ಬಳ್ಳಾರಿ: ವಿರೋಧ ಲೆಕ್ಕಿಸದೇ ದೇವದಾರಿ ಗಣಿಗೆ ಅನುಮತಿ!


Team Udayavani, Jun 19, 2024, 3:21 PM IST

ಬಳ್ಳಾರಿ: ವಿರೋಧ ಲೆಕ್ಕಿಸದೇ ದೇವದಾರಿ ಗಣಿಗೆ ಅನುಮತಿ!

ಉದಯವಾಣಿ ಸಮಾಚಾರ
ಬಳ್ಳಾರಿ: ಅಪರೂಪದ ಸಸ್ಯ ಹಾಗೂ ಜೀವಸಂಕುಲಗಳಿರುವ ಸಂಡೂರಿನ ದೇವದಾರಿ ಪ್ರದೇಶದಲ್ಲಿ ಕುದುರೆಮುಖ (ಕೆಐಒಸಿಎಲ್‌) ಕಂಪನಿಗೆ ಗಣಿಗಾರಿಕೆಗೆ ಅನುಮತಿ ನೀಡುವಾಗ ಅರಣ್ಯ ಇಲಾಖೆ ವಿರೋಧದ ವರದಿಯನ್ನು
ಮರೆ ಮಾಚಿರುವುದು ಸ್ಥಳೀಯ ಹೋರಾಟಗಾರರ ಕೆಂಗಣ್ಣಿಗೆ ಗುರಿಯಾಗಿದೆ.

ಈ ದೇವದಾರಿ ಪ್ರದೇಶ ಕುಮಾರಸ್ವಾಮಿ ದೇವ ಸ್ಥಾನಕ್ಕೆ ಎರಡೂವರೆ ಕಿ.ಮೀ. ದೂರ ದಲ್ಲಿದೆ. ಅದಕ್ಕೆ ಹೊಂದಿಕೊಂಡು ಈಗಾಗಲೇ ವಿ.ಎಸ್‌. ಲಾಡ್‌, ಎನ್‌ಎಂಡಿಸಿ ಗಣಿಗಾರಿಕೆಗಳಿವೆ. ಈ ಹಿಂದೆ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಸಂಡೂರಿನ ಕುಮಾರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಹಾಲಿ ಕೇಂದ್ರ ಉಕ್ಕು ಸಚಿವ ಎಚ್‌.ಡಿ. ಕುಮಾರಸ್ವಾಮಿ, ಈ ದೇವಸ್ಥಾನದಿಂದ ಮೂರು ಕಿ.ಮೀ. ವ್ಯಾಪ್ತಿ ಪ್ರದೇಶದಲ್ಲಿ ಗಣಿಗಾರಿಕೆಗೆ ನಿಷೇಧ ಹೇರುವುದಾಗಿ ಮಾತುಕೊಟ್ಟಿದ್ದರು ಎನ್ನಲಾಗಿದೆ.

ಸಿಎಂ ಆದಾಗ ಅನುಮತಿ ನೀಡಿರಲಿಲ್ಲ: ಈ ಹಿಂದೆ ನಡೆದ ಅಕ್ರಮ ಗಣಿಗಾರಿಕೆಯಿಂದಾಗಿ ಸಂಡೂರಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅರಣ್ಯ ನಾಶವಾಗಿದೆ. ಸುಮಾರು 500 ಹೆಕ್ಟೇರ್‌ನಷ್ಟು ಗಣಿಪ್ರದೇಶ ಖಾಲಿ ಬಿದ್ದಿದ್ದು, ಅಲ್ಲಿ ಗಣಿಗಾರಿಕೆಗೆ ಅನುಮತಿ ನೀಡಬಹುದಿತ್ತು. ಆದರೆ, ಹಿಂದೆ ಕುಮಾರಸ್ವಾಮಿಯವರೇ ಎರಡು ಬಾರಿ ಸಿಎಂ ಆಗಿದ್ದಾಗ ಅನುಮತಿ ನೀಡದೇ ಈಗ ಕೇಂದ್ರ ಸಚಿವರಾಗುತ್ತಿದ್ದಂತೆ ಕಡತಕ್ಕೆ ಸಹಿ ಹಾಕಲು ಏನು ಕಾರಣ ಎಂಬುದು ಸ್ಥಳೀಯ ಹೋರಾಟಗಾರ ಶ್ರೀಶೈಲ ಆಲ್ದಳ್ಳಿ ಸೇರಿ ಹಲವರ ಪ್ರಶ್ನೆಯಾಗಿದೆ.

