Renuka Swamy case; ನಟ ದರ್ಶನ್ ಮಾಡಿದ್ದು ತಪ್ಪು…: ಶಾಸಕ ವಿನಯ್ ಕುಲಕರ್ಣಿ ಹೇಳಿದ್ದೇನು?
Team Udayavani, Jun 18, 2024, 4:38 PM IST
ಬೆಳಗಾವಿ: ನಟ ದರ್ಶನ್ ವಿರುದ್ದ ಆರೋಪ ಇದ್ದಿದ್ದಕ್ಕೆ ಬಂಧಿಸಿದ್ದಾರೆ. ತಪ್ಪು ತಪ್ಪೇ, ಹೀಗಾಗಿ ಅವರನ್ನು ಅರೆಸ್ಟ್ ಮಾಡಿದ್ದಾರೆ. ಪೊಲೀಸರು ಈ ವಿಚಾರದಲ್ಲಿ ತನಿಖೆ ಮಾಡುತ್ತಿದ್ದಾರೆ. ದರ್ಶನ್ ಗೆ ಯಾವ ಪ್ರಮಾಣದ ಶಿಕ್ಷೆ ಆಗಬೇಕೆಂದು ಕೋರ್ಟ್ ತೀರ್ಮಾನ ಮಾಡುತ್ತದೆ. ಆದರೆ ನಟ ದರ್ಶನ್ ಮಾಡಿದ್ದು ತಪ್ಪು ಎಂದು ದರ್ಶನ್ ಒಡನಾಡಿ, ಶಾಸಕ ವಿನಯ ಕುಲಕರ್ಣಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ಅವರು ರ್ಯಾಶ್ ಆಗಿ ವರ್ತನೆ ಮಾಡುತ್ತಿದ್ದರು ಎಂದಿತ್ತು. ನಮ್ಮ ಜೊತೆಗಿದ್ದಾಗ ಆ ರೀತಿ ಇರುತ್ತಿರಲಿಲ್ಲ. ಕೊಲೆ ಮಾಡುವಷ್ಟರ ಮಟ್ಟಿಗೆ ಏನಾಗಿದೆ ಎಂದು ನನಗೆ ಗೊತ್ತಿಲ್ಲ ಎಂದರು.
ನಟ ಮಾದರಿ ಆಗಬೇಕಿದ್ದವರು ಈ ರೀತಿ ಮಾಡಿದ್ದು ಸರಿನಾ ಎಂಬ ಪ್ರಶ್ನೆಗೆ ಉತ್ತರಿಸಿದ ವಿನಯ್, ‘ಅವನಿಗೆ ಬಿಟ್ಟಿದ್ದು’ ಎಂದು ಹೇಳುತ್ತಾ ಆಕಾಶದತ್ತ ಕೈ ತೋರಿದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಮಾಹಿತಿ ಇಲ್ಲ, ಪಕ್ಷದಲ್ಲೂ ಆ ಬಗ್ಗೆ ಚರ್ಚೆಯೂ ಆಗಿಲ್ಲ ಎಂದು ವಿನಯ ಕುಲಕರ್ಣಿ ಹೇಳಿದರು.
ಸೋತ ಕ್ಷೇತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ವಿಚಾರಕ್ಕೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದಲ್ಲಿ ಸೋಲು ಗೆಲುವು ಸಾಮಾನ್ಯ. ಸೋಲು ಗೆಲುವಿಗೆ ಹಲವಾರು ಕಾರಣಗಳು ಇವೆ ಎಂದರು.
ಮಂತ್ರಿ ಆಸೆಯಿದೆ..: ನಾಗೇಂದ್ರ ರಾಜೀನಾಮೆಯಿಂದ ತೆರವಾಗಿರುವ ಸಚಿವ ಸ್ಥಾನಕ್ಕೆ ವಿನಯ ಕುಲಕರ್ಣಿ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ಆ ಬಗ್ಗೆ ಚರ್ಚೆಯಾಗಿಲ್ಲ, ಯಾರಿಗಾದರೂ ಮಂತ್ರಿ ಆಗಬೇಕು ಎಂದು ಆಸೆ ಇರುತ್ತದೆ. ನಾನು ಮಂತ್ರಿ ಇದ್ದಾಂವ, ಸೀನಿಯರ್ ಕೂಡಾ ಹೌದು. ನಾನು ಮಂತ್ರಿ ಮಾಡಿ ಎಂದು ಯಾರನ್ನೂ ಕೇಳಲ್ಲ. ಪಕ್ಷದಲ್ಲಿ ಒಳ್ಳೆಯ ಶಾಸಕನಾಗಿ ಕೆಲಸ ಮಾಡುತ್ತಿದ್ದೇನೆ, ಪಕ್ಷವೇ ನನ್ನನ್ನು ಗುರುತಿಸಲಿ. ನಾನು ಇವತ್ತಿನವರೆಗೂ ಮಂತ್ರಿ ಸ್ಥಾನ ಕೊಡವಂತೆ ಕೇಳಿಲ್ಲ, ಅವರಾಗಿಯೇ ಕೊಡಬೇಕು ಎಂದ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
Belagavi: ಯಾವುದೇ ಕಾರಣಕ್ಕೂ ಜಗ್ಗುವ ಮಾತಿಲ್ಲ…: ಲಕ್ಷ್ಮಿ ಹೆಬ್ಬಾಳ್ಕರ್
Belagavi: ಮೂರು ವರ್ಷದ ಮಗುವಿನ “ಹತ್ಯಾಚಾರಿ’ಗೆ ಗಲ್ಲು ಶಿಕ್ಷೆ
ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!
Belagavi: ಸಾಲಗಾರರ ಕಿರುಕುಳದಿಂದ ಬೇಸತ್ತು ನೇಕಾರ ಆತ್ಮ*ಹತ್ಯೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Israel ಸರ್ಜಿಕಲ್ ಸ್ಟ್ರೈಕ್: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್ ಬಾಂಬ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.