![Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ](https://www.udayavani.com/wp-content/uploads/2024/07/1-4-415x249.jpg)
Hospete: ಸ್ಮಾರಕಗಳ ಮಹತ್ವ, ಸಂರಕ್ಷಣೆ ಮುಂದಿನ ಪೀಳಿಗೆಗೆ ತಿಳಿಸೋದು ಅಗತ್ಯ: ಡಿಸಿ ದಿವಾಕರ್
Team Udayavani, Jun 19, 2024, 3:18 PM IST
![14-hospete](https://www.udayavani.com/wp-content/uploads/2024/06/14-hospete-620x372.jpg)
ಹೊಸಪೇಟೆ: ಸ್ಮಾರಕಗಳ ಸಂರಕ್ಷಣೆ ಮತ್ತು ಅವುಗಳ ಮಹತ್ವ ಮುಂದಿನ ಪೀಳಿಗೆಗೆ ತಿಳಿಸುವ ಕಾಯಕದೊಂದಿಗೆ ನೈಜ ಇತಿಹಾಸ ಪಸರಿಸುವ ಕಾರ್ಯವಾಗಬೇಕಿದೆ ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಹೇಳಿದರು.
ಪತ್ರಿಕಾ ದಿನಾಚರಣೆ ನಿಮಿತ್ತ ವಿಜಯನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸಹಯೋಗದಲ್ಲಿ ಬುಧವಾರ ಹಂಪಿಯಲ್ಲಿ ಆಯೋಜಿಸಿದ್ದ ಪಾರಂಪರಿಕ ನಡಿಗೆಗೆ ಚಾಲನೆ ನೀಡಿ ಮಾತನಾಡಿದರು.
ಹಂಪಿಯ ರಾಣಿ ಸ್ನಾನಗೃಹದ ಬಳಿ ಚಾಲನೆ ನೀಡಿ ಮಾತನಾಡಿದ ಅವರು, ಈ ಭಾಗದಲ್ಲಿ ಐತಿಹಾಸಿಕ ಸ್ಮಾರಕಗಳು ಇರೋದು ನಮ್ಮ ಭಾಗದ ಹೆಮ್ಮೆಯಾಗಿದೆ. ಆ ಸ್ಮಾರಕಗಳನ್ನು ಸಂರಕ್ಷಣೆ ಮಾಡಿ, ನೈಜ ಇತಿಹಾಸ ಮುಂದಿನ ಪೀಳಿಗೆಗೆ ತಿಳಿಸುವ ಕೆಲಸವಾಗಬೇಕಿದೆ ಎಂದರು.
ವಿಜಯನಗರ ಎಸ್ಪಿ ಶ್ರೀಹರಿಬಾಬು ಬಿ.ಎಲ್. ಮಾತಮಾಡಿ, ಪತ್ರಕರ್ತರು ಪಾರಂಪಾರಿಕ ನಡಿಗೆ ಮಾಡುತ್ತಿರುವುದು ಉತ್ತಮ ಕಾರ್ಯವಾಗಿದೆ. ಈ ಭಾಗದ ಸ್ಮಾರಕ ಉಳಿವಿಗೆ ಅರಿವಿಗೆ ಇದು ಸಹಕಾರಿಯಾಗಲಿದೆ ಎಂದು ಹೇಳಿದರು.
