Charmady Ghat: ಎರಡನೇ ದಿನವೂ ಕಾಡಾನೆ ಪ್ರತ್ಯಕ್ಷ


Team Udayavani, Jun 15, 2024, 1:00 AM IST

Charmady Ghat: ಎರಡನೇ ದಿನವೂ ಕಾಡಾನೆ ಪ್ರತ್ಯಕ್ಷ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಒಂದು ತಿಂಗಳ ಹಿಂದೆ ವಾರವೊಂದರಲ್ಲಿ ನಾಲ್ಕು ಬಾರಿ ಕಾಣಿಸಿಕೊಂಡಿದ್ದ ಒಂಟಿ ಸಲಗ ಈಗ ಕಳೆದ ಎರಡು ದಿನಗಳಿಂದ ಮತ್ತೆ ವಾಹನ ಸವಾರರಿಗೆ ಪ್ರತ್ಯಕ್ಷವಾಗುತ್ತಿದೆ.

ಬುಧವಾರ ರಾತ್ರಿ ಬಸ್‌ ಸಂಚಾರಕ್ಕೆ ತಡೆಯೊಡ್ಡಿದ್ದ ಕಾಡಾನೆ ಶುಕ್ರವಾರ ಮಧ್ಯಾಹ್ನ ಒಂದು ಗಂಟೆಯ ಸುಮಾರಿಗೆ ರಸ್ತೆ ಬದಿ ಮತ್ತೆ ಕಾಣಸಿಕ್ಕಿದೆ. ಈ ಹಿಂದೆ ರಸ್ತೆಯ ಅಂಚಿನಲ್ಲಿ ಪ್ರತ್ಯಕ್ಷವಾಗುತ್ತಿದ್ದ ಸಲಗ ಶುಕ್ರವಾರ ಘಾಟಿಯ ಮೂರನೇ ತಿರುವಿನ ರಸ್ತೆ ಬದಿ ಇರುವ ಅರಣ್ಯ ಇಲಾಖೆಯ ಔಷಧ ಸಸ್ಯಗಳ ಸಂರಕ್ಷಣ ವನದ ಗೇಟಿನ ಮುಂಭಾಗವೇ ವಿಹಾರ ಆರಂಭಿಸಿತ್ತು.

ಆನೆ ಸುಮಾರು ಒಂದು ತಾಸಿಗಿಂತ ಅಧಿಕ ಹೊತ್ತು ಅದೇ ಸ್ಥಳದಲ್ಲಿ ವಿರಮಿಸಿತ್ತು. ಆನೆ ಗೇಟ್‌ ಮುರಿದು ಬರುವ ಸಾಧ್ಯತೆ ಇದ್ದ ಕಾರಣ ವಾಹನ ಸವಾರರು ಭೀತಿಗೊಳಗಾದರು. ಅರಣ್ಯ ಇಲಾಖೆ ಸಿಬಂದಿ ಆಗಮಿಸಿ ಆನೆಯನ್ನು ಅರಣ್ಯದತ್ತ ಅಟ್ಟಬೇಕಾಯಿತು.

ಬುಧವಾರ ರಾತ್ರಿ ಘಾಟಿಯ ಏಳು ಹಾಗೂ ಎಂಟನೇ ತಿರುವಿನ ಮಧ್ಯೆ ಕಾಡಾನೆ ಸರಕಾರಿ ಬಸ್‌ಗೆ ಅಡ್ಡ ನಿಂತ ಕಾರಣ ಅರ್ಧ ತಾಸಿಗಿಂತ ಅಧಿಕ ಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಶುಕ್ರವಾರ ಇಲ್ಲಿಂದ ಸುಮಾರು 4 ಕಿ.ಮೀ. ಕೆಳಭಾಗದಲ್ಲಿ ಕಾಡಾನೆ ಕಂಡು ಬಂದಿದೆ.

ಎರಡು ತಿಂಗಳಿನಿಂದ ಘಾಟಿಯಲ್ಲಿ ಹಗಲು-ರಾತ್ರಿ ಕಾಡಾನೆ ಸಂಚಾರ ನಡೆಸುತ್ತಿರುವುದು ಸಾಮಾನ್ಯ ವೆಂಬಂತಾಗಿದೆ. ಇದುವರೆಗೂ ಈ ಕಾಡಾನೆ ಯಾವುದೇ ವಾಹನಕ್ಕೆ ತೊಂದರೆ ಕೊಟ್ಟಿಲ್ಲ. ತನ್ನ ಪಾಡಿಗೆ ಆಹಾರ ಸೇವಿಸಿ ತೆರಳುತ್ತಿದೆ.

ಆದರೆ ಮದವೇರಿ ಮಧ್ಯರಾತ್ರಿ ಸಂಚರಿಸುವ ವಾಹನಗಳ ಮೇಲೆ ದಾಳಿ ಮಾಡಿದರೆ ಎಂಬ ಭಯ ಸವಾರರದ್ದಾಗಿದೆ.

ಟಾಪ್ ನ್ಯೂಸ್

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

05856

Sullia: ಮರ್ಕಂಜ; ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Puttur: ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನ: ದೂರು ದಾಖಲು

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

Aranthodu: ಮಿತ್ತಡ್ಕದ ಮಹಿಳೆ ನಾಪತ್ತೆ; ಬಾವಿಯಲ್ಲಿ ಹುಡುಕಾಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.