![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 19, 2024, 2:22 PM IST
ಉದಯವಾಣಿ ಸಮಾಚಾರ
ಗದಗ: ಅಧಿಕ ಮಳೆಯಿಂದಾಗುವ ಅತಿವೃಷ್ಟಿ ನಿಯಂತ್ರಣಕ್ಕೆ ಜಿಲ್ಲೆಯ ವಿವಿಧ ಇಲಾಖೆ ಅ ಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಮೂಲಕ ಜನ-ಜಾನುವಾರುಗಳ ಜೀವಹಾನಿ ತಡೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಪ್ರಸಕ್ತ ಸಾಲಿನ ಅತಿವೃಷ್ಟಿಯಿಂದಾದ ಹಾನಿಯ ಕುರಿತು ಮಂಗಳವಾರ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ಉಂಟಾಗುವ ಸಾರ್ವಜನಿಕರ ಆಸ್ತಿ ಪಾಸ್ತಿ ಹಾನಿ ತಪ್ಪಿಸಲು ಅಗತ್ಯದ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು.
ಅತಿವೃಷ್ಟಿಯಿಂದ ಪ್ರವಾಹ ಉಂಟಾಗಬಹುದಾದ ಜಿಲ್ಲೆಯ 11 ಗ್ರಾಮಗಳು ಹಾಗೂ ನಗರ ಪ್ರದೇಶದ 14 ವಾರ್ಡ್ಗಳನ್ನು
ಗುರುತಿಸಲಾಗಿದೆ. ಅಧಿಕ ಪ್ರಮಾಣದ ಮಳೆ ಸುರಿದರೆ ತಕ್ಷಣ ಅಧಿಕಾರಿಗಳು ಗುರುತಿಸಲಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣ ಕುರಿತಂತೆ ಕ್ರಮ ವಹಿಸಬೇಕು ಎಂದರು.
ಜಿಲ್ಲೆಯಲ್ಲಿ ಹರಿದಿರುವ ಮಲಪ್ರಭಾ ನದಿ ಹಾಗೂ ಬೆಣ್ಣೆ ಹಳ್ಳ ಪ್ರವಾಹದಿಂದ ನರಗುಂದ ತಾಲೂಕಿನ 16 ಹಾಗೂ ರೋಣ ತಾಲೂಕಿನ 16 ಗ್ರಾಮಗಳು ಪ್ರವಾಹಕ್ಕೊಳಗಾಗುವ ಸಂಭವವಿದೆ. ಆ ಭಾಗದ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು. ತುಂಗಭದ್ರಾ ನದಿ ಪ್ರವಾಹದಿಂದ ಶಿರಹಟ್ಟಿ ತಾಲೂಕಿನ 10 ಹಾಗೂ ಮುಂಡರಗಿ ತಾಲೂಕಿನ 11 ಗ್ರಾಮಗಳು ಬಾ ಧಿತವಾಗುವ
ಹಳ್ಳಿಗಳೆಂದು ಗುರುತಿಸಲಾಗಿದೆ. ಅಲ್ಲಿಯೂ ಸಹ ಅಧಿಕಾರಿಗಳು ನಿರಂತರ ನಿಗಾ ವಹಿಸುವ ಮೂಲಕ ಜೀವ ಹಾನಿ ತಡೆಗೆ ಮುಂದಾಗುವಂತೆ ಸೂಚಿಸಿದರು.
ಮಲಪ್ರಭಾ ಹಾಗೂ ಬೆಣ್ಣೆಹಳ್ಳ ಪ್ರವಾಹದಿಂದ ಹಾನಿಗೊಳಗಾಗಬಹುದಾದ ಜನವಸತಿ ಪ್ರದೇಶಗಳಲ್ಲಿ ಅಗತ್ಯವಿದ್ದಲ್ಲಿ ಕಾಳಜಿ
ಕೇಂದ್ರ ತೆರೆಯಲು ಈಗಾಗಲೇ ನರಗುಂದ ತಾಲೂಕಿನ 12, ರೋಣ ತಾಲೂಕಿನ 16 ಸ್ಥಳ ಗುರುತಿಸಲಾಗಿದೆ. ಅದೇ ತರಹ ಮುಂಡರಗಿ ತಾಲೂಕಿನ 8, ಶಿರಹಟ್ಟಿ ತಾಲೂಕಿನ 10 ಸ್ಥಳ ಗುರುತಿಸಿದೆ. ಅದರಂತೆ 4 ಗೋಶಾಲೆ ತೆರೆಯಲು ಸ್ಥಳ ನಿಗದಿಪಡಿಸಿ ಇಟ್ಟುಕೊಳ್ಳಲಾಗಿದೆ ಎಂದರು. ಅತಿವೃಷ್ಟಿಯಿಂದಾಗುವ ಮನೆ ಹಾಗೂ ಬೆಳೆ ಹಾನಿಗೆ ಸರ್ಕಾರದ ನಿರ್ದೇಶನದಂತೆ ಕ್ರಮ ವಹಿಸಿ ಪರಿಹಾರ ವಿತರಣೆ ಮಾಡಬೇಕು. ಅಗತ್ಯವಿದ್ದಲ್ಲಿ ಜಂಟಿ ಸಮೀಕ್ಷೆ ಮೂಲಕ ಹಾನಿಯ ಪ್ರಮಾಣ ಗುರುತಿಸಿ ಪರಿಹಾರಕ್ಕೆ ಮುಂದಾಗುವಂತೆ ಸೂಚಿಸಿದರು.
ದಿಢೀರ್ ಅತಿವೃಷ್ಟಿಯಿಂದ ಗ್ರಾಮಗಳು ಜಲಾವೃತವಾದಲ್ಲಿ ತಕ್ಷಣ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ರಕ್ಷಣಾ ಸಾಮಗ್ರಿಗಳೊಂದಿಗೆ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ಮಾಡಬೇಕು. ಕಾರ್ಯಾಚರಣೆಗೆ ಅಗತ್ಯವಿರುವ ಸಾಮಗ್ರಿಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಭರತ್ ಎಸ್., ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ., ಉಪವಿಭಾಗಾಧಿಕಾರಿ ವೆಂಕಟೇಶ ನಾಯ್ಕ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಾರುತಿ ಬ್ಯಾಕೊಡ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ರಮೇಶ ಪಾಟೀಲ, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ
ಶಿರಾಳ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.