Chikkaballapura: ಮುಂಗಾರು ಬೆನ್ನಲ್ಲೇ ಹೈನೋದ್ಯಮಕ್ಕೆ ಜೀವಕಳೆ


Team Udayavani, Jun 19, 2024, 12:56 PM IST

Cow

ಚಿಕ್ಕಬಳ್ಳಾಪುರ: ಬೇಸಿಗೆ ಕಳೆದು ಮುಂಗಾರು ಶುರುವಾಗುತ್ತಿದ್ದಂತೆ ಅವಿಭಜಿತ ಕೋಚಿಕ್ಕಬಳ್ಳಾಪುರ ಜಿಲ್ಲೆಗಳ ಜನರ ಜೀವನಾಡಿ ಆಗಿರುವ ಹೈನೋದ್ಯಮಕ್ಕೆ ಅಂತೂ ಜೀವ ಕಳೆ ಬಂದಿದೆ. ಕಳೆದ ವರ್ಷ ಮಳೆ ಬೆಳೆ ಇಲ್ಲದೇ ಹೈನೋದ್ಯಮದ ಮೇಲೆ ಬರದ ಕರಿನೆರಳಿನ ದಟ್ಟ ಪ್ರಭಾವ ಆವರಿಸಿ ಕ್ಷೀರ ಉತ್ಪಾದನೆ ಕ್ಷೀಣಿಸಿತ್ತು.

ಜಿಲ್ಲಾದ್ಯಂತ ಮುಂಗಾರು ಮಳೆ ಶುರುವಾಗಿರುವ ಬೆನ್ನಲ್ಲೇ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹಾಲು ಉತ್ಪಾದನೆಯಲ್ಲಿ ಭಾರೀ ಹೆಚ್ಚಳ ಕಂಡಿದ್ದು , ಕೇವಲ ಒಂದೂವರೆ ತಿಂಗಳಲ್ಲಿ 2.50 ಲಕ್ಷ ಲೀಟರ್‌ನಷ್ಟು ಹಾಲು ಉತ್ಪಾದನೆ ಎರಡು ಜಿಲ್ಲೆಗಳಲ್ಲಿ ಹೆಚ್ಚಳ ಕಾಣುವ ಮೂಲಕ ಹೈನೋದ್ಯಮದಲ್ಲಿ ತೊಡಗಿಸಿಕೊಂಡಿರುವ ರೈತರಲ್ಲಿ ಸಂತಸ ಮೂಡಿಸಿದೆ.

ಹೈನೋದ್ಯಮದ ಮೇಲೆ ಅವಲಂಬಿತ: ಹೇಳಿ ಕೇಳಿ ಅವಿಭಜಿತ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆ ದಶಕಗಳಿಂದ ಹೈನೋದ್ಯಮದ ಮೇಲೆಯೆ ಹೆಚ್ಚು ಅವಲಂಬಿತವಾಗಿದೆ. ಲಕ್ಷಾಂತರ ಕುಟುಂಬಗಳು ಹಾಲು ಉತ್ಪಾದನೆಯಲ್ಲಿ ತೊಡಗಿಸಿ ಕೊಂಡು ಸ್ವಾವಲಂಬಿ ಜೀವನ ನಡೆಸುತ್ತಿವೆ.

ಆದರೆ ಬೇಸಿಗೆ ಪರಿಣಾಮ ಹಲವು ತಿಂಗಳಿಂದ ಜಿಲ್ಲೆಯಲ್ಲಿ ಹಾಲಿನ ಉತ್ಪಾದನೆಯಲ್ಲಿ ಭಾರೀ ಕುಸಿತ ಕಂಡಿತ್ತು. ಆದರೆ ಈಗ ಮತ್ತೆ ಮುಂಗಾರು ಶುರುವಾದ ಕೂಡಲೇ ಎರಡು ಜಿಲ್ಲೆಗಳಲ್ಲಿ ಹೈನುಗಾರಿಕೆ ಚೇತರಿಕೆ ಹಾದಿ ಹಿಡಿದಿದ್ದು, ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಸಮಾಧಾನ ತಂದಿದೆ. ಇಡೀ ರಾಜ್ಯದಲ್ಲಿಯೆ ಕೋಚಿಮುಲ್‌ ಹಾಲು ಉತ್ಪಾದನೆಯಲ್ಲಿ ಮೊದಲ ಸ್ಥಾನದಲ್ಲಿದೆ. ಪ್ರತಿ ವರ್ಷ ಕೋಟ್ಯಂತರ ರೂ. ಆರ್ಥಿಕ ವಹಿವಾಟು ನಡೆಸುವ ಒಕ್ಕೂಟ ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮೇಗಾ ಡೇರಿಗಳನ್ನು ಹೊಂದಿದೆ. ಎರಡು ಜಿಲ್ಲೆಗಳಲ್ಲಿ 1,928 ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಹೊಂದಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 978 ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಹೊಂದಿದ್ದು, ಲಕ್ಷಾಂತರ ಸಂಖ್ಯೆಯಲ್ಲಿ ಹಾಲು ಉತ್ಪಾದಕ ರೈತರು ಇದ್ದಾರೆ.

