![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
ಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ ಬಿಜೆಪಿಯಲ್ಲಿ ಭಾರೀ ಪೈಪೋಟಿ
ಛಲವಾದಿ ನಾರಾಯಣಸ್ವಾಮಿ ಪರ ಅಶೋಕ್, ಸಿ.ಟಿ. ರವಿ ಪರ ಹೈಕಮಾಂಡ್
Team Udayavani, Jun 20, 2024, 6:50 AM IST
![bjpಪರಿಷತ್ ವಿಪಕ್ಷ ನಾಯಕ ಸ್ಥಾನಕ್ಕೆ ಬಿಜೆಪಿಯಲ್ಲಿ ಭಾರೀ ಪೈಪೋಟಿ](https://www.udayavani.com/wp-content/uploads/2024/06/bjp-28-620x439.jpg)
ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕನ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಈಗ ಭಾರೀ ಲಾಬಿ ಪ್ರಾರಂಭವಾಗಿದ್ದು, ಒಕ್ಕಲಿಗ, ದಲಿತ ಅಥವಾ ಒಬಿಸಿ ಸಮುದಾಯದ ಮಧ್ಯೆ ಭಾರೀ ಪೈಪೋಟಿ ಏರ್ಪಟ್ಟಿದೆ.
ಸಿ.ಟಿ. ರವಿ, ಛಲವಾದಿ ನಾರಾಯಣಸ್ವಾಮಿ ಹಾಗೂ ಎನ್.ರವಿಕುಮಾರ್ ಮಧ್ಯೆ ಈ ಸ್ಥಾನಕ್ಕಾಗಿ ಪೈಪೋಟಿ ಸೃಷ್ಟಿಯಾಗಿದ್ದು, ಛಲವಾದಿ ನಾರಾಯಣಸ್ವಾಮಿ ಪರ ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಬ್ಯಾಟಿಂಗ್ ಪ್ರಾರಂಭಿಸಿದ್ದಾರೆ. ಆದರೆ, ಕಾಂಗ್ರೆಸ್ನಿಂದ ವಲಸೆ ಬಂದವರಿಗೆ ಈ ಆಯಕಟ್ಟಿನ ಸ್ಥಾನ ಕೊಡಲು ಬಿಜೆಪಿ ವರಿಷ್ಠರು ಒಪ್ಪುವರೇ? ಎಂಬ ಪ್ರಶ್ನೆ ಉದ್ಭವವಾಗಿದೆ. ಎಲ್ಲದಕ್ಕಿಂತ ಹೆಚ್ಚಾಗಿ ವಿಧಾನಸಭೆ, ವಿಧಾನ ಪರಿಷತ್ ಎರಡೂ ಕಡೆ ಹಳೇ ಮೈಸೂರು ಭಾಗಕ್ಕೆ ಮಣೆ ಹಾಕಿದಂತಾಗುತ್ತದೆ.
ಈ ಸ್ಥಾನದ ಮೇಲೆ ಸಿ.ಟಿ.ರವಿ ಕಣ್ಣಿಟ್ಟಿದ್ದು, ಹೈಕಮಾಂಡ್ ನಾಯಕರ ಮೂಲಕ ಒತ್ತಡ ಹೇರಲಾಗುತ್ತಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬೆಂಬಲ ಅವರಿಗೆ ಲಭಿಸುವ ಸಾಧ್ಯತೆ ಇದೆ. ಎಲ್ಲದಕ್ಕಿಂತ ಹೆಚ್ಚಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಿ.ಟಿ.ರವಿ ವಿಚಾರದಲ್ಲಿ ತುಸು ಮೆತ್ತಗಾಗಿದ್ದಾರೆ. ಈ ಕಾರಣಕ್ಕಾಗಿಯೇ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ಮುನ್ನೆಲೆಗೆ ಬಂದ ಸಂದರ್ಭದಲ್ಲಿ ಸಿ.ಟಿ.ರವಿ ಏಕಾಂಗಿಯಾಗಿ ವಕಾಲತ್ತು ವಹಿಸಿದ್ದು ಬಿಜೆಪಿಯ ಬದಲಾದ ರಾಜಕೀಯ ಸಮೀಕರಣದ ಸಂಕೇತ ಎಂದು ಹೇಳಲಾಗುತ್ತಿದೆ.
ಅಧಿವೇಶನ ವೇಳೆ ನೇಮಕ?
ವಿಪಕ್ಷ ನಾಯಕ ಸ್ಥಾನದ ವಿಚಾರದಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೂಡ ಅಳೆದೂ-ತೂಗಿ ಲೆಕ್ಕಾಚಾರ ಹಾಕುತ್ತಿದ್ದಾರೆ. ಸನ್ನಿವೇಶ ಆಧರಿಸಿ ಸಿ.ಟಿ.ರವಿ ಅಥವಾ ಎನ್. ರವಿಕುಮಾರ್ ಪರ ಅವರ ನಿಲುವು ತೆಗೆದುಕೊಳ್ಳುವ ಸಾಧ್ಯತೆ ಇದೆ. ಮಳೆಗಾಲದ ಅಧಿವೇಶನದಲ್ಲಿಯೇ ವಿಪಕ್ಷ ನಾಯಕ ಸ್ಥಾನಕ್ಕೆ ನೇಮಕವಾಗುವ ಸಾಧ್ಯತೆ ದಟ್ಟವಾಗಿದ್ದು, ತೆರೆಮರೆಯಲ್ಲಿ ಪ್ರಯತ್ನ ಬಿರುಸಾಗಿ ಸಾಗಿದೆ.
ಟಾಪ್ ನ್ಯೂಸ್
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು](https://www.udayavani.com/wp-content/uploads/2024/07/11-1-150x90.jpg)
Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು
![Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ](https://www.udayavani.com/wp-content/uploads/2024/07/baramasagara-150x84.jpg)
Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ
![Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ](https://www.udayavani.com/wp-content/uploads/2024/07/HK-PATIL-150x90.jpg)
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
![CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ](https://www.udayavani.com/wp-content/uploads/2024/07/dk-h-150x90.jpg)
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-150x90.jpg)
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
![12](https://www.udayavani.com/wp-content/uploads/2024/07/12-1-150x90.jpg)
Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
![Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?](https://www.udayavani.com/wp-content/uploads/2024/07/Crude-150x83.jpg)
Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.