Kaup:ಜೂ.29,30:ಪ್ರಥಮ ಬಾರಿಗೆ ರಾಷ್ಟ್ರಮಟ್ಟದ ಒಪನ್ ಫಿಡೇ ರೇಟೆಡ್ ರ್‍ಯಾಫಿಡ್ ಚೆಸ್ ಸ್ಪರ್ಧೆ


Team Udayavani, Jun 18, 2024, 3:31 PM IST

14-Kaup

ಕಾಪು: ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು ಮತ್ತು ಉಡುಪಿ ಇವರ ವತಿಯಿಂದ ಜೂ. 29 ಮತ್ತು 30 ರಂದು ಕಾಪು ಶ್ರೀ ಹಳೆ ಮಾರಿಯಮ್ಮ ಸಭಾಭವನದಲ್ಲಿ ಕಾಪುವಿನ ಪ್ರಪ್ರಥಮ ರಾಷ್ಟ್ರ ಮಟ್ಟದ ಒಪನ್ ಫಿಡೇ ರೇಟೆಡ್ ರ್‍ಯಾಫಿಡ್ ಚೆಸ್ ಸ್ಪರ್ಧೆ ನಡೆಯಲಿದೆ ಎಂದು ಸಂಸ್ಥೆಯ ಸ್ಥಾಪಕ ಸಾಕಾ ತ್ ಯು.ಕೆ. ತಿಳಿಸಿದರು.

ಮಂಗಳವಾರ ಕಾಪು ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕರ್ನಾಟಕ, ಗೋವಾ, ಕೇರಳ, ತಮಿಳುನಾಡು, ಆಂಧಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ನವದೆಹಲಿ, ಪಶ್ಚಿಮ ಬಂಗಾಳ ಸಹಿತ ವಿವಿಧ ರಾಜ್ಯಗಳ 300ಕ್ಕೂ ಅಧಿಕ ಮಂದಿ ಸ್ಪರ್ಧಾಳುಗಳು ಭಾಗವಹಿಸುವ ನಿರೀಕ್ಷೆಯಿದೆ. ಸ್ಪರ್ಧಾಳುಗಳು ಮತ್ತು ಅವರೊಂದಿಗೆ ಬರುವ ಪೋಷಕರಿಗೆ 2 ದಿನದ ಉಚಿತ ಊಟದ ವ್ಯವಸ್ಥೆ ಮಾಡಲಾಗುವುದು ಎಂದರು.

ವಿಜೇತರಿಗೆ 2 ಲಕ್ಷ ರೂ. ಬಹುಮಾನ, 187 ಟ್ರೋಫಿ: ಎಫಿಲೆನ್ಸ್ ಟೆಕ್ನಾಲಜೀಸ್ ಮಾರ್ಕೆಟಿಂಘ್ ಕಂಪನಿ ಮಂಗಳೂರು, ಯುಡಿಸಿಎ ಉಡುಪಿ, ಕೆಎಸ್‌ಸಿಎ, ಎಐಸಿಎಸ್ ಫಿಡೆಗಳ ಸಹಕಾರದೊಂದಿಗೆ ನಡೆಯುವ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಎರಡು ಲಕ್ಷ ರೂ. ವರೆಗೆ ನಗದು ಬಹುಮಾನ ನೀಡಲಾಗುವುದು.

6,8,10,12,14,16, ವರ್ಷ ಪ್ರಾಯದ ಹುಡುಗರು ಮತ್ತು ಹುಡುಗಿಯರಿಗಾಗಿ ನಡೆಯುವ ಸ್ಪರ್ಧೆಯಲ್ಲಿ ಪ್ರತೀ ವಿಭಾಗದಲ್ಲಿ ತಲಾ 10 ರಂತೆ 120 ಟ್ರೋಫಿ, ಓಪನ್‌ನಲ್ಲಿ 20, ಇತರ ವಿಭಾಗದಲ್ಲಿ 47 ಟ್ರೋಫಿ ಸಹಿತ 187 ಟ್ರೋಫಿ ವಿತರಿಸಲಾಗುವುದು ಎಂದರು.

