Muddebihal ಕ್ರೂಸರ್ ಪಲ್ಟಿ: 15 ಮಂದಿಗೆ ಗಾಯ: ಮೂವರು ಗಂಭೀರ
Team Udayavani, Jun 19, 2024, 5:11 PM IST
ಮುದ್ದೇಬಿಹಾಳ: ತಾಲೂಕಿನ ಯರಗಲ್ಲ ಮದರಿ ಹತ್ತಿರ ಇರುವ ಶ್ರೀ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಸಿಬ್ಬಂದಿ ಮತ್ತು ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಕ್ರೂಸರ್ ಜೀಪ್ ಪಲ್ಟಿಯಾಗಿ 15 ಮಂದಿ ಗಾಯಗೊಂಡಿದ್ದು ಇವರಲ್ಲಿ ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಕೋಳೂರು ಗ್ರಾಮದ ಆಲಮಟ್ಟಿ ಎಡದಂಡೆ ಕಾಲುವೆಯ ಹತ್ತಿರ ನಡೆದಿದೆ.
ಮುದ್ದೇಬಿಹಾಳದ ಅನೀ ವಡ್ಡರ, ಮುದ್ನಾಳದ ವಿಠ್ಠಲ ನಾವಿ, ಮುಧೋಳದ ಮಲ್ಲಿಕಾರ್ಜುನ ಕುಂಬಾರ ಗಂಭೀರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ವೀರೇಶ ಕುಂಬಾರ, ಹುಲಗಪ್ಪ ಮಾದರ, ಆನಂದ ಹಿರೇಕುರುಬರ, ವೀರಣ್ಣ ಹೆಬ್ಬಾಳ, ಮುತ್ತು ಹಿರೇಮಠ, ಮಹ್ಮದ್ ಲಾಹೋರಿ, ಪ್ರಶಾಂತ ಕಮತಗಿ, ಮನೋಜ ಪತ್ರಿಮಠ, ಬಸವರಾಜ ಬಿರಾದಾರ, ವಿಠ್ಠಲ ಗೋಕಾಕ, ಕಾರ್ಖಾನೆಯ ಆಡಳಿತ ವಿಭಾಗದಲ್ಲಿ ಕ್ಲರ್ಕ್ ಆಗಿರುವ ಮುದ್ದೇಬಿಹಾಳ ಕಾಂಗ್ರೆಸ್ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ, ಜಿಲ್ಲಾ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿ ಶೋಬಾ ಶಳ್ಳಗಿ ಗಾಯಗೊಂಡವರಾಗಿದ್ದಾರೆ.
ಇವರೆಲ್ಲರೂ ಮುದ್ದೇಬಿಹಾಳ, ಚಲಮಿ, ಯರಗಲ್ಲ. ಮುಧೋಳಕ್ಕೆ ಸೇರಿದವರಾಗಿದ್ದಾರೆ.
ಗಾಯಾಳುಗಳಿಗೆ ಇಲ್ಲಿನ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯ ಡಾ. ಪರಶುರಾಮ ವಡ್ಡರ ನೇತೃತ್ವದ ವೈದ್ಯಕೀಯ ಸಿಬ್ಬಂದಿ ಪ್ರಾಥಮಿಕ ಚಿಕಿತ್ಸೆ ನೀಡಿದರು.
ಜೀಪ್ ಪಲ್ಟಿ ಆಗಲು ನಿಖರ ಕಾರಣ ತಕ್ಷಣಕ್ಕೆ ತಿಳಿದು ಬಂದಿಲ್ಲ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಖಾನೆಯ ಆಡಳಿತ ಮಂಡಳಿಯವರು ಘಟನೆಗೆ ವಿಷಾದ ವ್ಯಕ್ತಪಡಿಸಿದ್ದು ತಕ್ಷಣವೇ ಎಲ್ಲರಿಗೂ ಚಿಕಿತ್ಸೆ ಕೊಡಿಸಲು ಕ್ರಮ ಕೈಕೊಂಡಿದ್ದು ಅಲ್ಲದೆ ಬಾಗಲಕೋಟೆ ಆಸ್ಪತ್ರೆಗೆ ದಾಖಲಾದವರ ಚಿಕಿತ್ಸಾ ವೆಚ್ಚ ಭರಿಸಲು ಕ್ರಮ ಕೈಕೊಂಡು ಮಾನವೀಯ ನೆರವು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ
ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ
Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ
Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ
Mudhol ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ
Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ
Ullal: ಟಿಪ್ಪರ್ ಅಪಘಾತ; ಗಾಯಾಳು ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು
Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.