Boliyar Incident:ಬಿಜೆಪಿಯಿಂದ ಶಾಂತಿ ಕದಡುವ ಕೆಲಸ: ಮಂಜುನಾಥ ಭಂಡಾರಿ


Team Udayavani, Jun 15, 2024, 12:49 AM IST

Boliyar Incident:ಬಿಜೆಪಿಯಿಂದ ಶಾಂತಿ ಕದಡುವ ಕೆಲಸ: ಮಂಜುನಾಥ ಭಂಡಾರಿ

ಮಂಗಳೂರು: ಬೋಳಿಯಾರುವಿನಲ್ಲಿ ನಡೆದ ಘಟನೆಯು ಬಿಜೆಪಿಯವರ ಪೂರ್ವಯೋಜಿತ ಕೃತ್ಯ.

ಬಿಜೆಪಿಯು ವಿಜಯೋತ್ಸವ ವನ್ನು ಧಾರ್ಮಿಕ ಕೇಂದ್ರದ ಬಳಿ ಪದೇ ಪದೇ ಘೋಷಣೆ ಹಾಕುವ ಮೂಲಕ ಆಚರಿಸಿ ಜಿಲ್ಲೆಯಲ್ಲಿ ಶಾಂತಿ ಕದಡುವ ಕೆಲಸ ಮಾಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಆರೋಪಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಘಟನೆಗೆ ಸಂಬಂಧಿಸಿ ನಿಷ್ಪಕ್ಷಪಾತ ತನಿಖೆಯಾಗಬೇಕು. ಬಿಜೆಪಿಯವರಿಗೆ ಜಿಲ್ಲೆಯಲ್ಲಿ ಶಾಂತಿ ನೆಲೆಗೊಳ್ಳುವುದು ಬೇಡವೇ? ಜಿಲ್ಲೆಯನ್ನು ಪ್ರಯೋಗ ಶಾಲೆ ಮಾಡುತೀರಾ? ಪ್ರಚೋದನಾಕಾರಿ ಹೇಳಿಕೆಗಳನ್ನು ನಿಲ್ಲಿಸಿ. ಮಂಗಳೂರನ್ನು ಉತ್ತಮ ನಗರ ಮಾಡಲು ಪ್ರಯತ್ನಿಸಿ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ಪದ್ಮರಾಜ್‌ ಆರ್‌. ಮಾತನಾಡಿ, ಬಿಜೆಪಿಯವರಿಗೆ ಜಿಲ್ಲೆಯ ಅಭಿವೃದ್ಧಿ ಬೇಕಿಲ್ಲ. ಬೋಳಿಯಾರು ಘಟನೆ ಹಿಂದಿರುವ ಬಿಜೆಪಿ ತಂತ್ರಗಾರಿಕೆ ಜನಸಾಮಾನ್ಯರಿಗೆ ಅರ್ಥವಾಗಿದೆ ಎಂದರು.

ಜಿಲ್ಲಾಧ್ಯಕ್ಷರ ರಾಜೀನಾಮೆ ಸ್ವೀಕರಿಸಿಲ್ಲ
ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ 2023ರ ವಿಧಾನಸಭಾ ಚುನಾವಣೆಗೆ ಮುನ್ನವೇ ಕೆಪಿಸಿಸಿ ಅಧ್ಯಕ್ಷರಿಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ಹೈಕಮಾಂಡ್‌ ಸ್ವೀಕರಿಸಿಲ್ಲ. ಡಿಕೆಶಿ ಅವರು ಹರೀಶ್‌ ಕುಮಾರ್‌ ಅವರಿಗೆ ಚುನಾವಣೆ ತನಕ ಮುಂದುವರಿಯಲು ಹೇಳಿದ್ದರು. ಇದಾದ ಬಳಿಕ ಲೋಕಸಭಾ ಚುನಾವಣೆ ಮುನ್ನ ಸ್ವತಃ ನನಗೆ ರಾಜೀನಾಮೆ ನೀಡಿದ್ದರು. ಆದರೆ ಚುನಾವಣೆ ನಿಭಾವಣೆಗೆ ಅನುಭವವಿರುವವರೇ ಬೇಕು ಎನ್ನುವ ಕಾರಣ ಮುಂದುವರಿಯಲು ಹೈಕಮಾಂಡ್‌ ಹೇಳಿತ್ತು ಎಂದು ಮಂಜುನಾಥ ಭಂಡಾರಿ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಪ್ರಾರ್ಥನಾ ಮಂದಿರಗಳಲ್ಲಿ ಶಸ್ತ್ರಾಸ್ತ್ರಗಳಿವೆ ಎಂದು ಆರೋಪಿಸಿರುವ ಶಾಸಕ ಶಾಸಕ ಹರೀಶ್‌ ಪೂಂಜ ಅವರು ಅದನ್ನು ಸಾಬೀತುಪಡಿಸಲಿ ಅಥವಾ ಸಾರ್ವಜನಿಕವಾಗಿ ಕ್ಷಮೆ ಕೇಳಲಿ ಎಂದು ಜಿಲ್ಲಾ ಕಾಂಗ್ರೆಸ್‌ ಅಲ್ಪಸಂಖ್ಯಾಕ ಘಟಕ ಅಧ್ಯಕ್ಷ ಶಾಹುಲ್‌ ಹಮೀದ್‌ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಮತಾ ಗಟ್ಟಿ, ಜಿಲ್ಲಾ ಕಾಂಗ್ರೆಸ್‌ ಮಹಿಳಾ ಅಧ್ಯಕ್ಷೆ ಶಾಲೆಟ್‌ ಪಿಂಟೋ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.