ವರದಿ ಮರೆಮಾಚಿದ ಸರ್ಕಾರ: ರಾಜ್ಯ ಸರ್ಕಾರ ದೇವದಾರಿ ಗಣಿ ಪ್ರದೇಶ 482.36
ಹೆಕ್ಟೇರ್‌ ವ್ಯಾಪ್ತಿಯನ್ನು ಕೆಐಒಸಿಎಲ್‌ ಕಂಪನಿಗೆ
ಮೀಸಲಿಟ್ಟು 2017ರಲ್ಲಿ ಅ ಧಿಸೂಚನೆ ಹೊರಡಿಸಿತ್ತು. ಭಾರತದಲ್ಲೇ ಅತ್ಯಂತ ಅಪರೂಪದ ಸಸ್ಯ, ಜೀವ ಸಂಕುಲಗಳಿರುವ ಈ ಪ್ರದೇಶದಲ್ಲಿ ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದು ಅಂದಿನ ಅರಣ್ಯಾಧಿಕಾರಿಗಳು ವಿಸ್ತೃತ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಈ ವರದಿಯನ್ನು ರಾಜ್ಯ ಸರ್ಕಾರ, ಕೇಂದ್ರಕ್ಕೆ ಕಳುಹಿಸಿದೆಯಾ? ಇಲ್ಲವೇ? ಅಥವಾ ಎಲ್ಲಿದೆ ಎಂಬುದು ತಿಳಿಯುತ್ತಿಲ್ಲ. ಒಂದು ವೇಳೆ ರಾಜ್ಯ ಸರ್ಕಾರ ವರದಿಯನ್ನು ಕೇಂದ್ರಕ್ಕೆ ಕಳುಹಿಸಿದ್ದರೆ,  ಕೇಂದ್ರದ ಸಚಿವಾಲಯದಲ್ಲಿ ವರ್ಷ ದಿಂದ ಬಾಕಿಯಿದ್ದ ಕಡತ ತಿರಸ್ಕರಿಸಲಾಗು ತ್ತಿತ್ತು. ಇದೀಗ ಸಚಿ ವರು ಸಹಿ ಹಾಕಿದ್ದಾರೆ ಎಂದರೆ ಅರಣ್ಯ ಅ ಧಿಕಾರಿ ಗಳು ನೀಡಿದ್ದ ವರದಿ ಎಲ್ಲಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿ ಸ ಬೇಕೆಂಬುದು
ಹೋರಾಟಗಾರರ ಒತ್ತಾಯ.

ದೇವದಾರಿ ಪ್ರದೇಶದಲ್ಲಿ ಅಪರೂಪದ ಮರಗಳು
ಸಂಡೂರಿನ ದೇವದಾರಿ ಗಣಿಪ್ರದೇಶದಲ್ಲಿ ಗಣಿಗಾರಿಕೆಯಿಂದ 99 ಸಾವಿರದಷ್ಟು ಮರಗಳಿಗೆ ಕೊಡಲಿಪೆಟ್ಟು ಬೀಳಲಿದೆ. ಈ
ಪ್ರದೇಶದಲ್ಲಿ ಅಪರೂಪದ ಮರಗಳಿವೆ. ಅದೇ ರೀತಿ ಈ ಪ್ರದೇಶದಲ್ಲಿ ಹಲವಾರು ವನ್ಯಜೀ ವಿ ಸಂಕುಲಗಳಿವೆ. ಈ ಕಾಡಿ
ನೊಂದಿಗೆ ಹೊಂದಿಕೊಂಡು ಜೀವಿಸುತ್ತಿರುವ ಜನರಿಗೆ, ಜೀವಿಗಳಿಗೆ ಗಣಿಗಾರಿಕೆ, ಅರಣ್ಯ \ನಾಶವಾಗಿ ದೀರ್ಘ‌ಕಾಲಿಕ ಕಾಯಿಲೆಗಳು
ಬರುವ ಸಾಧ್ಯತೆಯೂ ಇದೆ. ಹೀಗಾಗಿ ಗಣಿಗಾರಿಕೆಗೆ ಅನುಮತಿ ನೀಡದಂತೆ ಅರಣ್ಯ ಅಧಿ ಕಾರಿಗಳು ಸರ್ಕಾರಕ್ಕೆ ಸಲ್ಲಿಸಿದ್ದ ವರದಿ
ಯಲ್ಲಿ ಉಲ್ಲೇಖೀಸಿದ್ದರು. ಆದರೆ, ಈ ವರದಿ ಪರಿಗಣಿಸದೇ ಸಚಿವ ಎಚ್‌. ಡಿ.ಕುಮಾರ ಸ್ವಾಮಿ ಅವರು ಗಣಿಗಾ ರಿಕೆ ಕಡತಕ್ಕೆ ಸಹಿ
ಹಾಕಿರುವುದು ಕುತೂಹಲಕ್ಕೆ ಕಾರಣವಾಗಿದೆ.

*ವೆಂಕೋಬಿ ಸಂಗನಕಲು

ಟಾಪ್ ನ್ಯೂಸ್

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

10

ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ

Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sp

Ballari: ನೂತನ ಎಸ್ ಪಿಯಾಗಿ ಶೋಭಾ ರಾಣಿ ನೇಮಕ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

1-qeqewqe

Ballari: ನಾಲ್ವರು ರೈತರಿಂದ ವಿಷಸೇವಿಸಿ ಆತ್ಮಹತ್ಯೆ ಯತ್ನ

MUST WATCH

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

ಹೊಸ ಸೇರ್ಪಡೆ

1-sadsad

Italy; ಕೈ ತುಂಡಾದ ಭಾರತೀಯ ಕಾರ್ಮಿಕನನ್ನು ರಸ್ತೆಗೆ ಎಸೆದ ಮಾಲಕ ಅರೆಸ್ಟ್

koo

Koo: ದಿನಂಪ್ರತಿ ‘ಕೂ’ ಹೇಳುತ್ತಿದ್ದ ಹಕ್ಕಿ ಮೌನವಾಯಿತು, ಸಾಮಾಜಿಕ ಮಾಧ್ಯಮ ಕೂ ಆ್ಯಪ್ ಸ್ಥಗಿತ

1-mofdd

NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

SSMB29:‌ ರಾಜಮೌಳಿ – ಮಹೇಶ್‌ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್

1-mangaluru

Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.