ಆರೋಗ್ಯ ರಕ್ಷಾ ಸಮಿತಿ: ಸಂಗ್ರಹಿತ ಹಣ ಆ ದಿನವೇ ಜಮೆಗೆ ಆದೇಶ
Team Udayavani, Jun 20, 2024, 9:20 PM IST
ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ಆರೋಗ್ಯ ರಕ್ಷಾ ಸಮಿತಿ ಹಣವನ್ನು ಆಯಾ ದಿನವೇ ಬ್ಯಾಂಕ್ ಖಾತೆಗೆ ಜಮೆ ಮಾಡುವಂತೆ ಆರೋಗ್ಯ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ ಮೂಲಕ ಹಣ ದುರುಪಯೋಗ ತಪ್ಪಿಸಲು ಕ್ರಮ ವಹಿಸಲಾಗಿದೆ.
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯ ರಕ್ಷಾ ಸಮಿತಿಯ ಹಣ ದುರ್ಬಳಕೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಯಲ್ಲಿ ಒಪಿಡಿ ಚೀಟಿ ಹಂಚಿಕೆಯಿಂದ ಸಂಗ್ರಹವಾಗುವ ಹಣವನ್ನು ಕಾಲ ಕಾಲಕ್ಕೆ ಡಿಇಒ ಸಿಬಂದಿ ಆಡಳಿತ ವಿಭಾಗದ ಕಾಯಂ ನೌಕರರಿಗೆ ಒಪ್ಪಿಸಬೇಕು. ಅವರು ಆಸ್ಪತ್ರೆಯಲ್ಲಿ ನಮೂದಾಗಿರುವ ಲೆಕ್ಕವನ್ನು ಪರಿಶೀಲನೆ ನಡೆಸಿ, ಮೇಲ್ವಿಚಾರಕ ಸಿಬಂದಿ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಹಣ ಸಂಗ್ರಹವಾದ 2 ದಿನದೊಳಗೆ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು ಎಂದು ಸೂಚಿಸಲಾಗಿದೆ.
ಈ ಪ್ರಕ್ರಿಯೆಯಲ್ಲಿ ಯಾವುದಾದರೂ ತಡವಾಗಿ ಹಣ ಜಮೆ ಮಾಡುವುದು ಅಥವಾ ದುರುಪಯೋಗ ಕಂಡುಬಂದರೆ ಜಿಲ್ಲಾಮಟ್ಟದ ಜಿಲ್ಲಾ ಶಸ್ತ್ರಚಿಕಿತ್ಸಕರು, ತಾಲೂಕು ಮಟ್ಟದ ಅಧಿಕಾರಿಗಳು, ಆಡಳಿತ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಸಿಬಂದಿ ಹಾಗೂ ಅಧಿಕಾರಿ ವರ್ಗ ನೇರ ಹೊಣೆಯಾಗಲಿದೆ. ಇವರ ಮೇಲೆ ಕಾನೂನು ಕ್ರಮ ವಹಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ
Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ
Police ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ: ಶಾಸಕ ಕಂದಕೂರ ರಾಜೀನಾಮೆ ಎಚ್ಚರಿಕೆ
Hindu remark; ಅಂತವರನ್ನು ದೂರ ಇಡಬೇಕು..: ರಾಹುಲ್ ಹೇಳಿಕೆಗೆ ಪೇಜಾವರಶ್ರೀ ಕಿಡಿ
“ದರ್ಶನ್ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.