ಭರ್ತಿಯಾಗಬೇಕಿದೆ ಬಹುತೇಕ ಕೆರೆಗಳು; ಬಳಕೆಗೆ ಸೀಮಿತವಾದ ಕೆರೆಗಳು-192
Team Udayavani, Jun 20, 2024, 5:23 PM IST
ಉದಯವಾಣಿ ಸಮಾಚಾರ
ಗದಗ: ಜಿಲ್ಲೆ ಕಳೆದ ಕೆಲ ವರ್ಷಗಳಿಂದ ಅತಿವೃಷ್ಟಿ, ಅನಾವೃಷ್ಟಿ ಜತೆಗೆ ನೆರೆ ಹಾಗೂ ಬರಗಾಲದಂತಹ ಪರಿಸ್ಥಿತಿ ಅನುಭವಿಸಿದೆ. ಇದರಿಂದ ಕೆಲ ಕೆರೆಗಳು ಭರ್ತಿಯಾಗಿ ಕೋಡಿ ಹರಿದಿದ್ದರೆ, ಇನ್ನೂ ಕೆಲವು ಕೆರೆಗಳು ನೀರಿಲ್ಲದೇ ಬತ್ತಿ ಹೋದ ಉದಾಹರಣೆ ಸಾಕಷ್ಟಿವೆ. ಜಿಲ್ಲೆಯಲ್ಲಿ ನೀರಾವರಿ ಮತ್ತು ಸಣ್ಣ ನೀರಾವರಿ ವ್ಯಾಪ್ತಿಯಲ್ಲಿ 22 ಕುಡಿಯಲು ಯೋಗ್ಯವಾದ ಕೆರೆಗಳು, 192 ಬಳಕೆಗೆ ಸೀಮಿತವಾದ ಕೆರೆಗಳು ಸೇರಿ ಒಟ್ಟು 214 ಕೆರೆಗಳಿದ್ದು, ಬಹುತೇಕ ಕೆರೆಗಳು ಮಳೆಯ ನೀರನ್ನೇ ನೆಚ್ಚಿಕೊಂಡಿವೆ. ಆದರೆ ಸದ್ಯ ಮುಂಗಾರು ಚಾಲ್ತಿಯಲ್ಲಿದ್ದು, ಕಳೆದ 15 ದಿನಗಳಲ್ಲಿ ಜಿಲ್ಲೆಯ ಕೆಲವೆಡೆ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಬಹುತೇಕ
ಕೆರೆಗಳು ತುಂಬದಿದ್ದರೂ ತಕ್ಕಮಟ್ಟಿನ ನೀರು ಶೇಖರಣೆಯಾಗಿದೆ.
ಇನ್ನು ತುಂಗ-ಭದ್ರಾ ಎಡದಂಡೆ ಕಾಲುವೆ ಮೂಲಕ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ, ಡಂಬಳ, ಶಿರೋಳ, ತಾಮ್ರಗುಂಡಿ, ನಾಗರಳ್ಳಿ, ಜಂತ್ಲಿ ಶಿರೂರು ಸೇರಿ 15 ಕೆರೆಗಳು, 20ಕ್ಕೂ ಹೆಚ್ಚು ಚೆಕ್ ಡ್ಯಾಂಗಳಿಗೆ ಹಾಗೂ ಗದಗ ತಾಲೂಕಿನ ಲಕ್ಕುಂಡಿ, ಸಂಭಾಪುರ, ಕಳಸಾಪುರ, ಕಣಗಿನಹಾಳ ಸೇರಿ 8 ಗ್ರಾಮದ ಕೆರೆಗಳಿಗೆ ಕಳೆದ ಕೆಲ ವರ್ಷಗಳ ಹಿಂದೆ ನದಿ ನೀರು ಹರಿಸಿದ್ದರಿಂದ ಪುನಶ್ಚೇತನಗೊಂಡಿದ್ದವು. ಆದರೆ ಕಳೆದ ವರ್ಷ ಬರಗಾಲ ಆವರಿಸಿದ್ದರಿಂದ ಕೆರೆಗಳು ನದಿ ನೀರನ್ನು ಕಂಡಿಲ್ಲ.
ಸಣ್ಣ ನೀರಾವರಿ ವ್ಯಾಪ್ತಿಯ ಕೆರೆಗಳು 32: ಜಿಲ್ಲೆಯ ಸಣ್ಣ ನೀರಾವರಿ ವ್ಯಾಪ್ತಿಯಲ್ಲಿ ಮುಂಡರಗಿ ತಾಲೂಕಿನಲ್ಲಿ 11, ಗಜೇಂದ್ರಗಡ 9, ಶಿರಹಟ್ಟಿ ತಾಲೂಕಿನಲ್ಲಿ 5, ಗದಗ ತಾಲೂಕಿನಲ್ಲಿ 4 ಹಾಗೂ ಲಕ್ಷ್ಮೇಶ್ವರ ತಾಲೂಕಿನಲ್ಲಿ 3 ಸೇರಿ ಜಿಲ್ಲಾದ್ಯಂತ 32 ಕೆರೆಗಳಿದ್ದು, ಇವುಗಳಲ್ಲಿ ಮುಂಡರಗಿ ತಾಲೂಕಿನ ಡಂಬಳ, ಜಂತ್ಲಿಶಿರೂರ, ಪೇಠಾಲೂರ ಹಾಗೂ ಶಿರೋಳ ಕೆರೆಗಳಿಗೆ ಮಾತ್ರ ನದಿ ಮೂಲಕ ನೀರು ಹರಿಸಲಾಗುತ್ತಿತ್ತು. ಕಳೆದ ವರ್ಷ ಬರಗಾಲದಿಂದ ನದಿಯಲ್ಲೇ ನೀರಿಲ್ಲದ ಕಾರಣ ನೀರು ಹರಿಸಲಾಗಿಲ್ಲ. ಇದರಿಂದ ಕೆರೆಗಳು ಸಂಪೂರ್ಣ ಖಾಲಿಯಾಗಿವೆ.
