Theft Case: ಕದ್ದ16 ಲಕ್ಷ ಬೆಲೆಯ ಚಿನ್ನ ಕರಗಿಸಿ ಗಟ್ಟಿ ಮಾಡಿಟ್ಟಿದ್ದ ಕೆಲಸದಾಕೆ ಸೆರೆ!


Team Udayavani, Jun 15, 2024, 11:40 AM IST

2

ಬೆಂಗಳೂರು: ತಾನು ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣ ಕದ್ದು ಉಂಡ ಮನೆಗೆ ಎರಡು ಬಗೆದಿದ್ದ ಮಹಿಳೆಯನ್ನು ಹಲಸೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ʼಜೋಗುಪಾಳ್ಯ ನಿವಾಸಿ ಮಮತಾ (36) ಬಂಧಿತ ಆರೋಪಿ. ಈಕೆಯಿಂದ 16 ಲಕ್ಷ ರೂಪಾಯಿ ಮೌಲ್ಯದ 225 ಗ್ರಾಂ ತೂಕದ 3 ಚಿನ್ನದ ಗಟ್ಟಿಗಳು ಹಾಗೂ 2 ಚಿನ್ನದ ಬಳೆಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಜೋಗುಪಾಳ್ಯದ ಉದ್ಯಮಿ ಅಮರೇಂದ್ರ ಮನೆಯಲ್ಲಿ ಮಮತಾ ಕೆಲ ವರ್ಷಗಳಿಂದ ಬಾಣಸಿಗರಾಗಿ ಕೆಲಸ ಮಾಡಿಕೊಂಡಿದ್ದಳು. 2023ರ ನ.25ರಂದು ಅಮರೇಂದ್ರ ಕುಟುಂಬದ ಸದಸ್ಯರ ಜತೆಗೆ ಹೊರಗಡೆ ಕಾರ್ಯಕ್ರಮಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಮಮತಾ ಮನೆಯ ಕೊಠಡಿಯಲ್ಲಿದ್ದ ಕೀ ತೆಗೆದುಕೊಂಡು ಚಿನ್ನಾಭರಣ ಕದ್ದಿದ್ದಳು. ಕದ್ದ ಚಿನ್ನಾಭರಣಗಳನ್ನು ಕರಗಿಸಿ ಚಿನ್ನದ ಗಟ್ಟಿಗಳಾಗಿ ಮಾರ್ಪಡಿಸಿ ತನ್ನ ಮನೆಯಲ್ಲೇ ಇಟ್ಟುಕೊಂಡಿದ್ದಳು. ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಬಂದು ಹಲವು ದಿನ ಕಳೆದರೂ ಮಾಲೀಕರು ಅಲ್ಮೇರಾದಲ್ಲಿದ್ದ ಚಿನ್ನಾಭರಣ ಕಳುವಾಗಿರುವುದನ್ನು ಗಮನಿಸಿರಲಿಲ್ಲ. ಜೂನ್‌ 7ರಂದು ಅಮರೇಂದ್ರ ಕಬೋರ್ಡ್‌ ತೆರೆದು ನೋಡಿದಾಗ ಚಿನ್ನಾಭರಣ ಕಳುವಾಗಿರುವುದು ಗೊತ್ತಾಗಿದೆ.

ಈ ಸಂಬಂಧ ಹಲಸೂರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅನುಮಾನದ ಮೇರೆಗೆ ಕೆಲಸದಾಕೆ ಮಮತಾಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಕೆಲಸದಾಕೆ ಮೇಲೆ ಅನುಮಾನ ವ್ಯಕ್ತಪಡಿಸಿದ್ದ ಮಾಲೀಕ: 2023 ನವೆಂಬರ್‌ 25 ರಂದು ಮಮತಾ ಕಳ್ಳತನ ಮಡಿದ್ದರೂ ಅಮರೇಂದ್ರ ಅವರಿಗೆ ಕೃತ್ಯ ನಡೆದ 6 ತಿಂಗಳ ಬಳಿಕ ಚಿನ್ನಾಭರಣ ಕಳ್ಳತನವಾಗಿರುವುದು ಗೊತ್ತಾಗಿದೆ. ತಾವು ಕುಟುಂಬಸ್ಥರ ಜೊತೆಗೆ ಹೋಗಿದ್ದಾಗ ಮನೆಯಲ್ಲಿ ಮಮತಾ ಒಬ್ಬರೇ ಇದ್ದ ಹಿನ್ನೆಲೆಯಲ್ಲಿ ಆಕೆಯ ಮೇಲೆಯೇ ಅಮರೇಂದ್ರ ಅವರಿಗೂ ಅನುಮಾನ ಮೂಡಿತ್ತು. ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದರು. ಇತ್ತ ಪೊಲೀಸರು ಮಮತಾಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ 5 ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆಕೆಯ ಮನೆಯಲ್ಲಿ 3 ಚಿನ್ನದ ಗಟ್ಟಿಗಳು ಹಾಗೂ 2 ಚಿನ್ನದ ಬಳೆಗಳು ಬಚ್ಚಿಟ್ಟಿರುವುದು ಗೊತ್ತಾಗಿದೆ.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.