ಎರಡು ಜಿಲ್ಲೆಗಳಲ್ಲಿ ಶಾಶ್ವತ ನೀರಾವರಿ ಇಲ್ಲದ ಪರಿಣಾಮ ರೈತರು ತಮ್ಮ ಬದುಕಿನ ಬಂಡಿ ನಡೆಸಲು ಹೈನುಗಾರಿಕೆಯನ್ನು ಹೆಚ್ಚು ಅವಲಂಬಿಸಿದ್ದಾರೆ. ಸದ್ಯ ಮಳೆಗಾಲ ಶುರುವಾಗಿರುವ ಕಾರಣ ರೈತರಿಗೆ ಹಸಿರು ಮೇವು, ಜಾನುವಾರುಗಳಿಗೆ ಅಗತ್ಯ ಕುಡಿಯುವ ನೀರು ಲಭ್ಯವಾಗುತ್ತಿರುವುದರಿಂದ ಹಾಲು ಉತ್ಪಾದನೆಯಲ್ಲಿ ಏರಿಕೆ ಕಂಡು ರೈತರಿಗೆ ಆರ್ಥಿಕವಾಗಿ ಸಂಸಾರದ ನೊಗ ಹೊರಲು ಸಹಾಯಕವಾಗಿ ಹೈನೋದ್ಯಮ ನಿಲ್ಲುವಂತಾಗಿದೆ.

ಮೇವು ಬೆಳೆಯಲು ಪ್ರೋತ್ಸಾಹ ಧನ: ಅವಿಭಜಿತ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ರೈತರಿಗೆ ಪ್ರತಿ ತಿಂಗಳಲ್ಲಿ 15 ದಿನಕ್ಕೊಮ್ಮೆ ಹಾಲು ಪೂರೈಸುವ ರೈತರಿಗೆ ಬಡಾವಡೆ ಮಾಡುತ್ತಿದೆ. ಜೊತೆಗೆ ಕಳೆದ ಒಂದು ವರ್ಷದಿಂದ ಬೆಲೆ ಕಡಿಮೆ ಮಾಡದ ಪರಿಣಾಮ ಎರಡು ಜಿಲ್ಲೆಗಳಲ್ಲಿ ಹಾಲು ಉತ್ಪಾದನೆಯಲ್ಲಿ ಹೆಚ್ಚಳಕ್ಕೆ ಪ್ರಮುಖ ಎಂದು ಒಕ್ಕೂಟದ ಅಧಿಕಾರಿಗಳು ಹೇಳುತ್ತಿದ್ದಾರೆ. ಅಲ್ಲದೇ ಬೇಸಿಗೆಯಲ್ಲಿ ಪ್ರತಿ ರೈತನಿಗೂ ಮೇವು ಬೆಳೆಯಲು 3,000 ರೂ. ಪ್ರೋತ್ಸಾಹ ಧನ ಕೊಟ್ಟಿದ್ದು, ಒಕ್ಕೂಟದಿಂದ ಸಕಾಲದಲ್ಲಿ ರೈತರಿಗೆ ಪಶು ವೈದ್ಯಕೀಯ ಸೇವೆ ಒದಗಿಸುತ್ತಿರುವುದರಿಂದಲೂ ಕೂಡ ಹಾಲು ಉತ್ಪಾದನೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ಹಾಲಿನ ಬೆಲೆ ಇಳಿಕೆ ಮಾಡದೇ ಇರುವುದರ ಜೊತೆಗೆ ಬೇಸಿಗೆಯಲ್ಲಿ ಪ್ರತಿ ರೈತನಿಗೆ ಮೇವು ಬೆಳೆಯಲು ಒಕ್ಕೂಟದಿಂದ 3,000 ರೂ. ಪ್ರೋತ್ಸಾಹ ಧನ ನೀಡಿದ್ದು, ವೈದ್ಯಕೀಯ ಸೇವೆ, ತಾಂತ್ರಿಕ ಸೇವೆ ಸಕಾಲದಲ್ಲಿ ನೀಡಿದ್ದರ ಜೊತೆಗೆ ಮಳೆಗಾಲ ಶುರುವಾಗಿದ್ದರಿಂದ ಹಾಲಿನ ಉತ್ಪಾದನೆಯಲ್ಲಿ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ. ಒಂದೇ ತಿಂಗಳಲ್ಲಿ ಸರಿ ಸುಮಾರು 2.50 ಲಕ್ಷ ಲೀಟರ್‌ ಹಾಲಿನ ಉತ್ಪಾದನೆ ಹೆಚ್ಚಾಗಿದೆ. – ಶ್ರೀನಿವಾಸಗೌಡ, ವ್ಯವಸ್ಥಾಪಕರು, ಕೋಚಿಮುಲ್‌