ಜೂ. 29 ರಂದು ಬೆಳಿಗ್ಗೆ 8.45ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪಂದ್ಯಾಟವನ್ನು ಉದ್ಘಾಟಿಸಲಿದ್ದ ಎಫಿಲೆನ್ಸ್ ಟೆಕ್ನಾಲಜೀಸ್ ಡಿಜಿಟಲ್ ಮಾರ್ಕೆಟಿಂಗ್ ಕಂಪೆನಿ ಮಂಗಳೂರು ಇದರ ಸ್ಥಾಪಕ ಅವಿನಾಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ತಹಶೀಲ್ದಾರ್ ಡಾ| ಪ್ರತಿಭಾ ಆರ್., ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಸಹಿತ ಹಲವು ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜೂ. 30 ರಂದು ಸಂಜೆ 4.45ಕ್ಕೆ ಸಮರೋಪ ಸಮಾರಂಭ ನಡೆಯಲಿದೆ.

ಕಾಪುವಿನ ಪ್ರಥಮ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆ : ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು ಮತ್ತು ಉಡುಪಿ ಸಂಸ್ಥೆಯು ಕಳೆದ 16 ವರ್ಷಗಳಿಂದ ಕಾಪುವಿನಲ್ಲಿ ವರ್ಷಂಪ್ರತಿ ಅಂತರ್ ಜಿಲ್ಲೆ ಮತ್ತು ರಾಜ್ಯ ಮಟ್ಟದ ಚೆಸ್ ಸ್ಪರ್ಧೆಯನ್ನು ಆಯೋಜಿಸಿಕೊಂಡು ಬಂದಿದ್ದು ಈವರೆಗೆ ಸುಮಾರು 2,500ಕ್ಕೂ ಮಿಕ್ಕ ಚೆಸ್ ಪಟುಗಳು ಬಹುಮಾನ ಗಳಿಸಿದ್ದಾರೆ. ಈ ಬಾರಿ ಪ್ರಥಮ ಬಾರಿಗೆ ಕಾಪುವಿನಲ್ಲಿ ರಾಷ್ಟ್ರ ಮಟ್ಟದ ಚೆಸ್ ಸ್ಪರ್ಧೆಯನ್ನು ಆಯೋಜಿಸುವ ಮೂಲಕ ರಾಷ್ಟ್ರ ಮಟ್ಟದ ಆಟಗಾರರನ್ನು ಕಾಪುವಿಗೆ ಪರಿಚಯಿಸುವ ಪ್ರಯತ್ನ ನಡೆಯುತ್ತಿದೆ ಎಂದರು.

ಕಾಪು ಆಸುಪಾಸಿನ ಮಕ್ಕಳಿಗೆ ಅನುಕೂಲವಾಗುವಂತೆ ಪ್ರತೀ ಬುಧವಾರ ಸಂಜೆ 6 ಗಂಟೆಗೆ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಚೆಸ್ ತರಬೇತಿ ತರಗತಿಯನ್ನು ನಡೆಸುತ್ತಿದ್ದು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದು ಕೊಳ್ಳಬಹುದಾಗಿದೆ ಎಂದರು.

ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಕಾಪು ಮತ್ತು ಉಡುಪಿ ಇದರ ಅಧ್ಯಕ್ಷ ಉಮಾನಾಥ್ ಕಾಪು, ನಿರ್ದೇಶಕಿ ಸೌಂದರ್ಯ ಯು.ಕೆ., ಮುಖ್ಯ ಸಲಹೆಗಾರ ಲಕ್ಷ್ಮೀನಾರಾಯಣ ಆಚಾರ್ಯ ಉಡುಪಿ, ಸಲಹೆಗಾರ ನಾಗೇಶ್ ಕಾರಂತ್ ಕಾಪು, ಪಾಂಗಾಳ ಆಸರೆ ಸಂಸ್ಥೆಯ ಸ್ಥಾಪಕ ಪೆನ್ವೆಲ್ ಸೋನ್ , ಲೋಕೇಶ್ ಕೊಡ್ಮಾಣ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ

udupi-Malpe

Udupi: ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತಕ್ಕೆ ಸೂಚನೆ

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

Udupi ಬೈಕ್‌ ಡೂಮ್‌ನಲ್ಲಿ ಹಾವು; ಬೆಚ್ಚಿ ಬಿದ್ದ ಸವಾರ!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.