![9-Bantwala](https://www.udayavani.com/wp-content/uploads/2024/07/9-Bantwala-415x249.jpg)
Belthangady: ಕಳ್ಳಬಟ್ಟಿ ತಯಾರಿಸುತ್ತಿದ್ದ ಶೆಡ್ಗೆ ಪೊಲೀಸರ ದಾಳಿ
Team Udayavani, Jun 20, 2024, 8:27 PM IST
![Belthangady: ಕಳ್ಳಬಟ್ಟಿ ತಯಾರಿಸುತ್ತಿದ್ದ ಶೆಡ್ಗೆ ಪೊಲೀಸರ ದಾಳಿ](https://www.udayavani.com/wp-content/uploads/2024/06/8-14-620x372.jpg)
ಬೆಳ್ತಂಗಡಿ: ಮರೋಡಿ ಗ್ರಾಮದ ಕಲ್ಲಬೆಟ್ಟು ಎಂಬಲ್ಲಿ ಕಳ್ಳಬಟ್ಟಿ ಸಾರಾಯಿ ತಯಾರು ಮಾಡಿ ಸಾರ್ವಜನಿಕರಿಗೆ ಮಾರಾಟ ಮಾಡುವ ಉದ್ದೇಶದಿಂದ ಸಂಗ್ರಹಿಸಿಡಲಾಗಿದ್ದ ಶೆಡ್ಗೆ ವೇಣೂರು ಪೊಲೀಸರು ಜೂ.20ರಂದು ದಾಳಿ ನಡೆಸಿ 6.050 ಲೀಟರ್ ಕಳ್ಳಭಟ್ಟಿ ಸಾರಾಯಿ ಹಾಗೂ ತಯಾರಿಗೆ ಬಳಸಿದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಮರೋಡಿ ಗ್ರಾಮದ ಕಲ್ಲಬೆಟ್ಟು ನಿವಾಸಿ ಗೋಪಾಲ ಶೇರಿಗಾರ(47) ಎಂಬಾತ ಕೃತ್ಯ ನಡೆಸುತ್ತಿದ್ದು, ದಾಳಿ ವೇಳೆ ತಪ್ಪಿಸಿಕೊಂಡಿದ್ದಾನೆ. ಮನೆಯ ದಾಸ್ತಾನು ಕಟ್ಟಡವನ್ನು ಪರಿಶೀಲಿಸಿದಾಗ ಸುಮಾರು 50 ಲೀ ಸಾಮರ್ಥ್ಯದ ಡ್ರಮ್ನಲ್ಲಿ ಕಳ್ಳಭಟ್ಟಿ ತಯಾರಿಸುವ ಪರಿಕರ, ಪಾತ್ರೆ ಸಾಮಾಗ್ರಿಗಳು ಮತ್ತು ಮದ್ಯ ತುಂಬಿದ ಬಾಟಲಿಗಳು ಪತ್ತೆಯಾಗಿದೆ.
ಆರೋಪಿತ ಅಕ್ರಮವಾಗಿ ಸಾರಾಯಿ ತಯಾರಿಸಿ ಮಾರಾಟ ಮಾಡಲು ದಾಸ್ತಾನು ಇರಿಸಿದ್ದ ಸುಮಾರು 6.050 ಲೀಟರ್ ಕಳ್ಳಭಟ್ಟಿ ಸಾರಾಯಿ ಹಾಗೂ ತಯಾರಿಕೆಗೆ ಸಂಗ್ರಹಿಸಿರುವ ಸಾಮಾಗ್ರಿಗಳನ್ನು ದಸ್ತಗಿರಿ ಮಾಡಿ ಸಾರಾಯಿಯ ಅಂದಾಜು ಮೌಲ್ಯ 1,800 ರೂ. ಹಾಗೂ ಸೊತ್ತುಗಳ ಅಂದಾಜು ಮೌಲ್ಯ 1,000 ರೂ. ವಶಕ್ಕೆ ಪಡೆದು ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಟಾಪ್ ನ್ಯೂಸ್
![9-Bantwala](https://www.udayavani.com/wp-content/uploads/2024/07/9-Bantwala-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![9-Bantwala](https://www.udayavani.com/wp-content/uploads/2024/07/9-Bantwala-150x90.jpg)
Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್
![Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ](https://www.udayavani.com/wp-content/uploads/2024/07/1-4-150x90.jpg)
Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ
![Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ](https://www.udayavani.com/wp-content/uploads/2024/07/rohiit-150x83.jpg)
Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ
![8-udupi](https://www.udayavani.com/wp-content/uploads/2024/07/8-udupi-150x90.jpg)
Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್
![Herbal: ಪಂಕಜ ಕಸ್ತೂರಿ ಹರ್ಬಲ್ ಗೆ ಅತ್ತ್ಯುತ್ತಮ ಹೆಲ್ತ್ ಕೇರ್ ಬ್ರ್ಯಾಂಡ್ ಮನ್ನಣೆ](https://www.udayavani.com/wp-content/uploads/2024/07/Pankaja-150x98.jpg)
Herbal: ಪಂಕಜ ಕಸ್ತೂರಿ ಹರ್ಬಲ್ ಗೆ ಅತ್ತ್ಯುತ್ತಮ ಹೆಲ್ತ್ ಕೇರ್ ಬ್ರ್ಯಾಂಡ್ ಮನ್ನಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.