ಹಂಪಿ ವಲಯದ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧೀಕ್ಷಕ ನಿಹಿಲ್ ದಾಸ್ ಮಾತನಾಡಿ, ಹಂಪಿ ಅನ್ನೋದೊಂದು ಅದ್ಭುತ. ಇಲ್ಲಿ ಪ್ರವಾಸೋದ್ಯಮ ಇನ್ನೂ ಅಭಿವೃದ್ಧಿಯಾದರೆ ಈ ಭಾಗದ ಜನರಿಗೆ ಉದ್ಯೋಗವಕಾಶಗಳು ಸಿಗುತ್ತವೆ. ಹಂಪಿಯ ಸಮಗ್ರ ಅಭಿವೃದ್ಧಿಗೆ ಈಗಾಗಲೇ ನೀಲನಕ್ಷೆ ತಯಾರು ಮಾಡಲಾಗಿದೆ. ಯಾವುದೇ ಕಾರಣಕ್ಕೂ ಈ ಭಾಗದ ಜನರು ಹಂಪಿಯನ್ನು ಕಳೆದುಕೊಳ್ಳಬಾರದು. ಹಂಪಿಯ ಒಂದೊಂದು ಕಲ್ಲುಗಳು ಒಂದೊಂದು ಕಥೆಗಳನ್ನು ಹೇಳುತ್ತವೆ. ಈ ಭಾಗದ ಜನರಿಗೆ ಹಂಪಿಯ ಸಮಗ್ರ ಅಭಿವೃದ್ಧಿಯಿಂದಾಗಿ ಅದ್ಭುತ ಉದ್ಯೋಗವಕಾಶಗಳು ಸಿಗುತ್ತದೆ ಎಂದರು.
ರಾಣಿ ಸ್ನಾನ ಗೃಹದಿಂದ ಪ್ರಾರಂಭವಾದ ಪಾರಂಪರಿಕ ನಡಿಗೆ ಮಹಾನವಮಿ ದಿಬ್ಬ, ಪಾನ್ ಸುಪಾರಿ ಬಜಾರ್, ಪಟ್ಟಣದ ಎಲ್ಲಮ್ಮ ದೇಗುಲ, ಗಜಶಾಲೆ, ಕಮಲ ಮಹಲ್ ಮೂಲಕ ಸಾಗಿ ಹಜಾರಾರಾಮ ದೇವಸ್ಥಾನದ ಆವರಣಕ್ಕೆ ಮುಕ್ತಾಯಗೊಂಡಿತು.
ಪಿ. ಸತ್ಯನಾರಾಯಣ, ಪ್ರಧಾನ ಕಾರ್ಯದರ್ಶಿ ಕೆ. ಲಕ್ಷ್ಮಣ, ಕಾನಿಪ ಸಂಘದ ರಾಜ್ಯ ಸಮಿತಿ ಸದಸ್ಯ ವೆಂಕೋಬ ನಾಯಕ ಪೂಜಾರ್, ಜಿಲ್ಲಾಧ್ಯಕ್ಷ, ಖಜಾಂಚಿ ವೆಂಕಟೇಶ್, ಪ್ರವಾಸೋದ್ಯಮ ಇಲಾಖೆಯ ಡಿಡಿ ಪ್ರಭುಲಿಂಗ ತಳಕೇರಿ, ಭಾರತೀಯ ಪುರಾತತ್ವ ಇಲಾಖೆಯ ಸಹಾಯಕ ಅಭಿಯಂತರ ವಿನೋಜ್ ಕುಮಾರ್, ಸಂರಕ್ಷಣಾ ಸಹಾಯಲರಾದ ಸುನೀಲ್ ಕುಮಾರ್ ಎಂ.ಸಿ., ಎಚ್.ರವೀಂದ್ರನಾಥ್, ಪತ್ರಕರ್ತರಾದ ಅನಂತ, ಶ್ರೀನಿವಾಸ್, ಬಸಾಪುರ ಬಸವರಾಜ್, ಕೆ. ಸುರೇಶ್ ಚೌವ್ಹಾಣ್, ಮಂಜುನಾಥ್ ಅಯ್ಯಸ್ವಾಮಿ, ಅನಂತ ಪದ್ಮನಾಭ ರಾವ್, ಜಯಪ್ಪ ರಾಥೋಡ್, ಭೀಮಾ ನಾಯ್ಕ್, ಅಂಬರೀಶ್ ವಾಲ್ಮೀಕಿ, ಖವಾಸ್ ಕೆಬಿ, ಇಂದಿರಾ ಕಲಾಲ್, ಸಂಜಯ್ ಕುಮಾರ್ ಮುರೋಳ್, ಅನೂಪ್ ಕುಮಾರ್, ಮೃತ್ಯುಂಜಯ ಹಿರೇಮಠ್, ಛಾಯಾಗ್ರಾಹಕರಾದ ವಿಜಯ್ ಕುಮಾರ್, ಕೊಟ್ರೇಶ್, ಮೈನು ಇದ್ದರು.
