ಮೂಡುಬಿದಿರೆ: ಆಳ್ವಾಸ್‌ನಲ್ಲಿ ಹಲಸು, ಹಣ್ಣು, ಆಹಾರೋತ್ಸವಗಳ ಸಮೃದ್ಧಿ


Team Udayavani, Jun 15, 2024, 4:05 PM IST

ಮೂಡುಬಿದಿರೆ: ಆಳ್ವಾಸ್‌ನಲ್ಲಿ ಹಲಸು, ಹಣ್ಣು, ಆಹಾರೋತ್ಸವಗಳ ಸಮೃದ್ಧಿ

ಮೂಡುಬಿದಿರೆ: ಮೂಡುಬಿದಿರೆ ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ವೇದಿಕೆಯಲ್ಲಿ ಕೃಷಿಋಷಿ ಮಿಜಾರುಗುತ್ತು ಆನಂದ ಆಳ್ವ ಸ್ಮರಣಾರ್ಥ ಏರ್ಪಡಿಸಲಾಗಿರುವ ಎರಡನೇ ವರ್ಷದ “ಸಮೃದ್ಧಿ’-ಹಲಸು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಹಾಗೂ ಕೃಷಿ ಪರಿಕರಗಳ ಪ್ರದರ್ಶನ ಮತ್ತು ಮಾರಾಟ ಮಹಾಮೇಳ ಶುಕ್ರವಾರ ಪ್ರಾರಂಭವಾಗಿದೆ. ರವಿವಾರ ಸಂಜೆಯವರೆಗೆ ಮಹಾಮೇಳ ನಡೆಯಲಿದೆ.

ಹಲಸು, ಮಾವು ಪ್ರಧಾನವಾಗಿದ್ದು ರಂಬುಟಾನ್‌, ಮೆಂಗೋಸ್ಟಿನ್‌, ಅಬಿಯೂ, ಮಚ್ಚೋವಾ ಮೊದಲಾದ ದೇಶೀಯ, ವಿದೇಶಿಯ ಹಣ್ಣಿನ ಗಿಡಗಳ ಮಹಾ ಸಂಗ್ರಹವೇ ಇಲ್ಲಿದೆ. ವಿಶೇಷವಾಗಿ ಜಾಕ್‌ ಅನಿಲ್‌ ಅವರ ಸಂಶೋಧನೆ “ನಿನ್ನಿತಾಯ್‌’ ಹಲಸು, ಗಿಡ್ಡನೆ ತಳಿ, ಒಂದೂವರೆ ವರ್ಷ ದಲ್ಲಿಯೇ ಫಲವೀಯುವ ತಳಿ ಸೇರಿದಂತೆ ಬಹು ವಿಧ ಹಣ್ಣು ಹಂಪಲುಗಳ ಕಸಿಕಟ್ಟಿದ ಗಿಡಗಳು ಜನಮನ ಸೆಳೆಯುತ್ತಿವೆ. ಸಾಕುವ ವಿಧಾನವನ್ನೂ ಎಚ್ಚರಿಕೆಯ ಕ್ರಮಗಳನ್ನೂ ಅವರು, ಅವರ ಸಿಬಂದಿ ತಿಳಿಸಿಕೊಡುತ್ತಿದ್ದಾರೆ.

ನೇತ್ರಾವತಿ ಮತ್ತಿತರ ಹೆಸರಿನ ನರ್ಸರಿಗಳಿಂದಲೂ ಹಣ್ಣು, ಹೂವುಗಳ ವೈವಿಧ್ಯಮಯ ಗಿಡಗಳು ಸ್ಟಾಲ್‌ಗ‌ಳಲ್ಲಿವೆ. ಸಾಯಿ ಎಂಟರ್‌ ಪ್ರೈಸಸ್‌ನವರ ಕೃಷಿ ಸಲಕರಣೆಗಳು, ಹೊಸ ಹೊಸ ಸಾಮಗ್ರಿಗಳು ಗಮನ ಸೆಳೆಯುತ್ತಿವೆ. ಹತ್ತಿರದ ಮಳಿಗೆಗಳಲ್ಲಿ ಜೋನಿ ಬೆಲ್ಲ, ಸಾವಯವ ಬೆಲ್ಲದಿಂದ ಹಿಡಿದು ಆಯುರ್ವೇದ ಔಷಧಗಳ ಸಹಿತ ಆರೋಗ್ಯಪೂರ್ಣ ಆಹಾರ ವಸ್ತುಗಳು
ಪ್ರದರ್ಶನಾಂಗಣದಲ್ಲಿವೆ.

