Dharmsthala ಯೋಜನೆ ವತಿಯಿಂದ ರಾಜ್ಯಾದ್ಯಂತ 770 ಕೆರೆ ಪುನಶ್ಚೇತನ: ಆನಂದ್‌ ಸುವರ್ಣ


Team Udayavani, Jun 19, 2024, 2:51 PM IST

13-

ಹುಣಸೂರು: ಎಸ್.ಕೆ.ಡಿ.ಆರ್.ಡಿ.ಪಿ. ವತಿಯಿಂದ ನಮ್ಮೂರು ನಮ್ಮಕೆರೆ ಯೋಜನೆಯಡಿ ರಾಜ್ಯಾದ್ಯಂತ ಈವರೆಗೆ 55 ಕೋಟಿ ವೆಚ್ಚದಡಿ 770 ಕೆರೆಗಳನ್ನು ಪುನಶ್ಚೇತನಗೊಳಿಸಲಾಗಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ದಿ ವಿಭಾಗದ ಪ್ರಾದೇಶಿಕ ನಿರ್ಧೇಶಕ ಆನಂದ್‌ಸುವರ್ಣ ತಿಳಿಸಿದರು.

ತಾಲೂಕಿನ ಯಮಗುಂಬದಲ್ಲಿ ಯೋಜನೆ ವತಿಯಿಂದ ಪುನಶ್ಚೇತನಗೊಳಿಸಿರುವ ಹಳೆಕೆರೆಯನ್ನು ಗ್ರಾಮಸ್ಥರಿಗೆ ಹಸ್ತಾಂತರಿಸಿ, ತುಂಬಿದ ಕೆರೆಗೆ ಬಾಗಿನ ಅರ್ಪಿಸಿ, ನಾಮಪಲಕ ಅನಾವರಣಗೊಳಿಸಿದ ನಂತರ ಮಾತನಾಡಿದರು.

ನಾಡಿನಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುವ ಬರಗಾಲದ ಹಿನ್ನೆಲೆಯಲ್ಲಿ ಜಲ ಸಂರಕ್ಷಿಸುವ ಉದ್ದೇಶದಿಂದ ರಾಜ ಮಹಾರಾಜರ ಕಾಲದಲ್ಲಿ ನಿರ್ಮಿಸಿರುವ ಕೆರೆ-ಕಟ್ಟೆಗಳನ್ನು ಸಮುದಾಯ, ಸರಕಾರದ ಬೆಂಬಲದೊಂದಿಗೆ ಪುನಶ್ಚೇತನಗೊಳಿಸಲು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ-ಹೇಮಾವತಿ ವಿ. ಹೆಗ್ಗಡೆ ನಮ್ಮೂರು ನಮ್ಮ ಕೆರೆ ಯೋಜನೆಯನ್ನು 2014 ರಲ್ಲಿ ಹುಟ್ಟು ಹಾಕಿದ್ದಾರೆ ಎಂದರು.

ಗ್ರಾಮಸ್ಥರು, ಗ್ರಾ.ಪಂ. ಸರಕಾರದ ಸಹಭಾಗಿತ್ವದಲ್ಲಿ ಈವರೆಗೆ 770 ಕೆರೆಗಳನ್ನು ಪುನಶ್ಚೇತನಗೊಳಿಸಲಾಗಿದೆ. ಇದರಿಂದ ಜೀವಜಲ ಸಂರಕ್ಷಣೆ, ಹೂಳೆತ್ತುವುದರಿಂದ ನೀರಿನ ಸಂರಕ್ಷಣೆಯಾಗಿ ಜಾನುವಾರು, ಪ್ರಾಣಿ, ಪಕ್ಷಿಗಳಿಗೆ ಅನುಕೂಲವಾಗಿದೆ. ಕೆರೆ ಸುತ್ತಮುತ್ತಲ ಪ್ರದೇಶದ ಬೋರ್‌ವೆಲ್‌ಗಳು ಪುನಶ್ಚೇತನಗೊಂಡಿವೆ ಎಂದು ಹೇಳಿದರು.

ರಾಜ್ಯದಲ್ಲಿ ಸುಮಾರು 36 ಸಾವಿರಕ್ಕೂ ಹೆಚ್ಚು ಕೆರೆಗಳಿದ್ದು, ಅನೇಕ ಕಡೆಗಳಲ್ಲಿ ಕೆರೆ ಅತಿಕ್ರಮಣ, ತ್ಯಾಜ್ಯ ವಸ್ತುಗಳ ಸಂಗ್ರಹಣೆಯ ತಾಣವಾಗಿವೆ. ತಿಪ್ಪೆಗುಂಡಿಗಳಾಗಿವೆ. ಕೆರೆ ಅಭಿವೃಧ್ದಿ ಸಮಿತಿ ರಚಿಸಿಕೊಂಡು ಅದರ ಸಹಭಾಗಿತ್ವದಲ್ಲಿ ಕೆರೆಗಳ ಪುನಶ್ಚೇತನವನ್ನು ಆದ್ಯತೆಯಾಗಿಸಿಕೊಂಡು ಯೋಜನೆ ರೂಪಿಸಲಾಗಿದೆ. ಸಮಿತಿಯು ಕೆರೆಗಳು ಅತಿಕ್ರಮಣವಾಗದಂತೆ ನೋಡಿಕೊಳ್ಳಬೇಕು. ಕೆರೆಗಳ ಸುತ್ತ ಹಣ್ಣು, ಹೂಗಳ ಸಸಿ ನೆಟ್ಟು ಪೋಷಿಸಬೇಕೆಂದರು.

