ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಉದಾಸೀನವೇಕೆ?


Team Udayavani, Jun 19, 2024, 6:07 PM IST

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಉದಾಸೀನವೇಕೆ?

■ ಉದಯವಾಣಿ ಸಮಾಚಾರ
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ವೇಗ ನೀಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉದಾಸೀನ ಮನೋಭಾವ ತಾಳಿವೆ. ಹಾಗಾಗಿ ಹೋರಾಟವನ್ನು ತೀವ್ರಗೊಳಿಸುವುದು ಅನಿವಾರ್ಯ ಎಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ. ಲಿಂಗಾರೆಡ್ಡಿ ಹೇಳಿದರು.

ಮಂಗಳವಾರ ನಡೆದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಎದುರಾದ ಹಿನ್ನಲೆಯಲ್ಲಿ ಸಹಜವಾಗಿ
ಹೋರಾಟದಿಂದ ಹಿಂದೆ ಸರಿದಿದ್ದೆವು. ಚುನಾವಣೆ ಮುಗಿದ ಬಳಿಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಬಗ್ಗೆ ಪ್ರಸ್ತಾಪ ಮಾಡುತ್ತಿಲ್ಲ. ಅನುದಾನ ಬಿಡುಗಡೆಗೂ ಮುಂದಾಗಿಲ್ಲ. ಇದೇ ನಿರ್ಲಕ್ಷ್ಯ ಮುಂದುವರಿದರೆ ಯೋಜನೆ ಮುಗಿಯಲು ಮತ್ತೂಂದು ದಶಕವೇ ಬೇಕಾಗುತ್ತದೆ ಎಂದರು.

ಕೇಂದ್ರ ಸರ್ಕಾರ ಕೊಟ್ಟ ಮಾತಿನಂತೆ 5300 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದರಲ್ಲಿಯೇ ಕಾಲ ಕಳೆಯುತ್ತಿದೆ. ನಾವು ಗ್ಯಾರಂಟಿ ಯೋಜನೆ ವಿರೋಧಿಸುವುದಿಲ್ಲ. ಆದರೆ ನೀರಾವರಿ ಯೋಜನೆಗಳ ಕಾಲಮಿತಿಯಲ್ಲಿ ಮುಗಿಸುವುದು ಸರ್ಕಾರಗಳ ಕರ್ತವ್ಯ ಎನ್ನುವುದನ್ನು ನೆನಪು ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಅಬ್ಬಿನಹೊಳಲು ಭೂಸ್ವಾಧಿಧೀನ ಪ್ರಕ್ರಿಯೆ ಸಮಸ್ಯೆ ಮುಗಿದಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಹೇಳಿದ್ದರು. ಆದರೆ ಕಾಲುವೆ ನಿರ್ಮಾಣದ ಕಾಮಗಾರಿ ಮುಗಿದಿದೆಯಾ ಎಂಬ ಬಗ್ಗೆ ಇದುವರೆಗೂ ಇಲಾಖೆಯಿಂದ ಸಮಜಾಯಿಷಿ ನೀಡಲಾಗಿಲ್ಲ. ಅಧಿಕಾರಿಗಳು ಕೂಡ ಭೂಸ್ವಾಧೀನದ ಬಗ್ಗೆ ವಾಸ್ತವಾಂಶಗಳನ್ನು ಬಹಿರಂಗಗೊಳಿಸಿಲ್ಲ. ಭೂಸ್ವಾಧೀನವನ್ನೇ ದೊಡ್ಡ ಸಮಸ್ಯೆಯನ್ನಾಗಿ ಮಾಡಿ ಯೋಜನೆಯನ್ನೇ ಮೂಲೆಗುಂಪಾಗಿಸುವ ಹುನ್ನಾರಗಳು ನಡೆಯುತ್ತಿವೆಯೇ ಎಂಬ ಬಗ್ಗೆ
ಅನುಮಾನವಿದೆ ಎಂದರು.

