![LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/advani-415x240.jpg)
Hubli; ಸಿಎಂ ವಿರುದ್ದ ಕೆಟ್ಟ ಪದ ಬಳಸಿದ ಜನಾರ್ದನ ರೆಡ್ಡಿ ಕ್ಷಮೆ ಕೇಳಬೇಕು: ಸಲೀಂ ಅಹ್ಮದ್
Team Udayavani, Jun 20, 2024, 1:12 PM IST
![Hubli; Janardana Reddy should apologize for using bad words against CM: Saleem ahmed](https://www.udayavani.com/wp-content/uploads/2024/06/salee-620x342.jpg)
ಹುಬ್ಬಳ್ಳಿ: ತೈಲ ಬೆಲೆ ಹಚ್ಚಳ ವಿಷಯವಾಗಿ ಮುಖ್ಯಮಂತ್ರಿ ವಿರುದ್ಧ ಕೆಟ್ಟ ಪದ ಬಳಕೆ ಮಾಡಿರುವ ಶಾಸಕ ಜನಾರ್ದನ ರೆಡ್ಡಿ ಅವರೊಬ್ಬ ಅಯ್ಯೋಗ್ಯ. ಕೂಡಲೇ ರೆಡ್ಡಿ ತಾವಾಡಿದ ಮಾತಿಗೆ ಕ್ಷಮೆಯಾಚಿಸಬೇಕು ಎಂದು ವಿಧಾನಪರಿಷತ್ತು ಮುಖ್ಯ ಸಚೇತಕ ಸಲೀಂ ಅಹ್ಮದ್ ಆಗ್ರಹಿಸಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ರೆಡ್ಡಿ ಏನಿದ್ದರು, ಎಲ್ಲಿ ಇದ್ದು ಬಂದವರು ಎಂಬುದು ನಾಡಿಗಷ್ಟೇ ಅಲ್ಲ ದೇಶಕ್ಕೆ ಗೊತ್ತಿರುವ ಸಂಗತಿ. ತೈಲಬೆಲೆ ಹೆಚ್ಚಳ ಬಗ್ಗೆ ಪ್ರಜಾಸತ್ತಾತ್ಮಕ ರೀತಿ ಪ್ರತಿಭಟಿಸಲಿ ಆದರೆ ಸಿಎಂ ಬಗ್ಗೆ ರೆಡ್ಡಿ ಬಳಸಿದ ಪದ ಖಂಡನೀಯ ಎಂದರು.
ರಾಜ್ಯದಲ್ಲಿ ಶಿಗ್ಗಾಂವಿ ಸೇರಿದಂತೆ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಈಗಾಗಲೇ ತಯಾರಿಗೆ ಮುಂದಾಗಿದೆ. ಶಿಗ್ಗಾಂವಿ ಕ್ಷೇತ್ರಕ್ಕೆ ಪಕ್ಷ ಸೂಚಿಸುವವರು ಅಭ್ಯರ್ಥಿ ಆಗಲಿದ್ದಾರೆ. ಕಾಂಗ್ರೆಸ್ ಪಕ್ಷ ಉಪ ಚುನಾವಣೆ, ಸ್ಥಳೀಯ ಸಂಸ್ಥೆಗಳ ಹಾಗೂ 2028 ವಿಧಾನಸಭೆ ಚುನಾವಣೆಗೂ ಸಂಘಟನಾತ್ಮಕ ತಯಾರಿ ಕೈಗೊಂಡಿದೆ ಎಂದರು.
ತೈಲ ಬೆಲೆ ಹೆಚ್ಚಳ ಬಗ್ಗೆ ಬೀದಿಗಿಳಿದ ಬಿಜೆಪಿಯವರಿಗೆ ನಾಚಿಕೆಯಾಗಬೇಕು. ಮೋದಿ ಸರ್ಕಾರ ತೈಲ, ಅಡುಗೆ ಅನಿಲ ಬೆಲೆ ವಿಪರೀತ ಹೆಚ್ಚಳ ಮಾಡಿದ್ದು ಬಿಜೆಪಿ ಮರೆತಂತಿದೆ. ಲೋಕಸಭಾ ಚುನಾವಣೆಯಲ್ಲಿ ದೇಶದ ಜನ ಮೋದಿ ಸರ್ಕಾರ ಹಾಗೂ ಸರ್ವಾಧಿಕಾರ ವರ್ತನೆಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದರು.
ಕೇಂದ್ರದಲ್ಲಿರುವುದು ಕಿಚಡಿ ಸರ್ಕಾರ ಇದರಿಂದ ಅಭಿವೃದ್ಧಿ ಕಾರ್ಯಗಳು ಸಾಧ್ಯವಿಲ್ಲ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ವಿನೋದ ಅಸೂಟಿ ಸೋತು ಗೆದ್ದಿದ್ದರೆ, ಬಿಜೆಪಿಯ ಪ್ರಹ್ಲಾದ ಜೋಶಿ ಗೆದ್ದು ಸೋತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂಬುದು ಬಿಜೆಪಿ ನಾಯಕರ ಹಗಲುಗನಸು ಆಗಿದೆ. ಯಾವುದೇ ಕಾರಣಕ್ಕೂ ಐದು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಅದು ನಮ್ಮ ಬದ್ದತೆ ಎಂದರು.
ರಾಜ್ಯದಲ್ಲಿ ಡಿಸಿಎಂ ಹುದ್ದೆಗಳ ಸೃಷ್ಟಿಯ ಯಾವ ಚರ್ಚೆ ಪಕ್ಷದಲ್ಲಿ ಇಲ್ಲ ಎಂದರು.
ಟಾಪ್ ನ್ಯೂಸ್
![LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/advani-415x240.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.](https://www.udayavani.com/wp-content/uploads/2024/07/Pralhad-Joshi-1-150x91.jpg)
Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.
![Mahesh](https://www.udayavani.com/wp-content/uploads/2024/07/Mahesh-150x83.jpg)
Hubli; ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಿದ್ದರೆ ನಮ್ಮ ಹೈಕಮಾಂಡ್..: ಮಹೇಶ ಟೆಂಗಿನಕಾಯಿ
![1-asdsad](https://www.udayavani.com/wp-content/uploads/2024/06/1-asdsad-6-150x92.jpg)
Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ
![prahlad-joshi](https://www.udayavani.com/wp-content/uploads/2024/06/prahlad-joshi-2-150x86.jpg)
Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ
![prahlad joshi](https://www.udayavani.com/wp-content/uploads/2024/06/prahlad-joshi-1-150x83.jpg)
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
![LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/advani-150x87.jpg)
LK Advani: ಬಿಜೆಪಿ ಹಿರಿಯ ನಾಯಕ ಎಲ್ಕೆ ಅಡ್ವಾಣಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲು
![5-byndoor](https://www.udayavani.com/wp-content/uploads/2024/07/5-byndoor-150x90.jpg)
Heavy Rain: ಬೈಂದೂರು ವಲಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ
![Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ](https://www.udayavani.com/wp-content/uploads/2024/07/teppa-150x89.jpg)
Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ
![4-yadagiri](https://www.udayavani.com/wp-content/uploads/2024/07/4-yadagiri-150x90.jpg)
Narayanapur: ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು
![T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ](https://www.udayavani.com/wp-content/uploads/2024/07/india-150x84.jpg)
T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.