97 ಸಾವಿರ ವಿದ್ಯಾರ್ಥಿಗಳಿಗೆ ವೇತನ:

ವಿದ್ಯಾನಿಧಿ ಯೋಜನೆಯಡಿ ರಾಜ್ಯಾದ್ಯಂತ 97 ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, 18 ಸಾವಿರ ಅನಾಥರಿಗೆ ತಲಾ ಸಾವಿರ ರೂ. ಮಾಶಾಸನ, 500 ಕ್ಕೂ ಹೆಚ್ಚು ಮಂದಿ ನಿರ್ಗತಿಕರಿಗೆ ವಾತ್ಸಲ್ಯ ಯೋಜನೆಯಡಿ ಮನೆ ನಿರ್ಮಾಣ, ಸಮುದಾಯ ಅಭಿವೃದ್ದಿ ಕಾರ್ಯಕ್ರಮದಡಿ ಡೇರಿ ಕಟ್ಟಡ, ದೇವಾಲಯ, ಸಮುದಾಯ ಭವನ ನಿರ್ಮಾಣಕ್ಕೆ ನೆರವು ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಾಗುತ್ತಿದೆ ಎಂದರು.

ಕೊತ್ತೇಗಾಲ ಗ್ರಾ.ಪಂ. ಕಾರ್ಯದರ್ಶಿ ಆನಂದ್ ಪುನಶ್ಚೇತನಗೊಳಿಸಿರುವ ಈ ಕೆರೆಯ ಸುತ್ತ ವಾಕಿಂಗ್‌ ಪಾಥ್ ನಿರ್ಮಿಸಲಾಗುವುದೆಂದರು. ನಿವೃತ್ತ ಶಿಕ್ಷಕ ಎಸ್.ಎಲ್. ಮಹದೇವಪ್ಪ ಯೋಜನೆ ವತಿಯಿಂದ ಗ್ರಾಮದ ಕೊಳವನ್ನು ಪುನಶ್ಚೇತನಗೊಳಿಸುವಂತೆ ಮನವಿ ಮಾಡಿದರು.

ಕೆರೆ ಸಮಿತಿ ಅಧ್ಯಕ್ಷ ಬಸವರಾಜಪ್ಪ ಕೆರೆ ಅಭಿವೃದ್ದಿಯಿಂದ ಬರಗಾಲ ಬಂದರೂ ನೀರಿಗೆ ತೊಂದರೆ ಇಲ್ಲವೆಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ನಿರ್ದೇಶಕ ಮುರಳೀಧರ್, ನಿರ್ದೇಶಕ ಶಿವಾನಂದ ಆಚಾರ್ಯ, ಕೆರೆ ಇಂಜಿನಿಯರ್ ಪುಷ್ಪರಾಜ್, ತಾಲೂಕು ಯೋಜನಾಧಿಕಾರಿ ನಾರಾಯಣ ಶೆಟ್ಟಿ, ಗ್ರಾ.ಪಂ .ಸದಸ್ಯರಾದ ಸುಂದರಾಚಾರ್ಯ, ಮಹದೇವ ಶೆಟ್ಟಿ, ಯಜಮಾನ್ ಚಂದ್ರಶೆಟ್ಟಿ, ಕೃಷಿ ಮೇಲ್ವಿಚಾರಕ ಅಣ್ಣಪ್ಪ, ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ರೂಪಾ, ಸೇವಾ ಪ್ರತಿನಿಧಿ ಮಂಜುಳ ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

ಟಾಪ್ ನ್ಯೂಸ್

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Hunsur ಮೊಬೈಲ್‌ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್‌

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Grama Panchayat ಮಟ್ಟದಲ್ಲಿ ಟಾಸ್ಕ್ ಪೋರ್ಸ್‌: ಕೃಷ್ಣ ಬೈರೇಗೌಡ

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು

Chirathe

Hunasuru: ಹಬ್ಬನಕುಪ್ಪೆಯಲ್ಲಿ ಬೋನಿಗೆ ಬಿದ್ದ ಚಿರತೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

1-asdsdas

Yakshagana; ಖ್ಯಾತ ಪ್ರಸಾಧನ ಕಲಾವಿದ ಬಾಲಕೃಷ್ಣ ನಾಯಕ್‌ ವಿಧಿವಶ

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

1-sa-dsadsa

Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.