Darshan ವಿಚಾರದಲ್ಲಿ ನನ್ನ ಹತ್ತಿರ ಯಾರೂ ಬಂದಿಲ್ಲ,ಬಿಜೆಪಿಯವರು ಸುಮ್ಮನೆ..: ಸಿದ್ದರಾಮಯ್ಯ

ಮತಗಳಿಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ...ಸೋಲಿಗೆ ಕಾರಣ...

Team Udayavani, Jun 14, 2024, 7:10 PM IST

1-csadsada

ಮೈಸೂರು: ‘ದರ್ಶನ್ ವಿಚಾರದಲ್ಲಿ ನನ್ನ ಹತ್ತಿರ ಯಾರೂ ಬಂದಿಲ್ಲ. ಯಾವ ಪ್ರಭಾವಿಗಳೂ ಬಂದಿಲ್ಲ.ಬಂದಿದ್ದಾರೆ ಎಂದು ಸುದ್ದಿ ಆಗಿದೇ ಅದು ಸುದ್ದಿ ಅಷ್ಟೇ.ಬಿಜೆಪಿಯವರು ಸುಮ್ಮನೆ ಹೇಳುತ್ತಾರೆ ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ ಶುಕ್ರವಾರ ಪ್ರತಿಕ್ರಿಯೆ ನೀಡಿದ್ದಾರೆ.

ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ‘ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ವಿಶೇಷ ವ್ಯವಸ್ಥೆ ಮಾಡಿದ್ದಾರಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿ,’ಪೊಲೀಸರು ಯಾವ ಕಾರಣಕ್ಕೆ ಶಾಮಿಯಾನ ಹಾಕಿದ್ದಾರೆ ಗೊತ್ತಿಲ್ಲ. ಸಾರ್ವಜನಿಕರಿಗೆ ಅದರಿಂದ ತೊಂದರೆಯಾಗಿರುವುದರ ಬಗ್ಗೆ ನನಗೆ ಮಾಹಿತಿ ಇಲ್ಲ.ಸಾರ್ವಜನಿಕರು ನನಗೆ ದೂರು ಕೊಟ್ಟಿಲ್ಲ.ಆ ಬಗ್ಗೆ ದೂರು ಬಂದಾಗ ನೋಡುತ್ತೇನೆ. ಸಾಮಾನ್ಯ ಜನರಿಗೆ ತೊಂದರೆ ಆಗದಂತೆ ಕೆಲಸ ಮಾಡುತ್ತೇವೆ.ನಾವು ಕಾನೂನು ಪ್ರಕಾರ ಕಾರ್ಯ ಮಾಡುತ್ತೇವೆ, ಅದನ್ನು ಬಿಟ್ಟು ಏನೂ ಮಾಡುವುದಿಲ್ಲ’ ಎಂದರು.

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ಅವರಿಗೆ ಜಾಮೀನು ಸಿಕ್ಕ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ ‘ಕೋರ್ಟ್ ನ ಆದೇಶದ ಬಗ್ಗೆ ನಾನು ಮಾತನಾಡುವುದಿಲ್ಲ.ನಾನು ಮತ್ತೆ ಮತ್ತೆ ಸ್ಪಷ್ಟಪಡಿಸುತ್ತೇನೆ, ಕಾಂಗ್ರೆಸ್ ಯಾವತ್ತೂ ದ್ವೇಷದ ರಾಜಕಾರಣ ಮಾಡುವುದಿಲ್ಲ.ಕಾನೂನು ರೀತಿ ಕೆಲಸ ಮಾಡುತ್ತೇವೆ.ಕೋರ್ಟ್ ಆದೇಶಕ್ಕೆ ತಲೆಬಾಗುತ್ತೇವೆ. ವಿರೋಧ ಪಕ್ಷಗಳ ಎಲ್ಲಾ ಆರೋಪಗಳಿಗೆ ನಾನು ಉತ್ತರ ಕೊಡಬೇಕೆಂದೇನಿಲ್ಲ’ಎಂದರು.

ಗ್ಯಾರಂಟಿ ನಿಲ್ಲುವುದಿಲ್ಲ
ಮತಗಳಿಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ.ಯಾವುದೇ ಕಾರಣಕ್ಕೂ ಅದು ನಿಲ್ಲುವುದಿಲ್ಲ, ಪುನರ್ ಪರಿಶೀಲನೆ ಆಗುವುದಿಲ್ಲ.ಬಡವರಿಗಾಗಿ ಜಾರಿಗೆ ತಂದಿದ್ದೇವೆ‌ ಎಂದರು.

ನಮಗೆ ಲೋಕಸಭಾ ಸ್ಥಾನಗಳಲ್ಲಿ ಹಿನ್ನಡೆಯಾಗಿರಬಹುದು‌ ಆದರೆ ಮತಗಳಿಕೆ ವಿಚಾರದಲ್ಲಿ 13% ಹೆಚ್ಚಾಗಿದೆ.ಮೈಸೂರು ಸೋತಿರುವುದು ಸತ್ಯ. ಚಾಮರಾಜನಗರ ಗೆದಿದ್ದೇವೆ‌. ಸೋಲಿಗೆ ಕಾರಣ ಮಾಧ್ಯಮದವರಿಗೆ ಹೇಳುವುದಿಲ್ಲ.ಪಕ್ಷದ ಹೈಕಮಾಂಡ್ ಗೆ ನಾನು ಹೇಳುತ್ತೇನೆ. ರಾಜ್ಯದಲ್ಲಿ‌ 1 ಇದ್ದ ಸ್ಥಾನ ಹೆಚ್ಚಿಸಿ 9 ಸ್ಥಾನ ಗೆದಿದ್ದೇವೆ’ ಎಂದರು.

7ನೇ ವೇತನ ಆಯೋಗದ ಪ್ರಶ್ನೆ ಕೇಳುತ್ತಿದ್ದಂತೆ ಸಿಎಂ ಪ್ರತಿಕ್ರಿಯೆ ನೀಡದೆ ಹೊರಟರು. ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ಕೆ.ವೆಂಕಟೇಶ್, ಸಂಸದ ಸುನಿಲ್ ಬೋಸ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ

Nirmala Sitharaman

Bengaluru; ಚುನಾವಣಾ ಬಾಂಡ್‌ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್‌ ವಿರುದ್ದ ಎಫ್‌ಐಆರ್

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ

moksha Kushal recent photoshoot

Moksha Kushal: ಹಾಟ್‌ ಫೋಟೋಶೂಟ್‌ನಲ್ಲಿ ಮೋಕ್ಷಾ ಮಿಂಚು

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.