Vijayapura; ತಿಂಗಳೊಳಗೆ ಕಾಂಗ್ರೆಸ್ ಶಾಸಕರಿಂದ ಬಂಡಾಯ: ಶಾಸಕ ಯತ್ನಾಳ


Team Udayavani, Jun 18, 2024, 5:55 PM IST

ಬಸನಗೌಡ ಪಾಟೀಲ ಯತ್ನಾಳ

ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ಸಂಪೂರ್ಣ ವೈಫಲ್ಯವಾಗಿದ್ದು, ಕಾಂಗ್ರೆಸ್ ಶಾಸಕರೇ ಇದನ್ನು ಬಹಿರಂಗವಾಗಿ ಹೇಳುತ್ತಿದ್ದಾರೆ. ಇನ್ನು ಒಂದು ತಿಂಗಳಲ್ಲಿ ಅನುದಾನ ವಿಚಾರದಲ್ಲಿ ಕಾಂಗ್ರೆಸ್ ಶಾಸಕರೇ ಬಂಡಾಯ ಏಳುತ್ತಾರೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ನೀಡಿದ್ದಾರೆ.

ಮಂಗಳವಾರ ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರಿಂದ ಹಿಡಿದು ಎಲ್ಲ ಶಾಸಕರು ಅನುದಾನ ವಿಚಾರದಲ್ಲಿ ಅಸಮಾಧಾನ ಹೊಂದಿದ್ದಾರೆ. ಅಭಿವೃದ್ಧಿಗೆ ಹಣ ನೀಡುತ್ತಿಲ್ಲವೆಂದು ಕಾಂಗ್ರೆಸ್ ಶಾಸಕರು ಸ್ವಪಕ್ಷೀಯ ಸರ್ಕಾರದ ವಿರುದ್ಧ ಬಂಡೇಳಲು ಕಾರಣ. ತಮ್ಮ ಕ್ಷೇತ್ರದಲ್ಲಿ ಒಂದೂ ಅಭಿವೃದ್ಧಿ ಕಾಮಗಾರಿ ಪೂಜೆ ಮಾಡಲು ಸಾಧ್ಯವಾಗದೇ ಕಾಂಗ್ರೆಸ್ ಶಾಸಕರೇ ಧ್ವನಿ ಎತ್ತಿದ್ದು, ಹಿಂದಿನ ಸರ್ಕಾರದ ಕಾಮಗಾರಿಗಳಿಗೆ ಪೂಜೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಗ್ಯಾರಂಟಿ ವೈಫಲ್ಯ ಮೇಕಪ್ ಮಾಡಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂಧನ ದರ ಏರಿಕೆ ಮಾಡಿದ್ದಾರೆ. 10 ಕೆ.ಜಿ. ಅಕ್ಕಿ ಕೊಡುವುದಾಗಿ, ಇಂಧನ ಬೆಲೆ 10 ಇಳಿಸುವುದಾಗಿ ಹೇಳಿ, ಇದೀಗ ನಾನು ಹಾಗೆ ಹೇಳಿಲ್ಲ ಎನ್ನುತ್ತಿದ್ದಾರೆ. ಇದೀಗ ಇಂಧನ ದರ ಏರಿಕೆ ಮಾಡಿದ್ದಾರೆ, 10 ಸಂಖ್ಯೆ ಸಿದ್ಧರಾಮಯ್ಯ ಫೆವರಿಟ್ ಸಂಖ್ಯೆಯೇ ಎಂದು ಪ್ರಶ್ನಿಸಿದರು.

ಇಂಧನ ದರ ಏರಿಕೆ ಸಂದರ್ಭದಲ್ಲಿ ದರ ಏರಿಕೆ ವಿರುದ್ಧ ಮಾತನಾಡುವವರು ಪಾಕಿಸ್ತಾನಕ್ಕೆ ಹೋಗಲಿ ಎಂದು ಯತ್ನಾಳ ಹೇಳುತ್ತಿದ್ದರು ಎಂಬ ಮಾತಿಗೆ ಪ್ರತಿಕ್ರಿಯಿಸಿದ ಅವರು, ಇಂಧನ ದರ ಏರಿಕೆ ಜಾಗತೀಕರಣ ಮೇಲೆ ಇರುತ್ತದೆ. ಆದರೆ ರಾಜ್ಯದಲ್ಲಿ ದರ ಏರಿಕೆ ಮಾಡಿದ್ದು ಯಾಕೆ ಎಂದು ಯತ್ನಾಳ ಪ್ರಶ್ನಿಸಿದರು.

