19ಕ್ಕೆ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ; ದಿಲ್ಲಿ ಪೊಲೀಸರಿಗೆ ನೋಟಿಸ್
Team Udayavani, Jun 15, 2024, 6:20 AM IST
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಅಕ್ರಮ ಆರೋಪದಡಿ ಇ.ಡಿ. ಬಂಧನ ಪ್ರಕರಣದಲ್ಲಿ ಜಾಮೀನು ಕೋರಿದ ದಿಲ್ಲಿ ಸಿಎಂ ಕೇಜ್ರಿವಾಲ್ ಅರ್ಜಿ ವಿಚಾರಣೆ ಜೂ.19ರಂದು ನಡೆಯಲಿದೆ. ಇದೇ ವೇಳೆ, ಕೇಜ್ರಿವಾಲ್ರ ಆರೋಗ್ಯ ತಪಾಸಣೆಗೆ ಸಂಬಂಧಿಸಿದಂತೆ ರಚಿಸಲಾಗಿರುವ ವೈದ್ಯರ ತಂಡದ ಜತೆಗೆ ಆನ್ಲೈನ್ ಸಮಾಲೋಚನೆಯಲ್ಲಿ ಪತ್ನಿ ಸುನೀತಾ ಕೇಜ್ರಿವಾಲ್ ಸೇರಿಕೊಳ್ಳಲು ಆಕ್ಷೇಪ ಇದೆಯೇ ಎಂದು ಹೈಕೋರ್ಟ್ ತಿಹಾರ್ ಜೈಲಧಿಕಾರಿಗಳನ್ನು ಪ್ರಶ್ನಿಸಿದೆ.
ಕೇಜ್ರಿ ಆಪ್ತನಿಗೆ ಬೇಲ್ ವಿಚಾರಣೆ: ದಿಲ್ಲಿ ಪೊಲೀಸರಿಗೆ ನೋಟಿಸ್
ರಾಜ್ಯಸಭಾ ಸಂಸದೆ ನಾಯಕಿ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಕೇಜ್ರಿವಾಲ್ ಮಾಜಿ ಆಪ್ತ ಸಹಾಯಕ ಬಿಭವ್ ಕುಮಾರ್ ಅವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಈ ಅರ್ಜಿಯ ವಿಚಾರದಲ್ಲಿ ದಿಲ್ಲಿ ಪೊಲೀಸರ ನಿಲುವು ಏನು ಎಂದು ದಿಲ್ಲಿ ಹೈಕೋರ್ಟ್ ಶುಕ್ರವಾರ ಪ್ರಶ್ನೆ ಮಾಡಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ| ಅಮಿತ್ ಶರ್ಮಾ ನೇತೃತ್ವದ ರಜಾಕಾಲದ ನ್ಯಾಯಪೀಠ, ಪ್ರಕರಣದ ಪ್ರಸ್ತುತ ಸ್ಥಿತಿಗತಿಯ ಕುರಿತಾಗಿ ವರದಿ ನೀಡಬೇಕು ಹಾಗೂ ಈ ಜಾಮೀನು ಅರ್ಜಿ ಕುರಿತು ತಮ್ಮ ನಿಲುವೇನು ಎಂದು ಸ್ಪಷ್ಟಪಡಿಸಬೇಕೆಂದು ಪೊಲೀಸರಿಗೆ ನೋಟಿಸ್ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
Crime: ಸ್ನೇಹಿತನನ್ನು ಕಟ್ಟಡದಿಂದ ಕೆಳಗೆ ದೂಡಿ ಕೊಲೆಗೈದ ಆರೋಪಿ ಸೆರೆ
Bantwala: ಮರ ಬಿದ್ದು ಕೋಳಿ ಫಾರಂ ಜಖಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.