ಬಳ್ಳಾರಿಯಲ್ಲಿ ಮತ್ತೆ ಗಣಿಗಾರಿಕೆಗೆ ಅನುಮತಿ ಸರಿಯಲ್ಲ-ಹೋರಾಟಕ್ಕೆ ಸಜ್ಜು: ಹಿರೇಮಠ

450 ಎಕರೆ ಪ್ರದೇಶದ 99330 ಮರಗಳ ಮಾರಣಹೋಮ...

Team Udayavani, Jun 19, 2024, 5:44 PM IST

ಬಳ್ಳಾರಿಯಲ್ಲಿ ಮತ್ತೆ ಗಣಿಗಾರಿಕೆಗೆ ಅನುಮತಿ ಸರಿಯಲ್ಲ-ಹೋರಾಟಕ್ಕೆ ಸಜ್ಜು: ಹಿರೇಮಠ

ಧಾರವಾಡ: ಅಕ್ರಮ ಗಣಿಗಾರಿಕೆಯಿಂದ ಬೆಂಡಾಗಿರುವ ಬಳ್ಳಾರಿಯಲ್ಲಿ ಕೇಂದ್ರ-ರಾಜ್ಯ ಸರಕಾರಗಳೇ ಮತ್ತೆ ಗಣಿಗಾರಿಕೆಗೆ ಅನುಮತಿ ನೀಡಲು ಮುಂದಾಗಿರುವುದು ಸರಿಯಲ್ಲ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್‌.ಆರ್‌. ಹಿರೇಮಠ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ಈ ಹಿಂದೆ ಅವ್ಯಾಹತವಾಗಿ ನಡೆದಿತ್ತು. ಸುಪ್ರೀಂ
ಕೋರ್ಟ್‌ ಮಧ್ಯೆ ಪ್ರವೇಶಿಸಿ ಅರಣ್ಯ ಸಂರಕ್ಷಿಸುವ ಕೆಲಸ ಮಾಡಿತ್ತು. ಆದರೆ ಈ ಸಂರಕ್ಷಿತ ಅರಣ್ಯ ಪ್ರದೇಶವು ಈಗ ಗಂಡಾಂತರಕ್ಕೆ ಸಿಲುಕಿದೆ ಎಂದರು. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಕುಮಾರಸ್ವಾಮಿ ಭಾಗದ ಸ್ವಾಮಿಮಲೈ ಅರಣ್ಯ ಪ್ರದೇಶದಲ್ಲಿನ ಗಣಿಗಾರಿಕೆಯನ್ನು ಕೆಐಒಸಿಎಲ್‌ ಕಂಪನಿಗೆ ಗುತ್ತಿಗೆ ನೀಡಲಾಗುತ್ತಿದೆ.

ಈ ಕಂಪನಿಗೆ ಪಶ್ಚಿಮಘಟ್ಟ ಪ್ರದೇಶದಲ್ಲಿ ಎರಡು ದಶಕಗಳ ಹಿಂದೆ ಗಣಿಗಾರಿಕೆ ನಿಷೇಧಿಸಿ ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ. ಆದರೂ ಅದೇ ಕಂಪನಿಗೆ ಗುತ್ತಿಗೆ ನೀಡಲಾಗುತ್ತಿದೆ. ಜತೆಗೆ ವಿಶ್ವೇಶ್ವರಯ್ಯ ಐರನ್‌ ಆ್ಯಂಡ್‌ ಸ್ಟೀಲ್‌ ಕಂಪನಿಗೆ ಗುತ್ತಿಗೆ ನೀಡುವುದನ್ನು ರದ್ದುಪಡಿಸಬೇಕು. ಇಲ್ಲವಾದರೆ, ಸಂಡೂರು ತಾಲೂಕಿನ ಕುಮಾರಸ್ವಾಮಿ ಭಾಗದಲ್ಲಿ 450 ಎಕರೆ ಪ್ರದೇಶದ 99330 ಮರಗಳ ಮಾರಣಹೋಮವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

29 ಸಾವಿರ ಮರ ನಾಶ: ಅದೇ ರೀತಿ ಮೆ| ವಿಐಎಸ್‌ಎಲ್‌/ ಎಸ್‌ಎಐಎಲ್‌ ಕಂಪನಿಗೆ ನೀಡಿರುವ ದೇವದಾರು ಪ್ರದೇಶವು ದಟ್ಟ ಹರಿದ್ವರ್ಣ ಅರಣ್ಯಗಳಿಂದ ಕೂಡಿದ್ದು,  ಇಲ್ಲಿ 150 ಎಕರೆ ಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲು ಸರಕಾರ ಸಿದ್ಧವಾಗಿದೆ. ಇದರಿಂದ 29,400 ಮರಗಳು ಗಣಿಗಾರಿಕೆಗೆ ಆಹುತಿಯಾಗುತ್ತವೆ. ಆದ್ದರಿಂದ ಈ ಗಣಿಗಾರಿಕೆಯನ್ನು ರದ್ದುಪಡಿಸಬೇಕು ಎಂದು
ಒತ್ತಾಯಿಸಿದರು. ಈ ಹಿಂದೆ ನಡೆದ ಅಕ್ರಮ ಗಣಿಗಾರಿಕೆಯಲ್ಲಿ ಈಗಾಗಲೇ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಹಾಕಿಸಿಕೊಂಡು ಅನೇಕರು ಜೈಲಿಗೆ ಹೋಗಿ ಬಂದಿದ್ದಾರೆ. ಈಗ ಅದೇ ಮರುಕಳಿಸಬಾರದು.

ಅಪರೂಪದ ಜೈವಿಕ ವೈವಿಧ್ಯತೆ ಇರುವ ಅರಣ್ಯ ಪ್ರದೇಶ ಅದಾಗಿದೆ. ಇದಕ್ಕೆ ನಾವು ಕಪ್ಪತಗುಡ್ಡದ ರೀತಿಯಲ್ಲಿ ಹೋರಾಟ ಮಾಡುತ್ತೇವೆ. ಸಿಎಂ ಹಾಗೂ ಕಾನೂನು ಸಚಿವರನ್ನೂ ಭೇಟಿ ಮಾಡುತ್ತೇವೆ. ಇದಲ್ಲದೇ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಸುದರ್ಶನ ರೆಡ್ಡಿ ಅವರು ಸಹ ಭೇಟಿಗೆ ಅವಕಾಶ ಕೊಟ್ಟಿದ್ದಾರೆ. ಅವರನ್ನು ಭೇಟಿಯಾಗಿ ಸಮಗ್ರ ಚಿತ್ರಣ ನೀಡುತ್ತೇವೆ. ಸುಪ್ರೀಂ ಕೋರ್ಟ್‌ ನ್ಯಾಯ ಎತ್ತಿ ಹಿಡಿಯುತ್ತದೆ ಎಂಬ ವಿಶ್ವಾಸವಿದೆ. ಸಾರ್ವಜನಿಕರು ಈ ಬಗ್ಗೆ ಎಚ್ಚೆತ್ತುಕೊಂಡು ಹೋರಾಟಕ್ಕೆ ಸಜ್ಜಾಗಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

vijaya-sankeshwar1

ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Mahesh

Hubli; ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಿದ್ದರೆ ನಮ್ಮ ಹೈಕಮಾಂಡ್..: ಮಹೇಶ ಟೆಂಗಿನಕಾಯಿ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

vijaya-sankeshwar1

ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.