ಚಿಕ್ಕೋಡಿ: ರೈಲು ಯೋಜನೆಗಳಿಗೆ ವೇಗ ಕೊಡಿ: ಜಿಲ್ಲಾ ಹೋರಾಟ ಸಮಿತಿ
Team Udayavani, Jun 18, 2024, 4:57 PM IST
■ ಉದಯವಾಣಿ ಸಮಾಚಾರ
ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿ ರೈಲು ಮಾರ್ಗ ನಿರ್ಮಾಣಕ್ಕೆ ವೇಗ ಕೊಡಬೇಕೆಂದು ಒತ್ತಾಯಿಸಿ ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.
ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕರಾಡ-ನಿಪ್ಪಾಣಿ- ಬೆಳಗಾವಿ ಮತ್ತು ಶೇಡಬಾಳ-ಅಥಣಿ-ವಿಜಯಪೂರ ಹೀಗೆ ರೈಲು ಯೋಜನೆಗಳು 2010-2011 ರಲ್ಲಿ ಸಮೀಕ್ಷೆಯಾಗಿ ಅನುಮೋದನೆ ಸಹ ಯುಪಿಎ ಸರಕಾರದಲ್ಲಿ ದೊರಕಿದೆ. ಆದರೆ ದಶಕಗಳು ಕರೆದರೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಇನ್ನೂ ಕಾಮಗಾರಿ ಆರಂಭವಾಗಿಲ್ಲ ಮತ್ತು ಕುಡಚಿ-ಬಾಗಲಕೋಟ ರೈಲು
ಮಾರ್ಗದ ಕಾಮಗಾರಿ ದಶಕಗಳಿಂದ ಆಮೆ ಗತಿಯಲ್ಲಿ ಸಾಗುತ್ತಲಿದೆ. ಈ ಕುರಿತು ಸಾಕಷ್ಟು ಸಲ ಈ ಭಾಗದ ಜನರು ಸರಕಾರಕ್ಕೆ ಒತ್ತಾಯಿಸಿದ್ದಾರೆ.
ರಾಜಕಾರಣಿಗಳ ಆಸಕ್ತಿಯ ಕೊರತೆಯಿಂದ ಈ ಭಾಗದ ಬಹು ದಿನಗಳ ಬೇಡಿಕೆಯಾದ ಕರಾಡ-ನಿಪ್ಪಾಣಿ- ಬೆಳಗಾವಿ ಹಾಗೂ ಶೇಡಬಾಳ-ಅಥಣಿ-ವಿಜಯಪುರ ಈ ರೈಲು ಯೋಜನೆಗಳ ಕಾಮಗಾರಿ ಆರಂಭವಾಗಿಲ್ಲ, ಹಾಗಾಗಿ ತಮ್ಮ ಅಧಿಕಾರ ಅವಧಿಯಲ್ಲಿ ಈ ಭಾಗದ ರೈಲು ಯೋಜನೆಗಳನ್ನು ಆರಂಭಿಸಿ ಪೂರ್ಣಗೊಳಿಸಬೇಕು ಹಾಗೂ ಕುಡಚಿ-ಬಾಗಲಕೋಟ ಕಾಮಗಾರಿ ಸಹ ಪೂರ್ಣವಾಗಬೇಕು ಎಂದು ಒತ್ತಾಯಿಸಿದರು.
ಈ ಕುರಿತು ಮಾತನಾಡಿದ ಸಂಸದೆ ಪ್ರಿಯಾಂಕಾ ಅವರು, ತಮ್ಮ ಮನವಿಯ ಪ್ರಕಾರ ಸಂಸತ್ತಿನಲ್ಲಿ ಚರ್ಚೆ ಮಾಡಿ ಕಾಮಗಾರಿಗಳನ್ನು ಆರಂಭಿಸಲು ಶತ ಪ್ರಯತ್ನ ಮಾಡುತ್ತೇನೆ ಮತ್ತು ತಮ್ಮ ಬೇಡಿಕೆಗಳನ್ನು ಪೂರೈಸುತ್ತೇನೆ ಎಂದರು. ಚಂದ್ರಕಾಂತ ಹುಕ್ಕೇರಿ, ಸಂಜು ಬಡಿಗೇರ, ಸಂಜಯ ಪಾಟೀಲ, ಮಾಳಪ್ಪಾ ಕರೆಣ್ಣವರ, ಖಾನಪ್ಪಾ ಬಾಡ, ಅಮೂಲ ನಾವಿ, ರಮೇಶ ಡಂಗೇರ, ದುಂಡಪ್ಪಾ ಗುರವ, ವಿಶಾಲ ಮೇತ್ರೆ, ವಿಠಲ ಢವಳೆ, ಜೀವನ ಮಾಂಜರೇಕರ, ಉದಯ ವಾಘಮಾರೆ, ಫಿರೋಜ
ಕಲಾವಂತ, ಕುಮಾರ ನಂದಿ, ರಾಜು ಸೊಲ್ಲಾಪುರೆ, ಅಶ್ವತ ಮಾಳಕರಿ, ಮಹೇಂದ್ರ ಕರ್ನೂರೆ, ರಾಜು ಕೋಟಗಿ ಹಾಗೂ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ
ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ
Road Mishap ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ
Kalammawadi Dam ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು
Belagavi; ರೈತರಿಗೆ ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?
NASA; ಅಂತರಿಕ್ಷದಲ್ಲೇ ಅತಂತ್ರ! ಬಾಹ್ಯಾಕಾಶದಿಂದ ಅಮೆರಿಕದ ಗಗನಯಾತ್ರಿಗಳು ಮರಳ್ಳೋದು ಯಾವಾಗ?
Annamalai; ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?
Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್
Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.