Charmady Ghat: ಎರಡನೇ ದಿನವೂ ಕಾಡಾನೆ ಪ್ರತ್ಯಕ್ಷ
Team Udayavani, Jun 15, 2024, 1:00 AM IST
ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಒಂದು ತಿಂಗಳ ಹಿಂದೆ ವಾರವೊಂದರಲ್ಲಿ ನಾಲ್ಕು ಬಾರಿ ಕಾಣಿಸಿಕೊಂಡಿದ್ದ ಒಂಟಿ ಸಲಗ ಈಗ ಕಳೆದ ಎರಡು ದಿನಗಳಿಂದ ಮತ್ತೆ ವಾಹನ ಸವಾರರಿಗೆ ಪ್ರತ್ಯಕ್ಷವಾಗುತ್ತಿದೆ.
ಬುಧವಾರ ರಾತ್ರಿ ಬಸ್ ಸಂಚಾರಕ್ಕೆ ತಡೆಯೊಡ್ಡಿದ್ದ ಕಾಡಾನೆ ಶುಕ್ರವಾರ ಮಧ್ಯಾಹ್ನ ಒಂದು ಗಂಟೆಯ ಸುಮಾರಿಗೆ ರಸ್ತೆ ಬದಿ ಮತ್ತೆ ಕಾಣಸಿಕ್ಕಿದೆ. ಈ ಹಿಂದೆ ರಸ್ತೆಯ ಅಂಚಿನಲ್ಲಿ ಪ್ರತ್ಯಕ್ಷವಾಗುತ್ತಿದ್ದ ಸಲಗ ಶುಕ್ರವಾರ ಘಾಟಿಯ ಮೂರನೇ ತಿರುವಿನ ರಸ್ತೆ ಬದಿ ಇರುವ ಅರಣ್ಯ ಇಲಾಖೆಯ ಔಷಧ ಸಸ್ಯಗಳ ಸಂರಕ್ಷಣ ವನದ ಗೇಟಿನ ಮುಂಭಾಗವೇ ವಿಹಾರ ಆರಂಭಿಸಿತ್ತು.
ಆನೆ ಸುಮಾರು ಒಂದು ತಾಸಿಗಿಂತ ಅಧಿಕ ಹೊತ್ತು ಅದೇ ಸ್ಥಳದಲ್ಲಿ ವಿರಮಿಸಿತ್ತು. ಆನೆ ಗೇಟ್ ಮುರಿದು ಬರುವ ಸಾಧ್ಯತೆ ಇದ್ದ ಕಾರಣ ವಾಹನ ಸವಾರರು ಭೀತಿಗೊಳಗಾದರು. ಅರಣ್ಯ ಇಲಾಖೆ ಸಿಬಂದಿ ಆಗಮಿಸಿ ಆನೆಯನ್ನು ಅರಣ್ಯದತ್ತ ಅಟ್ಟಬೇಕಾಯಿತು.
ಬುಧವಾರ ರಾತ್ರಿ ಘಾಟಿಯ ಏಳು ಹಾಗೂ ಎಂಟನೇ ತಿರುವಿನ ಮಧ್ಯೆ ಕಾಡಾನೆ ಸರಕಾರಿ ಬಸ್ಗೆ ಅಡ್ಡ ನಿಂತ ಕಾರಣ ಅರ್ಧ ತಾಸಿಗಿಂತ ಅಧಿಕ ಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಶುಕ್ರವಾರ ಇಲ್ಲಿಂದ ಸುಮಾರು 4 ಕಿ.ಮೀ. ಕೆಳಭಾಗದಲ್ಲಿ ಕಾಡಾನೆ ಕಂಡು ಬಂದಿದೆ.
ಎರಡು ತಿಂಗಳಿನಿಂದ ಘಾಟಿಯಲ್ಲಿ ಹಗಲು-ರಾತ್ರಿ ಕಾಡಾನೆ ಸಂಚಾರ ನಡೆಸುತ್ತಿರುವುದು ಸಾಮಾನ್ಯ ವೆಂಬಂತಾಗಿದೆ. ಇದುವರೆಗೂ ಈ ಕಾಡಾನೆ ಯಾವುದೇ ವಾಹನಕ್ಕೆ ತೊಂದರೆ ಕೊಟ್ಟಿಲ್ಲ. ತನ್ನ ಪಾಡಿಗೆ ಆಹಾರ ಸೇವಿಸಿ ತೆರಳುತ್ತಿದೆ.
ಆದರೆ ಮದವೇರಿ ಮಧ್ಯರಾತ್ರಿ ಸಂಚರಿಸುವ ವಾಹನಗಳ ಮೇಲೆ ದಾಳಿ ಮಾಡಿದರೆ ಎಂಬ ಭಯ ಸವಾರರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.