ಖರ್ಗೆ ಕನಸು ನನಸಾಗದು

ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬೇಗ ಪತನವಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕನಸು ಕಾಣುತ್ತಿದ್ದಾರೆ. ಬರುವ 3 ತಿಂಗಳಲ್ಲಿ ಬಿಜೆಪಿ ಶಾಸಕರ ಬಲ 272ಕ್ಕೆ ಏರಲಿದ್ದು, ಇದು ಆಪರೇಷನ್ ಅಲ್ಲ ನಾರ್ಮಲ್ ಡಿಲೆವರಿ ಎಂದು ಶಾಸಕ ಯತ್ನಾಳ ಕುಟುಕಿದ್ದಾರೆ.

ಸೋಮಣ್ಣ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಿದ್ದಕ್ಕೆ ಸ್ವಪಕ್ಷದಲ್ಲಿ ಅಸಮಾಧಾನ ಎದ್ದಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಎರಡು ಕಡೆ ನಿಲ್ಲಿಸಿ ಸೋಲಿಸಿದರು. ಆದರೆ ಹಿಂದಿನ ಉಪ ಚುನಾವಣೆಗಳಲ್ಲಿ ಸೋಮಣ್ಣ ಕೆಲಸ ಮಾಡಿ ಗೆಲ್ಲಿಸಿದ್ದನ್ನು ನೋಡಿ ಹೈಕಮಾಂಡ್ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಿ, ಎರಡು ಖಾತೆ ನೀಡಿದೆ ಎಂದರು.

ಜಮೀನಿಗೆ ಲಂಚ: ಬೆಂಗಳೂರಿನಲ್ಲಿ ಕೃಷಿಯೇತರ ಜಮೀನು ಪರಿವರ್ತಿಸಲು ಪ್ರತಿ ಚದರ ಅಡಿಗೆ 75 ರೂ. ಲಂಚ ನೀಡಬೇಕಾಗಿದೆ. ನಮ್ಮ ಸರ್ಕಾರದ ವಿರುದ್ಧ ಶೇ.40 ಕಮೀಷನ್ ಆರೋಪ ಮಾಡಿದವು, ಇಷ್ಟು ಇದೀಗ ಪ್ರಮಾಣದ ಲಂಚ ತೆಗೆದುಕೊಳ್ಳುತ್ತಿದ್ದಾರೆ ಎಂದು ಯತ್ನಾಳ ಆರೋಪಿಸಿದರು.

ವಿಜಯಪುರ ಜಿಲ್ಲೆಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಖರೀದಿ ಮಾಡಿಸುವ ಪ್ರಕರಣಗಳ ಕುರಿತು ಆಕ್ರೋಶ ವ್ಯಕ್ತಪಡಿಸಿದ ಯತ್ನಾಳ, ವಕ್ಫ್ ಹೆಸರಿನಲ್ಲಿದ್ದ ಜಮೀನನ್ನು ಓರ್ವ ವ್ಯಕ್ತಿಯ ಹೆಸರಿಗೆ ಮಾಡಿದ್ದಾರೆ. ದೇಶದಲ್ಲಿ 12 ಲಕ್ಷ ಎಕರೆ ವಕ್ಫ್ ಆಸ್ತಿ ಇದ್ದು, ಸರ್ಕಾರ ಇದನ್ನು ವಶಕ್ಕೆ ಪಡೆದು ಬಡವರಿಗೆ ಮನೆ ಕಟ್ಟಿಸಬೇಕು. ಈ ಕುರಿತು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುತ್ತೇನೆ ಎಂದರು.

ಭೇಟಿಗೆ ಬೇರೆ ಅರ್ಥ ಬೇಡ: ಮೇಲ್ಮನೆ ಶಾಸಕ ರವಿಕುಮಾರ ಸೇರಿದಂತೆ ಬಿಜೆಪಿ ಪಕ್ಷದ ಕೆಲ ಮಾಜಿ ಶಾಸಕರೊಂದಿಗೆ ಭೇಟಿ ಮಾಡಿದ್ದು, ಯಡಿಯೂರಪ್ಪ ಅವರೊಂದಿಗೆ ಹೊಂದಾಣಿಕೆಗಾಗಿ ಅಲ್ಲ. ಈ ಭೇಟಿ ಹಾಗೂ ಮಾತುಕತೆಗೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದು ಯತ್ನಾಳ ಪ್ರತಿಕ್ರಿಯಿಸಿದ್ದಾರೆ.

