Ramarasa ಚಿತ್ರಕ್ಕೆ ಕಾರ್ತಿಕ್‌: ಹೀರೋ ಲಾಂಚ್‌ಗೆ ಸುದೀಪ್‌ ಸಾಥ್‌


Team Udayavani, Jun 18, 2024, 6:09 PM IST

Ramarasa ಚಿತ್ರಕ್ಕೆ ಕಾರ್ತಿಕ್‌: ಹೀರೋ ಲಾಂಚ್‌ಗೆ ಸುದೀಪ್‌ ಸಾಥ್‌

ಬಿಗ್‌ಬಾಸ್‌ ವಿನ್ನರ್‌ ಕಾರ್ತಿಕ್‌ ಮಹೇಶ್‌ ಹೊಸ ಸಿನಿಮಾವೊಂದಕ್ಕೆ ನಾಯಕರಾಗಿದ್ದಾರೆ. ಅದು “ರಾಮರಸ’. ಗುರುದೇಶಪಾಂಡೆ ಅವರು ನಿರ್ಮಿಸುತ್ತಿರುವ “ಜಟ್ಟ’ ಗಿರಿರಾಜ್‌ ನಿರ್ದೇಶನದ “ರಾಮರಸ’ ಚಿತ್ರದಲ್ಲಿ ಜಿ ಅಕಾಡೆಮಿಯಲ್ಲಿ ನಟನೆ ಕಲಿತಿರುವ ಹದಿನಾರು ಪ್ರತಿಭೆಗಳು ನಟಿಸುತ್ತಿರುವುದು ಗೊತ್ತಿರುವ ವಿಷಯ. ಈ ಹದಿನಾರು ಜನ ಯುವಪ್ರತಿಭೆಗಳ ಜೊತೆ ನವ ನಟರೊಬ್ಬರು ನಾಯಕನಾಗಿ ನಟಿಸಲಿದ್ದಾರೆ ಎಂದು ತಿಳಿಸಲಾಗಿತ್ತು. ಅದರಂತೆ ಈಗ ಕಾರ್ತಿಕ್‌ ಮಹೇಶ್‌ ನಟಿಸುತ್ತಿದ್ದಾರೆ.

ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ನಾಯಕ ನಟನನ್ನು ಪರಿಚಯಿಸುವ ವಿಶೇಷ ವಿಡಿಯೋ ಬಿಡುಗಡೆ ಮಾಡುವ ಮೂಲಕ ರಾಮರಸ ಚಿತ್ರದ ನಾಯಕ ಕಾರ್ತಿಕ್‌ ಮಹೇಶ್‌ಎಂದು ತಿಳಿಸಿದರು. ನಟ ಸುದೀಪ್‌ ತಂಡಕ್ಕೆ ಹಾಗೂ ಕಾರ್ತಿಕ್‌ ಮಹೇಶ್‌ ಅವರಿಗೆ ಶುಭ ಕೋರಿದರು.

ನಾಯಕ ಕಾರ್ತಿಕ್‌ ಮಹೇಶ್‌ ಮಾತನಾಡಿ, ಮೊದಲಿನಿಂದಲೂ ನನಗೆ ಸುದೀಪ್‌ ಅವರು ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅವರಿಗೆ ಹಾಗೂ ಈ ಚಿತ್ರದಲ್ಲಿ ಅವಕಾಶ ಕೊಟ್ಟ ನಿರ್ಮಾಪಕರಿಗೆ, ನಿರ್ದೇಶಕರಿಗೆ ಧನ್ಯವಾದಗಳು. ಒಳ್ಳೆಯ ತಂಡದೊಂದಿಗೆ ಕೆಲಸ ಮಾಡುತ್ತಿರುವ ಖುಷಿಯಿದೆ. ಸುದೀಪ್‌ ಅವರ ಮೇಲೆ ನನಗೆ ವಿಶೇಷ ಪ್ರೀತಿ ಹಾಗೂ ಗೌರವ. ಹಾಗಾಗಿ ಬಿಗ್‌ ಬಾಸ್‌ ಫಿನಾಲೆಯಲ್ಲಿ ಅವರು ಕೊಟ್ಟಿದ್ದ ಡ್ರೆಸ್‌ ಅನ್ನು ಇಂದು ಹಾಕಿಕೊಂಡು ಬಂದಿದ್ದೇನೆ ಎಂದರು.