ಆಳ್ವಾಸ್‌ ಪ್ರಕೃತಿ ಚಿಕಿತ್ಸೆ ಯೋಗವಿಜ್ಞಾನ ಕಾಲೇಜಿನವರು ಹಲಸು ಮತ್ತು ಇತರ ಹಣ್ಣುಗಳಿಂದ ತಯಾರಿಸಿದ ಹಲ್ವ, ಬರ್ಫಿ, ಹೋಳಿಗೆ, ಹಲಸಿನ ಬೀಜದ ಖಾದ್ಯ ವಸ್ತುಗಳನ್ನು ಪ್ರದರ್ಶನಕ್ಕಿಟ್ಟಿದ್ದಾರೆ.

ತಯಾರಿಕೆಯ ವಿಧಾನಗಳನ್ನು ಆಸಕ್ತರಿಗೆ ತಿಳಿಸುತ್ತಿದ್ದಾರೆ. ನಾಡಿನೆಲ್ಲೆಡೆಯಿಂದ ತರಿಸ ಲಾದ ಬಹುಬಗೆಯ ಹಲಸು ಮಾರಾಟವೂ ನಡೆಯುತ್ತಿದೆ. ಉಳಿದಂತೆ ತಿಂಡಿ, ತಿನಿಸುಗಳ ಆಹಾರೋತ್ಸವ, ಗೃಹೋಪಯೋಗಿ ವಸ್ತುಗಳು, ಬಟ್ಟೆ ಬರೆ, ಫ್ಯಾನ್ಸಿ ಸಾಮಗ್ರಿಗಳು ಸೇರಿ ಇದೊಂದು ಸಮಗ್ರ ದೇಸೀ ಸಂಸ್ಕೃತಿಯನ್ನು ಪರಿಚಯಿಸುವ ಮಹಾ ಮೇಳ “ಸಮೃದ್ಧಿ’ ಎನ್ನುವ ಕಾರಣ ದಿಂದಾಗಿ ದೂರದೂರಿನ ಜನರನ್ನೂ ಇತ್ತ ಸೆಳೆಯುತ್ತಲಿದೆ. ಎಂದಿನಂತೆ ಆಳ್ವಾಸ್‌ ಕ್ಯಾಂಪಸ್‌ನ ವಿದ್ಯಾರ್ಥಿಗಳು, ಸಿಬಂದಿಗಳ ಸಹಿತ 25,000ಕ್ಕೂ ಅಧಿಕ ಮಂದಿಯ ಆಡುಂಬೊಲವಾಗಿದೆ.

ಟಾಪ್ ನ್ಯೂಸ್

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ ಸಿಗಲಿದೆ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ

Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್‌ ! ತಯಾರಕರ ವಿರುದ್ಧ ಕಾನೂನು ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Mangaluru ವಿಮಾನ ನಿಲ್ದಾಣ: ಪರಿಹಾರ ಕಾಣದ ಕಾರ್ಗೋ ಸಮಸ್ಯೆ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Kambala ಓಟಗಾರನಿಗೆ “ಕೋಣ’ ನಿಗದಿ; ಕಂಬಳ ಸಮಿತಿಯಿಂದ ಹೊಸ ನಿಯಮಾವಳಿ

Leopard ಮೊಸಳೆ ಹಿಡಿಯುವ ದೃಶ್ಯ ಎಂಬ ಸುಳ್ಳು ಸುದ್ದಿ ವೈರಲ್‌

Leopard ಮೊಸಳೆ ಹಿಡಿಯುವ ದೃಶ್ಯ ಎಂಬ ಸುಳ್ಳು ಸುದ್ದಿ ವೈರಲ್‌

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

Punjalkatte ಸೋರುತಿಹುದು ಪಾಂಡವರಕಲ್ಲು ಅಂಗನವಾಡಿ ಕೇಂದ್ರ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898ಎಡಿ’

Box office: ರಿಲೀಸ್‌ ಆದ ನಾಲ್ಕೇ ದಿನದಲ್ಲಿ 500 ಕೋಟಿ ರೂ. ಗಳಿಸಿದ ʼಕಲ್ಕಿ 2898 ಎಡಿ’

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್

Untitled-1

World Doctor’s Day: ನನ್ನ ಆರೋಗ್ಯ ನನ್ನ ಕೈಯ್ಯಲ್ಲಿ!

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.