 

-ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

When will American astronauts return from space?

NASA; ಅಂತರಿಕ್ಷದಲ್ಲೇ ಅತಂತ್ರ! ಬಾಹ್ಯಾಕಾಶದಿಂದ ಅಮೆರಿಕದ ಗಗನಯಾತ್ರಿಗಳು ಮರಳ್ಳೋದು ಯಾವಾಗ?

Annamalai to resign as Tamil Nadu BJP president?

Annamalai; ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು

Udayavani exclusive interview of KN Rajanna

ಡಿಕೆಶಿ ಕಾಂಗ್ರೆಸ್‌ಗೆ ಕಾಲಿಡುವ ಮೊದಲೇ ನೋಟಿಸ್‌, ಉಚ್ಚಾಟನೆ ಎಲ್ಲಾ ನೋಡಿದ್ದೀನಿ…; ರಾಜಣ್ಣ

Don’t act like Rahul, answer with facts: Modi

Lok Sabha; ರಾಹುಲ್‌ ರೀತಿ ವರ್ತಿಸಬೇಡಿ, ಸತ್ಯ ಸಂಗತಿ ಮೂಲಕ ಉತ್ತರಿಸಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್‌

Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್‌

Congress ರಾಜ್ಯ ಸರಕಾರಕ್ಕೆ ಧಮ್‌ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್‌

Congress ರಾಜ್ಯ ಸರಕಾರಕ್ಕೆ ಧಮ್‌ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್‌

1-weewwe

Gudibande: ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

Serial Thief: ಯುವಕರಿಂದ ಸರಣಿ ಕಳ್ಳತನ… CCTV ಯಲ್ಲಿ ಸೆರೆಯಾಯ್ತು ದೃಶ್ಯ

Thief: ಒಂದೇ ಕಟ್ಟಡದ ಐದು ಅಂಗಡಿಗಳಲ್ಲಿ ಸರಣಿ ಕಳ್ಳತನ… CCTV ಯಲ್ಲಿ ಸೆರೆಯಾಯ್ತು ದೃಶ್ಯ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1993 Mumbai riot accused arrested after 31 years

Mumbai; 31 ವರ್ಷ  ಬಳಿಕ ಸೆರೆಸಿಕ್ಕ 1993 ಮುಂಬೈ ಗಲಭೆ ಆರೋಪಿ

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

When will American astronauts return from space?

NASA; ಅಂತರಿಕ್ಷದಲ್ಲೇ ಅತಂತ್ರ! ಬಾಹ್ಯಾಕಾಶದಿಂದ ಅಮೆರಿಕದ ಗಗನಯಾತ್ರಿಗಳು ಮರಳ್ಳೋದು ಯಾವಾಗ?

Annamalai to resign as Tamil Nadu BJP president?

Annamalai; ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.