ಸಣ್ಣ ನೀರಾವರಿ ಕೆರೆಗಳ ವಿಸ್ತೀರ್ಣ-ಅಚ್ಚುಕಟ್ಟು ಪ್ರದೇಶ: ಸಣ್ಣ ನೀರಾವರಿ ವ್ಯಾಪ್ತಿಯಲ್ಲಿ ಮುಂಡರಗಿ ತಾಲೂಕಿನ 11 ಕೆರೆಗಳ 776.76 ಹೆಕ್ಟೇರ್ ಪ್ರದೇಶದಲ್ಲಿ 4,330.88 ಹೆಕ್ಟೇರ್ ಅಚ್ಚು ಪ್ರದೇಶವಿದೆ. ಶಿರಹಟ್ಟಿ ತಾಲೂಕಿನ 5 ಕೆರೆಗಳ 243.50 ಹೆಕ್ಟೇರ್ ಪ್ರದೇಶದಲ್ಲಿ 1,294.70 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವಿದೆ.
ಗಜೇಂದ್ರಗಡ-ರೋಣ ತಾಲೂಕಿನ 9 ಕೆರೆಗಳ 170.78 ಹೆಕ್ಟೇರ್ ಪ್ರದೇಶವಿದ್ದು, 905.31 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವಿದೆ. ತಾಲೂಕಿನ 4 ಕೆರೆಗಳ 126.97 ಹೆಕ್ಟೇರ್ ಪ್ರದೇಶವಿದ್ದು, 967 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವಿದೆ. ಲಕ್ಷೇ¾ಶ್ವರ ತಾಲೂಕಿನ 3 ಕೆರೆಗಳ 61.92 ಹೆಕ್ಟೇರ್ ಪ್ರದೇಶವಿದ್ದು, 222.69 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವಿದೆ. ಜಿಲ್ಲೆಯಲ್ಲಿ ಒಟ್ಟಾರೆ 32 ಕೆರೆಗಳ ವಿಸ್ತೀರ್ಣ 1,379.93 ಹೆಕ್ಟೇರ್ ಪ್ರದೇಶ ಹೊಂದಿದೆ. ಅದರಲ್ಲಿ 7,520.58 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶ ಹೊಂದಿದೆ.
ಕಳೆದ ಎರಡು ವರ್ಷಗಳಿಂದ ಯಾವುದೇ ಅನುದಾನವಿರದ ಕಾರಣ ಜಿಲ್ಲೆಯ ಸಣ್ಣ ನೀರಾವರಿ ವ್ಯಾಪ್ತಿಯ ಕೆರೆಗಳ ಹೂಳೆತ್ತುವುದು ಮತ್ತು ಬೌಂಡರಿಂಗ್ ಕ್ರಂಚ್ ಹಾಕುವುದು ಸೇರಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಅನುದಾನ ಬಿಡುಗಡೆಗೊಂಡ ನಂತರ ಆದ್ಯತೆ ಮೇರೆಗೆ ಹೂಳೆತ್ತುವುದು ಸೇರಿ ಕೆರೆಗಳ ಬೌಂಡರಿಂಗ್ ಕ್ರಂಚ್ ಹಾಕಲು ಸೂಕ್ತ
ಕ್ರಮ ಕೈಗೊಳ್ಳಲಾಗುವುದು.
●ಎನ್. ಚಂದ್ರಶೇಖರ, ಸಹಾಯಕ
ಕಾರ್ಯನಿರ್ವಾಹಕ ಎಂಜಿನಿಯರ್, ಸಣ್ಣ ನೀರಾವರಿ.
■ ಅರುಣಕುಮಾರ ಹಿರೇಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಯಿಲಗೋಳ ಆರೋಗ್ಯ ಕೇಂದ್ರಕ್ಕಿಲ್ಲ ರಸ್ತೆ: ಬೀದಿದೀಪಗಳ ವ್ಯವಸ್ಥೆಯೂ ಇಲ್ಲ
Gadag: ತಂಗಿಯನ್ನು ಬರ್ಬರವಾಗಿ ಕೊಲೆಗೈದು ಪೊಲೀಸರಿಗೆ ಶರಣಾದ ಅಣ್ಣ
Vachana Darshan: ಆರ್ಎಸ್ಎಸ್ನಿಂದ ಲಿಂಗಾಯತರಲ್ಲಿ ಒಡಕು ಮೂಡಿಸುವ ಹುನ್ನಾರ: ಡಾ.ಜಾಮದಾರ
Gadag-Betageri: ಅವಳಿ ನಗರದಲ್ಲಿ ಭಾರಿ ಮಳೆ; ಮನೆಗಳಿಗೆ ನುಗ್ಗಿದ ನೀರು
ಕಳಸಾ-ಬಂಡೂರಿ: ಮಹದಾಯಿ ಜಾರಿಗೆ ಕರವೇ ಪಾದಯಾತ್ರೆ ಆರಂಭ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.