ಪ್ರತಿಯೊಬ್ಬ ನಿರ್ದೇಶಕನಿಗೂ ಗುರು ದೇಶಪಾಂಡೆ ಅವರಂತಹ ನಿರ್ಮಾಪಕರು ಸಿಗಬೇಕು. ಅವರಿಗೆ ಸಿನಿಮಾ ಮೇಲೆ ತುಂಬಾ ಪ್ರೀತಿ. ಅದ್ದೂರಿಯಾಗಿ ಮೂಡಿಬಂದಿರುವ ನಾಯಕನ ಪರಿಚಯದ ವಿಶೇಷ ವಿಡಿಯೋ ಅದಕ್ಕೆ ಸಾಕ್ಷಿ. ಕಾರ್ತಿಕ್‌ ಮಹೇಶ್‌ ಅವರು ಈ ಚಿತ್ರದ ನಾಯಕನಾಗಿ ಆಯ್ಕೆಯಾಗಿದ್ದಾರೆ. ಸುದೀಪ್‌ ಅವರು ನಾಯಕನನ್ನು ಪರಿಚಯಿಸಿದ್ದಾರೆ. ಈ ಸಂದರ್ಭದಲ್ಲಿ ಸುದೀಪ್‌ ಅವರಿಗೆ ವಿಶೇಷ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಗಿರಿರಾಜ್.

ಜಿ ಅಕಾಡೆಮಿಯ 16 ಜನ ಹೊಸ ಪ್ರತಿಭೆಗಳಿಗೆ ತರಬೇತಿ ನೀಡಿ ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಲಾಗಿದೆ. ಅವರೊಂದಿಗೆ ಜನಪ್ರಿಯ ನಟರೊಬ್ಬರು ನಾಯಕನಾಗಿ ನಟಿಸಲಿದ್ದಾರೆ ಎಂದು ನಾನು ಮೊದಲು ತಿಳಿಸಿದೆ. ರಾಮರಸ ಚಿತ್ರಕ್ಕೆ ಕಾರ್ತಿಕ್‌ ಮಹೇಶ್‌ ನಾಯಕನಾಗಿದ್ದಾರೆ. ನಮ್ಮ ಚಿತ್ರದ ನಾಯಕನನ್ನು ಪರಿಚಯಿಸುವ ಟೀರ್ಸ ಬಿಡುಗಡೆ ಮಾಡಿಕೊಟ್ಟ ಕಿಚ್ಚ ಸುದೀಪ್‌ ಅವರಿಗೆ ಅನಂತ ಧನ್ಯವಾದಗಳು ಎಂದರು ನಿರ್ಮಾಪಕ ಗುರು ದೇಶಪಾಂಡೆ.

“ರಾಮರಸ’ ಚಿತ್ರಕ್ಕೆ ಬಿ.ಜೆ. ಭರತ್‌ ಸಂಗೀತ, ಎ.ವಿ. ಕೃಷ್ಣಕುಮಾರ್‌, ಅರ್ಜುನ್‌ ಕಿಟ್ಟು ಸಂಕಲನವಿದೆ. ಮುರಳಿ ಮಾಸ್ಟರ್‌ ನೃತ್ಯ ನಿರ್ದೇಶನ ಹಾಗೂ ಪುನೀತ್‌ ಆರ್ಯ ಅವರ ಗೀತರಚನೆ ಇದೆ.

ಟಾಪ್ ನ್ಯೂಸ್

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

1-asddasdsa

Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆಯ ಜಿಗಿತ…@80,000

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು

Tragic: ಸೊಸೆ ಮನೆ ಬಿಟ್ಟು ಹೋಗಿದ್ದಕ್ಕೆ ಅತ್ತೆ, ಮಾವ ನೇಣಿಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್‌ ಲಾಂಚ್‌

Shiva Rajkumar: ನಾಳೆ ಶಿವಣ್ಣ ಹೊಸ ಚಿತ್ರದ ಟೈಟಲ್‌ ಲಾಂಚ್‌

18

Actress Akshita Bopaiah: ತಮಿಳಿನತ್ತ ನವನಟಿ ಅಕ್ಷಿತಾ ಸಿನಿಯಾನ

Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

Kaadaadi: ಆದಿತ್ಯ ಕಾದಾಡಿ ಚಿತ್ರ ತೆರೆಗೆ ಸಿದ್ಧ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-honnavara

Honnavara: ಪಟ್ಟಣ ಪಂಚಾಯತ್‌ ನಲ್ಲಿ ಲೋಕಾಯುಕ್ತ ದಾಳಿ

1-vijayendra

CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ

vijayapura

Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ

1-raju

Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ

1-PTI

Mumbai ಬೀದಿಗಳನ್ನು ವ್ಯಾಪಾರಿಗಳು ವಶಪಡಿಸಿಕೊಂಡಿದ್ದು ಪಾದಚಾರಿಗಳಿಗೆ ಸ್ಥಳವಿಲ್ಲ: ಹೈಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.