ಕೇಂದ್ರದಲ್ಲಿ ನೂತನ ಸಚಿವರಾಗಿ ಮಧ್ಯ ಕರ್ನಾಟಕ ಪ್ರತಿನಿಧಿಸುತ್ತಿರುವ ವಿ. ಸೋಮಣ್ಣ ಅವರನ್ನು ಹೋರಾಟ ಸಮಿತಿ ಸಂಪರ್ಕಿಸಲು ಮುಂದಾಗಿದೆ. ಜೂ. 24ರಿಂದ ಲೋಕಸಭೆ ಅಧಿವೇಶನ ಆರಂಭವಾಗಲಿದೆ. ಅಷ್ಟರೊಳಗೆ ಸಚಿವರ ಭೇಟಿಯಾಗಿ ಭದ್ರಾ ಮೇಲ್ದಂಡೆಗೆ ಅನುದಾನ ಬಿಡುಗಡೆಗೆ ಯತ್ನಿಸುವಂತೆ  ಮನವಿ ಮಾಡಲಾಗುವುದು. ಭದ್ರಾ ಮೇಲ್ದಂಡೆ ಯೋಜನೆ ಸಂಬಂಧ ಇದುವರೆಗೆ ನಾಲ್ಕು ತಾಲೂಕುಗಳ ಬಂದ್‌ ಮಾಡಲಾಗಿದೆ. ಶೀಘ್ರ ಮೊಳಕಾಲ್ಮೂರು ಹಾಗೂ ಹೊಸದುರ್ಗ ಬಂದ್‌ ಗೆ ಕರೆ ನೀಡಲಾಗುವುದು.

ರಾಜ್ಯ ಸರ್ಕಾರ ಬಯಲುಸೀಮೆ ಜನರ ತಾಳ್ಮೆ ಪರೀಕ್ಷಿಸದೆ ಭದ್ರಾ ಮೇಲ್ದಂಡೆ ಯೋಜನೆಗೆ ಚುರುಕಿನ ವೇಗ ನೀಡಬೇಕೆಂದು ಲಿಂಗಾರೆಡ್ಡಿ ಆಗ್ರಹಿಸಿದರು.

ಸಭೆಯಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಪಿ. ಭೂತಯ್ಯ, ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಸಿ. ಹೊರಕೇರಪ್ಪ, ತಾಲೂಕು ಅಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ, ಮಹಿಳಾ ಘಟಕದ ಅಧ್ಯಕ್ಷೆ ಡ್ಡಸಿದ್ದವ್ವನಹಳ್ಳಿ ಸುಧಾ, ನೀರಾವರಿ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್‌. ದಯಾನಂದ, ಸಂಚಾಲಕ ಚಿಕ್ಕಪ್ಪನಹಳ್ಳಿ ಷಣ್ಮುಖ, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಹುಣಿಸೆಕಟ್ಟೆ ಕಾಂತರಾಜ್‌ ಇದ್ದರು.

ನೂತನ ಸಂಸದ ಗೋವಿಂದ ಕಾರಜೋಳ ಅವರು ಈ ಮೊದಲು ಜಲಸಂಪನ್ಮೂಲ ಸಚಿವರಾಗಿದ್ದರು. ಅವರಿಗೆ ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಅರಿವಿದೆ. ಕೇಂದ್ರದಿಂದ 5300 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಬೇಕಿದೆ. ಹಾಗಾಗಿ ಬುಧವಾರ ನೀರಾವರಿ ಅನುಷ್ಠಾನ ಸಮಿತಿಯಿಂದ ಗೋವಿಂದ ಕಾರಜೋಳ ಅವರ ಜೊತೆ ಚರ್ಚಿಸಲಾಗುವುದು.
●ಬಿ.ಎ. ಲಿಂಗಾರೆಡ್ಡಿ, ನೀರಾವರಿ
ಅನುಷ್ಠಾನ ಹೋರಾಟ ಸಮಿತಿ ಸಭೆ

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

ವಿದ್ಯುತ್ ಪರಿವರ್ತಕದ ಬಳಿ ಮೇಯುತ್ತಿದ್ದ 2 ಎಮ್ಮೆಗಳಿಗೆ ವಿದ್ಯುತ್ ಪ್ರವಹಿಸಿ ಸಾವು

karajola

Siddaramaiah ಭಂಡತನದಿಂದ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ: ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಸಣ್ಣ-ಮಧ್ಯಮ ಕೈಗಾರಿಕೆಗೆ ಸಿಗಲಿ ಪ್ರೋತ್ಸಾಹ-ಸಂಸದ ಗೋವಿಂದ ಕಾರಜೋಳ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

ಮಳೆ ಬಂದರೆ ಸೋರುತ್ತೆ ಕುಂಬಾರಹಟ್ಟಿ ಶಾಲೆ; ಹೊಸ ಆರ್‌ ಸಿಸಿ ಕೊಠಡಿಯೂ ಶಿಥಿಲ

Renukaswamy

Renukaswamy Case: ಮಗ ಬೇಡಿಕೊಂಡ ಫೋಟೋ ನೋಡಲಾರೆ: ತಾಯಿ ರತ್ನಪ್ರಭಾ ಕಣ್ಣೀರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.