Kushtagi: ಅರೆಸ್ಟ್ ಮಾಡುವುದಾದರೆ 3 ಸಾವಿರ ಅಂಗನವಾಡಿ ಕಾರ್ಯಕರ್ತೆಯರನ್ನು ಅರೆಸ್ಟ್ ಮಾಡಿ
Team Udayavani, Jun 19, 2024, 10:45 AM IST
ಕುಷ್ಟಗಿ: ನಮ್ಮ ಮನೆಯ ಮುಂದೆ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟಿಸಿದರೆ ಅರೆಸ್ಟ್ ಮಾಡಲಾಗುವುದು ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರ ಬೆದರಿಕೆಗೆ ಜಗ್ಗದ ಅಂಗನವಾಡಿ ಕಾರ್ಯಕರ್ತೆಯರು ಸಚಿವರ ಕಾರಟಗಿ ನಿವಾಸದಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ಸರ್ಕಾರಿ ಶಾಲೆಗಳಿಗೆ ಎಲ್.ಕೆ.ಜಿ., ಯುಕೆಜಿ ಹಂತಗಳು ಕೊಡದೇ, ಅಂಗನವಾಡಿಗಳಿಗೆ ಅವುಗಳು ನಡೆಸಲು ಕೊಡಬೇಕೆಂದು ರಾಜ್ಯಾದ್ಯಂತ ಅಂಗನವಾಡಿ ನೌಕರ ಸಂಘಟನೆ ನಿರ್ದರಿಸಿವೆ.
ಈ ಹಿನ್ನೆಲೆ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷೆ ಕಲಾವತಿ ಮೆಣೆದಾಳ ಅವರು, ಸಚಿವ ಶಿವರಾಜ ತಂಗಡಗಿ ಅವರಿಗೆ ಜೂನ್ 19 ಪ್ರತಿಭಟಿಸುವ ಕುರಿತು ಮನವಿ ಸಲ್ಲಿಸಿದ್ದರು.
ಇದಕ್ಕೆ ಸಚಿವ ತಂಗಡಗಿ ಅವರು, ನಮ್ಮ ಮನೆಯ ಮುಂದೆ ಪ್ರತಿಭಟಿಸಿದರೆ ಅರೆಸ್ಟ್ ಮಾಡುವುದಾಗಿ ಬೆದರಿಕೆ ಹಾಕಿದ್ದರು. ನಿಮ್ಮ ಮನೆಯ ಖಾಸಗಿಯಾದರೆ ನಿಮ್ಮ ಶಾಸಕರ ಭವನ ಎಲ್ಲಿದೆ ಎಂದು ತಿಳಿಸಿ ಅಲ್ಲಿ ಪ್ರತಿಭಟಿಸುವುದಾಗಿ ಕಲಾವತಿ ಮೆಣೆದಾಳ ಪ್ರಶ್ನಿಸಿದ್ದರು.
ಈ ಹಿನ್ನೆಲೆಯಲ್ಲಿ ಜಿಲ್ಲೆಯ 3 ಸಾವಿರ ಅಂಗನವಾಡಿ ಕಾರ್ಯಕರ್ತೆಯರು ಜೂನ್ 19 ರಂದು ಕಾರಟಗಿ ಚಲೋ ಚಳುವಳಿ ಹಮ್ಮಿಕೊಂಡಿದ್ದೇವೆ. ಕಾರಟಗಿಯ ಸಚಿವರ ನಿವಾಸದ ಮುಂದೆ ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಂಡಿದ್ದೇವೆ. ಸಚಿವರು ಅರೆಸ್ಟ್ ಮಾಡುವುದಾದರೆ ನಮ್ಮನ್ನೆಲ್ಲಾ ಅರೆಸ್ಟ್ ಮಾಡಿ ಎಂದು ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಎಲ್.ಕೆ.ಜಿ. ಯುಕೆಜಿ ಸರ್ಕಾರಿ ಶಾಲೆಗಳಿಗೆವಹಿಸದೇ ಮೊದಲಿನಂತೆ ಅಂಗನವಾಡಿಗಳಿಗೆ ವಹಿಸುವವರೆಗೂ ಪ್ರತಿಭಟನೆಗೆ ಜಾರಟಗಿಯಲ್ಲಿದ್ದೇವೆ ಎಂದು ಕಲಾವತಿ ಮೆಣೆದಾಳ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು
Horoscope: ಅಕಸ್ಮಾತ್ ಧನಾಗಮ ಯೋಗ ನಿಮ್ಮದಾಗಲಿದೆ
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.