![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 20, 2024, 7:00 AM IST
ಬೆಂಗಳೂರು: ದರ್ಶನ್ ಗ್ಯಾಂಗ್ ರೇಣುಕಾಸ್ವಾಮಿಯನ್ನು ಎಷ್ಟು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆಗೈದಿದೆ ಎಂಬುದಕ್ಕೆ ಆತನ ಮರಣೋತ್ತರ ಪರೀಕ್ಷಾ ವರದಿಯಲ್ಲಿ ವೈದ್ಯರು ಉಲ್ಲೇಖೀಸಿರುವ ಅಂಶಗಳೇ ಸಾಕ್ಷಿಯಾಗಿವೆ.
ವಿದ್ಯುತ್ ಶಾಕ್ ನೀಡಿದ್ದಲ್ಲದೆ ಬಲವಾದ ವಸ್ತುಗಳಿಂದ ಭೀಕರವಾಗಿ ಹಲ್ಲೆ ನಡೆಸಿದ ಪರಿಣಾಮ ರಕ್ತಸ್ರಾವವಾಗಿ ರೇಣುಕಾಸ್ವಾಮಿ ಮೃತಪಟ್ಟಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ.
”Death is due to shock and Hemorrhage as a result to multiple blunt injuries sustained” ಅಂದರೆ ವಿದ್ಯುತ್ ಶಾಕ್ ಹಾಗೂ ಪ್ರಬಲವಾದ ಹೊಡೆತಗಳ ಕಾರಣದಿಂದ ರಕ್ತಸ್ರಾವವಾಗಿ ಸಾವು ಸಂಭವಿಸಿದೆ ಎಂಬ ಅಂಶವನ್ನು ವೈದ್ಯರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.. ಮರಣೋತ್ತರ ಪರೀಕ್ಷೆಯ ವರದಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೂ ಕಳಿಸಿರುವ ಪೊಲೀಸರು ವರದಿಗಾಗಿ ಕಾಯುತ್ತಿದ್ದಾರೆ.
ಕಿವಿ ಕತ್ತರಿಸಿದ ಹಂತಕರು
ಬೆನ್ನು, ಕೈ, ತೊಡೆ ಮೇಲೆ ಬೆಲ್ಟ್ ಹಾಗೂ ಇತರ ವಸ್ತುಗಳಿಂದ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಮರ್ಮಾಂಗಕ್ಕೆ ಬಲವಾಗಿ ಹೊಡೆದಿದ್ದಾರೆ. ವಿದ್ಯುತ್ ಶಾಕ್ನಿಂದ ನಿಶಕ್ತಿಗೊಳಿಸಿದ್ದಾರೆ. ಸಿಗರೇಟ್ ಅಥವಾ ಇತರ ವಸ್ತುಗಳಿಂದ ದೇಹದ ನಾನಾ ಕಡೆ ಸುಟ್ಟಿದ್ದಾರೆ. ಜತೆಗೆ ಎಡಕಿವಿಯನ್ನು ಕತ್ತರಿಸಿ ದೊಣ್ಣೆಗಳಿಂದ ಕಾಲುಗಳಿಗೆ ಚೆನ್ನಾಗಿ ಬಾರಿಸಿರುವುದು ವರದಿಯಲ್ಲಿ ಉಲ್ಲೇಖವಾಗಿದೆ.
ಭದ್ರತಾ ಸಿಬಂದಿ
ಹೇಳಿಕೆ ದಾಖಲು
ಹತ್ಯೆ ನಡೆದ ಪಟ್ಟಣಗೆರೆಯ ಶೆಡ್ನ ಭದ್ರತಾ ಸಿಬಂದಿ ನರೇಂದ್ರ ಸಿಂಗ್ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.