R. Ashok: ಆಸ್ಪತ್ರೆಗಳಿಗೆ ನೀರು ಕೊಡದಷ್ಟು ಸರ್ಕಾರ ಪಾಪರ್; ಅಶೋಕ್
Team Udayavani, Jun 20, 2024, 8:50 PM IST
ಕಲಬುರಗಿ: ರಾಜ್ಯದ ಆಸ್ಪತ್ರೆಗಳಲ್ಲಿ ಶುದ್ಧ ನೀರಿಲ್ಲ. ಮಳೆಗಾಲದಲ್ಲಿ ನೀರು ಸರಬರಾಜು ಮಾಡಲು ಸಾಧ್ಯವಾಗಿಲ್ಲ ಎಂದರೆ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ತರಾಟೆ ತೆಗೆದುಕೊಂಡರು.
ನಗರದ ಜಯದೇವ ಮತ್ತು ಜಿಮ್ಸ್ ಆಸ್ಪತ್ರೆಗಳಿಗೆ ಗುರುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಆಸ್ಪತ್ರೆಯಲ್ಲಿ ನೀರಿಲ್ಲದೆ ಇರುವುದರಿಂದ ಮೂರು ದಿನಗಳ ಕಾಲ ಆಪರೇಷನ್ ನಿಲ್ಲಿಸಲಾಗಿದ್ದು, ರೋಗಿಗಳಿಗೆ ತೊಂದರೆ ಆಗಿದೆ. ಆಸ್ಪತ್ರೆಗಳಿಗೆ ನೀರು ಕೊಡದಷ್ಟು ಪಾಪರ್ ಸರ್ಕಾರ ಇದು ಎಂದು ದೂರಿದರು.
ಮಳೆಗಾಲದಲ್ಲಿ ರಾಡಿ ನೀರು ಬರುತ್ತಿದ್ದರೆ ಕಾರ್ಪೋರೇಷನ್ ಏನು ಮಾಡುತ್ತಿದೆ?, ಪಾಲಿಕೆ ಅಧಿಕಾರಿಗಳಿಗೆ ಕಾಮನ್ಸೆನ್ಸ್ ಇಲ್ಲವಾ?, ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲಾರದಷ್ಟು ನಿರ್ಲಕ್ಷé ತೋರಿದರೆ ಹೇಗೆ? ಎಂದು ಪ್ರಶ್ನಿಸಿದರು.
ಆಸ್ಪತ್ರೆಗಳಲ್ಲಿ ನೀರಿಲ್ಲದೆ ಆಪರೇಷನ್ ಸೇರಿದಂತೆ ಇತರೆ ಚಿಕಿತ್ಸಾ ಸೌಲಭ್ಯ ನೀಡಲು ವಿಫಲವಾಗಿರುವ ಕುರಿತು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಪ್ರಶ್ನಿಸುವೆ. ಪಾಲಿಕೆ ಕಮಿಷನರ್ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ವಿಧಾನಸಭೆಯಲ್ಲಿ ಪ್ರಶ್ನಿಸಿ ಸರ್ಕಾರವನ್ನು ಚರ್ಚೆಗೆ ಆಹ್ವಾನಿಸುತ್ತೇವೆ. ಕೂಡಲೇ ಘಟನೆ ಸಂಬಂಧ ತಂಡವನ್ನು ಕಳುಹಿಸಿ ವಿಚಾರಣೆ ಮಾಡಿ ವರದಿ ಕೊಡುವಂತೆ ಸೂಚಿಸಲಾಗುವುದು ಎಂದರು. ಎಂಎಲ್ಸಿಗಳಾದ ಶಶೀಲ್ ನಮೋಶಿ, ಬಿ.ಜಿ.ಪಾಟೀಲ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.