ರವಿಕುಮಾರ, ಮಾಜಿ ಶಾಸಕರಾದ ವೀರಣ್ಣ ಚರಂತಿಮಠ, ಆಭಯ ಪಾಟೀಲ ಇವರೆಲ್ಲ ನನ್ನನ್ನು ಭೇಟಿ ಮಾಡಿದ್ದಕ್ಕೆ ವಿಶೇಷ ಮಹತ್ವ ನೀಡಬೇಕಿಲ್ಲ. ಪಕ್ಷದ ಸಂಘಟನೆ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಘಟಿತ ಹೋರಾಟದ ಕುರಿತು ಚರ್ಚಿಸಿದ್ದೇವೆ ಎಂದು ಸಮಜಾಯಿಸಿ ನೀಡಿದರು.

ಟಾಪ್ ನ್ಯೂಸ್

Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ

Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ

18

Actress Akshita Bopaiah: ತಮಿಳಿನತ್ತ ನವನಟಿ ಅಕ್ಷಿತಾ ಸಿನಿಯಾನ

Hubballi: ಪಾಲಿಕೆ ಆಯುಕ್ತರು, ಸಿಬ್ಬಂದಿಗಳಿಂದ ದಾಳಿ… ನಿಷೇಧಿತ ಪ್ಲಾಸ್ಟಿಕ್ ವಶ

Hubballi: ಪಾಲಿಕೆ ಆಯುಕ್ತರು, ಸಿಬ್ಬಂದಿಗಳಿಂದ ದಾಳಿ… ನಿಷೇಧಿತ ಪ್ಲಾಸ್ಟಿಕ್ ವಶ

16

ಮದುವೆ ಆಗಲು ನಿರಾಕರಿಸಿದ್ದಕ್ಕೆ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ ಪ್ರಿಯತಮೆ.!

ವಿದೇಶ ಪ್ರವಾಸಿ ಕಥನ ಭಾಗ-1:| ಉಡುಪಿಯಿಂದ ಮರಳು ನಾಡಿನ ರಾಜಧಾನಿಯತ್ತ ಪಯಣ

ವಿದೇಶ ಪ್ರವಾಸಿ ಕಥನ ಭಾಗ-1:| ಉಡುಪಿಯಿಂದ ಮರಳು ನಾಡಿನ ರಾಜಧಾನಿಯತ್ತ ಪಯಣ

vijaya-sankeshwar1

ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayendra ಜತೆ ಏಕೆ ಹೊಂದಾಣಿಕೆ ಮಾಡಿಕೊಳ್ಳಲಿ: ಯತ್ನಾಳ್‌ ಪ್ರಶ್ನೆ

Vijayendra ಜತೆ ಏಕೆ ಹೊಂದಾಣಿಕೆ ಮಾಡಿಕೊಳ್ಳಲಿ: ಯತ್ನಾಳ್‌ ಪ್ರಶ್ನೆ

1-weewwqewqewqewqe

Vijayapura: ಸೇನಾ ಹವಾಲ್ದಾರ್ ರಾಜು ಕರ್ಜಗಿ ನಿಧನ

1-wew-e-weewqewq

Muddebihal; 2 ಮರಿಗಳ ಸಮೇತ ಬೃಹತ್ ಹೆಣ್ಣು ಮೊಸಳೆ ಸೆರೆ

dinesh-gu

GST ವಿಚಾರದಲ್ಲಿ ಟೀಕೆ: ನಿರ್ಮಲಾ ಸೀತಾರಾಮನ್ ವಿರುದ್ಧ ದಿನೇಶ್ ಗುಂಡೂರಾವ್ ಕಿಡಿ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ

Sirsi: ಕೇಂದ್ರ ಸಚಿವರನ್ನು ಭೇಟಿಯಾದ ಕಾಗೇರಿ: ಚತುಷ್ಪತ ರಾ.ಹೆದ್ದಾರಿ ತ್ವರಿತಕ್ಕೆ ಮನವಿ

18

Actress Akshita Bopaiah: ತಮಿಳಿನತ್ತ ನವನಟಿ ಅಕ್ಷಿತಾ ಸಿನಿಯಾನ

Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

Hubballi: ಪಾಲಿಕೆ ಆಯುಕ್ತರು, ಸಿಬ್ಬಂದಿಗಳಿಂದ ದಾಳಿ… ನಿಷೇಧಿತ ಪ್ಲಾಸ್ಟಿಕ್ ವಶ

Hubballi: ಪಾಲಿಕೆ ಆಯುಕ್ತರು, ಸಿಬ್ಬಂದಿಗಳಿಂದ ದಾಳಿ… ನಿಷೇಧಿತ ಪ್ಲಾಸ್ಟಿಕ್ ವಶ

16

ಮದುವೆ ಆಗಲು ನಿರಾಕರಿಸಿದ್ದಕ್ಕೆ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ ಪ್ರಿಯತಮೆ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.