ಕೃಷಿಕರಿಗೆ ಈಗ ಓಡುಹುಳಗಳ ಕಾಟ! ಕಳೆದ ವರ್ಷದಿಂದ ಉಪಟಳ ಹೆಚ್ಚು

ರಾತ್ರಿಯಾಗುತ್ತಲೇ ಮನೆಗಳಿಗೆ ದಾಳಿ

Team Udayavani, Jun 20, 2024, 6:40 AM IST

ಕೃಷಿಕರಿಗೆ ಈಗ ಓಡುಹುಳಗಳ ಕಾಟ! ಕಳೆದ ವರ್ಷದಿಂದ ಉಪಟಳ ಹೆಚ್ಚು

ಮಂಗಳೂರು: ಸಂಜೆಯಾಗುತ್ತಲೇ ಎಲ್ಲೆಲ್ಲಿಂದಲೋ ಹಾರಿ ಬರುವ ಕೀಟಗಳು… ಮನೆ ಸಂದುಗೊಂದಿಗಳಲ್ಲಿ ಸೇರಿಕೊಂಡು ಅಟಾಟೋಪ ಸೃಷ್ಟಿಸುತ್ತವೆ, ರಾತ್ರಿ ದೀಪಗಳಿಗೂ ಮುತ್ತಿಕೊಂಡು ಕಿರಿಕಿರಿ ಉಂಟು ಮಾಡುತ್ತವೆ.
ಸದಾ ಒಂದಿಲ್ಲೊಂದು ಕೀಟ, ಕ್ರಿಮಿಗಳಿಂದ ಕಷ್ಟಕ್ಕೆ ತುತ್ತಾಗುವ ಕೃಷಿಕರಿಗೆ ಹಾಗೂ ಅರಣ್ಯ-ತೋಟ ಪ್ರದೇಶದ ಜನರಿಗೆ ಈ ಓಡು ಹುಳ ಅಥವಾ ಕೆಲ್ಲು ಹುಳಗಳಿಂದ ಬಾಧೆ ಎದುರಾಗಿದೆ.

ಪುತ್ತೂರು, ಕಾಸರಗೋಡು, ಸುಳ್ಯದ ಹಲವು ಭಾಗಗಳಿಂದ ಈ ಕೀಟಗಳ ಉಪಟಳದ ಬಗ್ಗೆ ದೂರುಗಳು ಬಂದಿವೆ. ನೋಡಲು ಗಲೀಜಾಗಿರುವ ಹುಳಗಳು ಮೈ ಮೇಲೆ ಬಿದ್ದರೆ ತುರಿಕೆ, ಉರಿ ಕೂಡ ಉಂಟಾಗುತ್ತದೆ. ಊಟ ಮಾಡುವಾಗ ತಟ್ಟೆಗೂ ಬೀಳುತ್ತವೆ. ಹಾಗಾಗಿ ರಾತ್ರಿ ವೇಳೆ ಇವುಗಳಿಂದಾಗಿ ಅನುಭವಿಸುವ ಕಷ್ಟ ಅಷ್ಟಿಷ್ಟಲ್ಲ.

ಹತ್ತು ವರ್ಷಗಳಿಂದಲೇ ಈ ಓಡು ಹುಳಗಳ ಉಪದ್ರ ದ.ಕ., ಕಾಸರಗೋಡು ಜಿಲ್ಲೆಯ ಅಲ್ಲೊಂದಿಲ್ಲೊಂದು ಭಾಗದಲ್ಲಿ ಕೇಳಿ ಬರುತ್ತಿತ್ತು, ಈ ಬಾರಿಯಂತೂ ತೀರಾ ಹೆಚ್ಚಾಗಿದೆ.

ಎಪ್ರಿಲ್‌ ಮೇ ತಿಂಗಳಲ್ಲಿ ಇದು ಹೆಚ್ಚಿದೆ. ಬೇಸಗೆಯಲ್ಲಿ ಒಂದೆರಡು ಮಳೆ ಬಂದು ಧಗೆ ಹೆಚ್ಚಾಗುವಾಗ ಈ ಕೀಟಗಳ ಸಂಖ್ಯೆಯೂ ಹೆಚ್ಚುತ್ತದೆ. ನಿರಂತರ ಮಳೆ ಸುರಿದು, ವಾತಾವರಣ ಸಾಕಷ್ಟು ತಂಪಾದ ಬಳಿಕ ನಿಧಾನವಾಗಿ ಅವುಗಳ ಸಂಖ್ಯೆ ಕಡಿಮೆಯಾಗುತ್ತದೆ.

ಜಾನುವಾರುಗಳ ಕೊಟ್ಟಿಗೆಯಲ್ಲಿ, ಮರಗಳಲ್ಲಿ, ಮನೆಯ ಮಾಡಿನಲ್ಲಿ ಎಲ್ಲೆಂದರಲ್ಲಿ ಕೀಟಗಳೇ ಇರುತ್ತವೆ. ಕೆಲವೊಮ್ಮೆ ರಾಶಿ ರಾಶಿ ಬಾಚಿ ಬೆಂಕಿಗೆ ಹಾಕಿದ್ದೂ ಇದೆ. ಈಗೀಗ ಜನ ಬೇಸತ್ತು ಕೀಟನಾಶಕಗಳನ್ನು ಅಥವಾ ಡೀಸೆಲನ್ನು ಸಿಂಪಡಿಸಿ ನಿಯಂತ್ರಿಸುತ್ತಿದ್ದಾರೆ ಎನ್ನುವುದು ಕೃಷಿಕರು ನೀಡುವ ಮಾಹಿತಿ.

