ಕಾರು ಸಿಯುವಿ ಝಿಎಸ್‌ ವಿಂಡ್ಸರ್‌ ಮಾರುಕಟ್ಟೆಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Iceland Gerua:ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Iceland Gerua: ಭಾರತಕ್ಕೂ ಐಸ್‌ಲ್ಯಾಂಡ್‌ಗೂ ಯಾವ ಬಾದರಾಯಣ ಸಂಬಂಧ?!

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

4-dandeli

Dandeli: ಕಾಳಿ ನದಿಗೆ ಜಿಗಿದ ಮಹಿಳೆಯ ಮೃತದೇಹ ಪತ್ತೆ

Shimoga; ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ

Shimoga; ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ

3-aland

Aland: ಆಟೋ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.