Muddebihal: ಮದ್ಯ ಮಾರಾಟ ತಡೆಯಲು ಜನಜಾಗೃತಿ: ಗ್ರಾಮಸ್ಥರಿಂದ ಸಾಮೂಹಿಕ ಪ್ರತಿಭಟನೆ


Team Udayavani, Jun 19, 2024, 2:26 PM IST

12-

ಮುದ್ದೇಬಿಹಾಳ: ಗ್ರಾಮೀಣ ಪ್ರದೇಶಗಳಲ್ಲಿ ಯಥೇಚ್ಚವಾಗಿ ನಡೆಯುತ್ತಿರುವ ಅಕ್ರಮ ಮದ್ಯ ಸೇರಿದಂತೆ ಎಲ್ಲ ರೀತಿಯ ಮದ್ಯ, ಸಾರಾಯಿ ಮಾರಾಟ ಸಂಪೂರ್ಣ ನಿಷೇಧಿಸಬೇಕು ಎಂದು ಆಗ್ರಹಿಸಿ ಒಂದಿಡೀ ಗ್ರಾಮಸ್ಥರು ನಡೆಸುತ್ತಿರುವ ಜನಜಾಗೃತಿ ಅಭಿಯಾನ ಅಕ್ಕಪಕ್ಕದ ಗ್ರಾಮಗಳಿಗೂ ಹರಡತೊಡಗಿದ್ದು, ಮದ್ಯ, ಸಾರಾಯಿ ನಿಷೇಧಕ್ಕೆ ಹೆಚ್ಚಿನ ಶಕ್ತಿ ದೊರಕ ತೊಡಗಿದೆ.

5-6 ದಿನಗಳ ಹಿಂದೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಕೃಷ್ಣಾ ನದಿ ತೀರದಲ್ಲಿರುವ ಕೆಸಾಪುರ ಗ್ರಾಮದ ಪ್ರಜ್ಞಾವಂತರ ತಂಡದಿಂದ ಗ್ರಾಮಸ್ಥರ ಸಹಕಾರದೊಂದಿಗೆ ಅಭಿಯಾನ ಶುರುವಾಗಿತ್ತು. ಈಗ ಆ ಅಭಿಯಾನ ಕೆಸಾಪುರ ಗ್ರಾಮದ ಪಕ್ಕದಲ್ಲಿರುವ ಇತಿಹಾಸ ಪ್ರಸಿದ್ದ ಎಚ್ಚರೇಶ್ಚರ ಸ್ವಾಮಿ ದೇವಸ್ಥಾನ ಹೊಂದಿರುವ ನೆರಬೆಂಚಿ ಗ್ರಾಮಕ್ಕೂ ವಿಸ್ತರಿಸಿದೆ.

ಕೆಸಾಪುರ ಗ್ರಾಮದ ಪ್ರಜ್ಞಾವಂತರ ತಂಡ ಕೆಸಾಪುರ ಮಾತ್ರವಲ್ಲದೆ ಪಕ್ಕದ ಬಂಗಾರಗುಂಡ ಗ್ರಾಮದಲ್ಲೂ ಜನಜಾಗೃತಿ ನಡೆಸಿತ್ತು. ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ನೆರಬೆಂಚಿ ಗ್ರಾಮಕ್ಕೆ ತೆರಳಿ ಮದ್ಯ, ಸಾರಾಯಿ ಮಾರಾಟ ಮಾಡದಂತೆ ಅಂಗಡಿ, ಹೊಟೇಲ್, ಮನೆಗಳು, ಪಾನಶಾಪ್ ಮತ್ತಿತರೆಡೆ ಕಳ್ಳತನದಿಂದ ಅಕ್ರಮವಾಗಿ ಮದ್ಯ ಮಾರುವವರ ಮುಂದೆ ಪ್ರತಿಭಟನೆ ನಡೆಸಿ ಇನ್ಮುಂದೆ ಮದ್ಯ ಮಾರದಂತೆ ಎಚ್ಚರಿಕೆ ನೀಡಿದ್ದಾರೆ.

ಗ್ರಾಮಸ್ಥರಲ್ಲೂ ಜಾಗೃತಿ ಮೂಡಿಸಿ ಮದ್ಯ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಮನವರಿಕೆ ಮಾಡಿಕೊಟ್ಟಿದ್ದಾರೆ. ಗ್ರಾಮದಲ್ಲಿ ಕಾಲ್ನಡಿಗೆಯಲ್ಲಿ ಸಾಮೂಹಿಕವಾಗಿ ಸಂಚರಿಸಿ ಎಲ್ಲರಲ್ಲೂ ಅರಿವು ಮೂಡಿಸಿದ್ದಾರೆ.

ಇದರ ಪರಿಣಾಮ ಆಯಾ ಗ್ರಾಮಗಳಲ್ಲಿ ಅಕ್ರಮ ಮದ್ಯ, ಸಾರಾಯಿ ಮಾರಾಟ ಬಂದ್ ಆಗಿದೆ. ಪೊಲೀಸರು ಕೆಲವರ ವಿರುದ್ದ ಕರ್ನಾಟಕ ಅಬಕಾರಿ ಕಾಯ್ದೆ ಅನ್ವಯ ಪ್ರಕರಣಗಳನ್ನೂ ದಾಖಲಿಸಿಕೊಂಡಿದ್ದಾರೆ‌ ಮುಂಬರುವ ದಿನಗಳಲ್ಲಿ ಇದು ಕೃಷ್ಣಾ ನದಿ ತೀರದಲ್ಲಿರುವ ಹಲವು ಗ್ರಾಮಗಳಿಗೂ ವಿಸ್ತರಿಸುವ ಸಂಭವ ಇದೆ.

 

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.