ರಬ್ಬರ್‌ ತೋಟಗಳಿಂದ ಆರಂಭ?
ದಶಕಗಳ ಹಿಂದೆ ಓಡು ಹುಳಗಳು ಸಣ್ಣಸಂಖ್ಯೆಯಲ್ಲಿ ಕಂಡು ಬರುತ್ತಿದ್ದವು, ಆದರೆ ಹೆಚ್ಚಿದ ರಬ್ಬರ್‌ ತೋಟಗಳಿಗೆ ಇವುಗಳ ದಾಳಿ ಜಾಸ್ತಿಯಾಗಿತ್ತು ಹಾಗೂ ರಬ್ಬರ್‌ ಕೀಟಗಳೆಂದೇ ಇವುಗಳನ್ನು ತೋಟಗಾರಿಕೆ ವಿಜ್ಞಾನಿಗಳು ಕರೆಯುತ್ತಾರೆ.

ಲಭ್ಯ ಮಾಹಿತಿ ಪ್ರಕಾರ ರಬ್ಬರ್‌ ತೋಟಗಳಿಗೆ ಸಮೀಪ ಇರುವ ಮನೆಗಳಿಗೆ ಇವುಗಳ ಬಾಧೆ ಜಾಸ್ತಿ. ದೊಡ್ಡ ಸಂಖ್ಯೆಯಲ್ಲಿ ಹಾರಿ ಬಂದು ಮನೆಯೊಳಗೆ ಸೇರಿಕೊಳ್ಳುತ್ತವೆ. ಸಂಖ್ಯೆ ಹೆಚ್ಚಿಸಿಕೊಂಡ ಬಳಿಕ ಇವು ದೂರದ ಕಟ್ಟಡಗಳಿಗೂ ಬರುವುದುಂಟು.

ತೊಂದರೆ ಏನು?
ಆಂಗ್ಲ ಭಾಷೆಯಲ್ಲಿ ಮಪ್ಲಿ ಬೀಟಲ್‌ ಎಂದು ಕರೆಯಲ್ಪಡುವ ಓಡುಹುಳಗಳ ಶಾಸ್ತ್ರೀಯ ಹೆಸರು(Luprops tristis).. ಇವುಗಳಿಂದ ಇದು ವರೆಗೆ ಬೆಳೆಗಳಿಗೆ ತೊಂದರೆಯಾದ ವರದಿಯಿಲ್ಲ, ರಬ್ಬರ್‌ ಮರಗಳಿಗೆ ಇವು ಮುತ್ತಿಕೊಳ್ಳುತ್ತವಾದರೂ ಬೆಳೆಗೆ ಬಾಧೆ ಕಂಡು ಬಂದಿಲ್ಲ. ಆದರೆ ಮನುಷ್ಯರು ಇವುಗಳನ್ನು ಮುಟ್ಟಿದಾಗ ಅವು ಒಂದು ವಿಧದ ದ್ರವವನ್ನು ಸ್ರವಿಸುತ್ತವೆ, ಅದು ತಾಗಿದರೆ ಮೈಮೇಲೆ ತುರಿಕೆ ಕಜ್ಜಿ, ಗುಳ್ಳೆ ಕಾಣಿಸಿಕೊಳ್ಳುತ್ತದೆ.

ಕಳೆದ ವರ್ಷದಿಂದ ಈ ಮಪ್ಲಿ ಬೀಟಲ್‌ಗ‌ಳ ತೊಂದರೆ ಬಗ್ಗೆ ಕೃಷಿಕರಿಂದ ದೂರುಗಳು ಬರುತ್ತಿವೆ. ಹೆಚ್ಚಾಗಿ ರಬ್ಬರ್‌ ಕಾಡುಗಳಿರುವಲ್ಲಿ ಸಮಸ್ಯೆ ಅಧಿಕ. ಸಿಂಥೆಟಿಕ್‌ ರಾಸಾಯನಿಕ ಕೀಟನಾಶಕಗಳನ್ನು ಬಳಸುವ ಮೂಲಕ ನಿಯಂತ್ರಿಸಬಹುದು. ಒಟ್ಟಾಗಿ ಗುಡಿಸಿ, ಬೆಂಕಿ ಹಾಕಿಯೂ ಸುಡಬಹುದು.
-ಡಾ| ಪ್ರತಿಭಾ, ಎಂಟಮಾಲಜಿಸ್ಟ್‌, ಸಿಪಿಸಿಆರ್‌ಐ, ಕಾಸರಗೋಡು

-ವೇಣುವಿನೋದ್‌ ಕೆ.ಎಸ್‌.

ಟಾಪ್ ನ್ಯೂಸ್

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Rain ದಕ್ಷಿಣ ಕನ್ನಡ: ನಾಲ್ಕು ದಿನ ಎಲ್ಲೋ ಅಲರ್ಟ್‌

Rain ದಕ್ಷಿಣ ಕನ್ನಡ: ನಾಲ್ಕು ದಿನ ಎಲ್ಲೋ ಅಲರ್ಟ್‌

Fraud Case ಫೆಡೆಕ್ಸ್‌ ಪಾರ್ಸೆಲ್‌ ಹೆಸರಿನಲ್ಲಿ 18 ಲ.ರೂ. ವಂಚನೆ

Fraud Case ಫೆಡೆಕ್ಸ್‌ ಪಾರ್ಸೆಲ್‌ ಹೆಸರಿನಲ್ಲಿ 18 ಲ.ರೂ. ವಂಚನೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.