ಹಂಪಿ ಸಿಪಿಐ, ಯಾತನೂರ್, ಪಿಎಸ್ಐ ಶಿವಕುಮಾರ್, ಪ್ರವಾಸಿ ಮಾರ್ಗದರ್ಶಿಗಳಾದ ಈರಣ್ಣ ಪೂಜಾರಿ, ವಿರೂಪಾಕ್ಷಿ, ಡಾ. ವಿಶ್ವನಾಥ್ ಮಾಳ್ಗಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
![Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ](https://www.udayavani.com/wp-content/uploads/2024/07/1-4-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![SSLC ಫಲಿತಾಂಶ ಕುಸಿತ: ಡಿಡಿಪಿಐ ಅಮಾನತಿಗೆ ಸಿದ್ದರಾಮಯ್ಯ ಆದೇಶ](https://www.udayavani.com/wp-content/uploads/2024/06/cm-Siddu-2-150x104.jpg)
SSLC ಫಲಿತಾಂಶ ಕುಸಿತ: ಡಿಡಿಪಿಐ ಅಮಾನತಿಗೆ ಸಿದ್ದರಾಮಯ್ಯ ಆದೇಶ
![1-wqewqewq](https://www.udayavani.com/wp-content/uploads/2024/06/1-wqewqewq-150x97.jpg)
Vijayanagara;ಅಧಿಕಾರಿಗಳ ಕಾರ್ಯವೈಖರಿಯಿಂದ ನಾನು ಅಸಂತುಷ್ಟ: ಸಿಎಂ ಕಿಡಿ
![ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಸ್ಥಳದಲ್ಲೇ ಮೃತ್ಯು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ](https://www.udayavani.com/wp-content/uploads/2024/06/electrick-150x102.jpg)
ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಸ್ಥಳದಲ್ಲೇ ಮೃತ್ಯು… ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
![ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್](https://www.udayavani.com/wp-content/uploads/2024/05/aa-5-150x94.jpg)
ನಡು ರಸ್ತೆಯಲ್ಲೇ ಧರಣಿ ಕುಳಿತ ಮಾಜಿ ಸಚಿವ ಆನಂದ ಸಿಂಗ್
![5-vijayanagara](https://www.udayavani.com/wp-content/uploads/2024/05/5-vijayanagara-150x90.jpg)
Rain: ಹಲವು ವರ್ಷಗಳ ನಂತರ ಕೆರೆಗಳಿಗೆ ನೀರು; ರೈತರ ಮೊಗದಲ್ಲಿ ಮಂದಹಾಸ
MUST WATCH
ಹೊಸ ಸೇರ್ಪಡೆ
![Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ](https://www.udayavani.com/wp-content/uploads/2024/07/1-4-150x90.jpg)
Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ
![Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ](https://www.udayavani.com/wp-content/uploads/2024/07/rohiit-150x83.jpg)
Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ
![8-udupi](https://www.udayavani.com/wp-content/uploads/2024/07/8-udupi-150x90.jpg)
Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್
![Herbal: ಪಂಕಜ ಕಸ್ತೂರಿ ಹರ್ಬಲ್ ಗೆ ಅತ್ತ್ಯುತ್ತಮ ಹೆಲ್ತ್ ಕೇರ್ ಬ್ರ್ಯಾಂಡ್ ಮನ್ನಣೆ](https://www.udayavani.com/wp-content/uploads/2024/07/Pankaja-150x98.jpg)
Herbal: ಪಂಕಜ ಕಸ್ತೂರಿ ಹರ್ಬಲ್ ಗೆ ಅತ್ತ್ಯುತ್ತಮ ಹೆಲ್ತ್ ಕೇರ್ ಬ್ರ್ಯಾಂಡ್ ಮನ್ನಣೆ
![Naxal chandru- Naxal Chandru arrested after 19 years; What is the case?](https://www.udayavani.com/wp-content/uploads/2024/07/Naxal-150x86.jpg)
Naxal chandru-19 ವರ್ಷದ ಬಳಿಕ ನಕ್ಸಲ್ ಚಂದ್ರು ಸೆರೆ; ಏನಿದು ಪ್ರಕರಣ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.