![1-a-baaba](https://www.udayavani.com/wp-content/uploads/2024/07/1-a-baaba-415x233.jpg)
ಹಾಸನ: ಬೆಳಿಗ್ಗೆ ಒಟ್ಟಿಗೆ ಉಪಹಾರ ಸೇವಿಸಿದ್ದ ಸ್ನೇಹಿತರು, ಮಧ್ಯಾಹ್ನ ಗುಂಡು ಹಾರಿಸಿದ್ದೇಕೆ?
Team Udayavani, Jun 20, 2024, 5:05 PM IST
![ಹಾಸನ: ಬೆಳಿಗ್ಗೆ ಒಟ್ಟಿಗೆ ಉಪಹಾರ ಸೇವಿಸಿದ್ದ ಸ್ನೇಹಿತರು, ಮಧ್ಯಾಹ್ನ ಗುಂಡು ಹಾರಿಸಿದ್ದೇಕೆ?](https://www.udayavani.com/wp-content/uploads/2024/06/hasan-620x324.jpg)
ಹಾಸನ: ನಗರದ ಹೊಯ್ಸಳ ನಗರ ಬಡಾವಣೆಯಲ್ಲಿ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಆಸೀಫ್ ತನ್ನ ಸ್ನೇಹಿತ ಶರಾಫತ್ ಆಲಿಯನ್ನು ಕೊಲೆಗೈದು ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.
ಶರಾಫತ್ ಆಲಿಗೆ ಮೊದಲು ಗುಂಡು ಹಾರಿಸಿದ ಆಸೀಫ್ ನಂತರ ತಾನು ಕಾರಿನಲ್ಲಿ ಕುಳಿತು ಗುಂಡು ಹಾರಿಸಿಕೊಂಡಿದ್ದಾನೆ. ಬೇರೆಯವರು ಇಬ್ಬರನ್ನು ಹತ್ಯೆ ಮಾಡಿದ್ದರೆ ಹತ್ಯೆಗೆ ಬಳಸಿದ ಆಯುಧವನ್ನು ಬಿಟ್ಟು ಹೋಗುತ್ತಿರಲಿಲ್ಲ. ಆದರೆ ಇಲ್ಲಿ ಆಯುಧ ಅಲ್ಲಿಯೇ ಇತ್ತು ಎನ್ನಲಾಗುತ್ತಿದೆ.
ಮೃತರಿಬ್ಬರೂ ಹಾಸನ ಮೂಲದವರಲ್ಲ, ಬದಲಿಗೆ ಹಾಸನದ ಕುಟುಂಬಗಳ ಅಳಿಯಂದಿರು. ಶುಂಠಿ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ಪಾಲುದಾರರಾಗಿದ್ದರು. ಉತ್ತಮ ಸ್ನೇಹ ಬಾಂಧವ್ಯ ಹೊಂದಿದ್ದರು.
ಇಂದು ಹಾಸನ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ನಿವೇಶನವೊಂದರ ನೋಂದಣಿಯಿತ್ತು. ಆ ವ್ಯವಹಾರದಲ್ಲಿ ಇಬ್ಬರೂ ಪಾಲುದಾರರಾಗಿದ್ದರು. ಬೆಳಗ್ಗೆ ಶರಾಫತ್ ನಿವಾಸದಲ್ಲಿ ಇಬ್ಬರೂ ಒಟ್ಟಿಗೆ ಉಪಾಹಾರ ಸೇವಿಸಿ ಮನೆಯಿಂದ ಹೊರಟಿದ್ದರು.
ಉಪ ನೋಂದಣಾಧಿಕಾರಿ ಕಚೇರಿಗೆ ಹೋಗಬೇಕಿದ್ದ ಇಬ್ಬರೂ ನಿವೇಶನದ ಬಳಿ ಹೋಗಿದ್ದು ಏಕೆ? ಅಲ್ಲಿ ತಲೆದೋರಿದ ವೈಮನಸ್ಯ ಏನು ಎನ್ನುವುದು ಬೆಳಕಿಗೆ ಬರಬೇಕಿದೆ.
ಇದನ್ನೂ ಓದಿ: Madikeri: ಕುಸಿದು ಬಿದ್ದ ಹಳೆಯ ಕಟ್ಟಡ.. ಅವಶೇಷಗಳಡಿ ಮೂವರು ಸಿಲುಕಿರುವ ಶಂಕೆ, ಮೂವರ ರಕ್ಷಣೆ
ಟಾಪ್ ನ್ಯೂಸ್
![1-a-baaba](https://www.udayavani.com/wp-content/uploads/2024/07/1-a-baaba-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?](https://www.udayavani.com/wp-content/uploads/2024/07/HIV-150x90.jpg)
Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?
![Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್](https://www.udayavani.com/wp-content/uploads/2024/07/dinesh-gundu-rao-150x87.jpg)
Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್
![Udayavani exclusive interview of KN Rajanna](https://www.udayavani.com/wp-content/uploads/2024/07/N-Rajanna-150x83.jpg)
ಡಿಕೆಶಿ ಕಾಂಗ್ರೆಸ್ಗೆ ಕಾಲಿಡುವ ಮೊದಲೇ ನೋಟಿಸ್, ಉಚ್ಚಾಟನೆ ಎಲ್ಲಾ ನೋಡಿದ್ದೀನಿ…; ರಾಜಣ್ಣ
![CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ](https://www.udayavani.com/wp-content/uploads/2024/07/SIDDA-150x84.jpg)
CM Siddaramaiah ರೈತರಿಗೆ ನಿತ್ಯ 5 ಕೋಟಿ ರೂ. ಪ್ರೋತ್ಸಾಹ ಧನ
![KMF ಹಾಲಿನ ಹೊಳೆ: ನಿತ್ಯ 1 ಕೋಟಿ ಲೀಟರ್!-ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಕ್ಷೀರ ಸರಬರಾಜು](https://www.udayavani.com/wp-content/uploads/2024/07/kmf-6-copy-150x94.jpg)
KMF ಹಾಲಿನ ಹೊಳೆ: ನಿತ್ಯ 1 ಕೋಟಿ ಲೀಟರ್!-ಕೆಎಂಎಫ್ ಇತಿಹಾಸದಲ್ಲೇ ದಾಖಲೆ ಕ್ಷೀರ ಸರಬರಾಜು
MUST WATCH
ಹೊಸ ಸೇರ್ಪಡೆ
![1-a-baaba](https://www.udayavani.com/wp-content/uploads/2024/07/1-a-baaba-150x84.jpg)
Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ
![Barbados](https://www.udayavani.com/wp-content/uploads/2024/07/huricanbe-150x83.jpg)
Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?
![Court-Symbol](https://www.udayavani.com/wp-content/uploads/2024/07/Court-Symbol-1-150x90.jpg)
Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್ ದೋಷಮುಕ್ತ
![Agriculture-Tracator](https://www.udayavani.com/wp-content/uploads/2024/07/Agriculture-Tracator-150x90.jpg)
Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ
![4-manipal](https://www.udayavani.com/wp-content/uploads/2024/07/4-manipal-150x90.jpg)
Manipal: ಅನಾಮಧೇಯ ಆ್ಯಪ್ ಡೌನ್ಲೋಡ್ ಮಾಡಿ ವಂಚನೆಗೊಳಗಾದ ಮಹಿಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.