NEET ಅಕ್ರಮ: ಪರೀಕ್ಷಾ ಸಂಸ್ಥೆ ವಿರುದ್ಧವೇ ತನಿಖೆ!

ಹಿಂದಿನ ರಾತ್ರಿಯೇ ಪ್ರಶ್ನೆಪತ್ರಿಕೆ ಸೋರಿಕೆ ಆಗಿತ್ತು: ಆರೋಪಿ ತಪ್ಪೊಪ್ಪಿಗೆ

Team Udayavani, Jun 21, 2024, 6:32 AM IST

dharmendra-Pradhn

ಹೊಸದಿಲ್ಲಿ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೆಟ್‌)ಗಳಲ್ಲಿ ಅಕ್ರಮಗಳು ಕಂಡುಬಂದ ಹಿನ್ನೆಲೆಯಲ್ಲಿ ಈ ಪರೀಕ್ಷೆಗಳನ್ನು ನಡೆಸುವ ಹೊಣೆ ಹೊತ್ತಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯ ವಿರುದ್ಧವೇ ತನಿಖೆ ಕೈಗೊಳ್ಳಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಹೇಳಿದ್ದಾರೆ.

ಗುರುವಾರ ಹೊಸದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಅಕ್ರಮದ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾಸಂಸ್ಥೆ (ಎನ್‌ಟಿಎ) ಕಾರ್ಯನಿರ್ವಹಣೆಯ ಕುರಿತು ಪರಾಮರ್ಶಿಸಲು ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು. ಶೂನ್ಯ ಪ್ರಮಾದದ ಪರೀಕ್ಷೆಗಳನ್ನು ನಡೆಸಲು ನಾವು ಬದ್ಧರಾಗಿದ್ದೇವೆ’ ಎಂದು ಹೇಳಿದರು. ಇದೇ ವೇಳೆ, ಯುಜಿಸಿ ನೆಟ್‌ ಪ್ರಶ್ನೆ ಪತ್ರಿಕೆಯು ಡಾರ್ಕ್‌ನೆಟ್‌ ಮತ್ತು ಟೆಲಿಗ್ರಾಮ್‌ನಲ್ಲಿ ಸೋರಿಕೆಯಾದ ಬಗ್ಗೆ ತಿಳಿದುಬಂದ ಕೂಡಲೇ ನಾವು ಪರೀಕ್ಷೆಯನ್ನು ರದ್ದು ಮಾಡಿದೆವು ಎಂದೂ ತಿಳಿಸಿದರು.

ವ್ಯವಸ್ಥೆ ಸರಿಪಡಿಸುವ ಹೊಣೆನಮ್ಮ ಪರೀಕ್ಷಾ ವ್ಯವಸ್ಥೆ ಮೇಲೆ ನಂಬಿಕೆ ಇಡಿ. ಯಾವುದೇ ಅಕ್ರಮ ಅಥವಾ ನಕಲು ಮಾಡುವುದನ್ನು ನಮ್ಮ ಸರಕಾರ ಸಹಿಸುವುದಿಲ್ಲ. ವ್ಯವಸ್ಥೆಯನ್ನು ಸರಿಪಡಿಸುವ ಹೊಣೆ ನಮ್ಮದು. ಈ ವಿಷಯದಲ್ಲಿ ಯಾರೂ ರಾಜಕೀಯ ಮಾಡು ವುದು ಬೇಡ ಎಂದು ಪರೋಕ್ಷವಾಗಿ ರಾಹುಲ್‌ ಗಾಂಧಿ ಟೀಕೆಗೆ ಸಚಿವ ಪ್ರಧಾನ್‌ ಸೂಚ್ಯವಾಗಿ ಉತ್ತರಿಸಿದರು.

ಶೀಘ್ರ ಶಿಫಾರಸು ನಿರೀಕ್ಷೆ
ಎನ್‌ಟಿಎ ಸಂರಚನೆ, ಕಾರ್ಯನಿರ್ವಹಣೆ, ಪರೀûಾ ಪ್ರಕ್ರಿಯೆಗಳು, ಪಾರದರ್ಶಕತೆ ಮತ್ತು ಡೇಟಾ ಸುರಕ್ಷೆ ಕುರಿತು ಉನ್ನತ ಮಟ್ಟದ ಸಮಿತಿಯಿಂದ ಶಿಫಾರಸುಗಳನ್ನು ನಿರೀಕ್ಷಿಸಲಾಗುವುದು. ತಪ್ಪಿತಸ್ಥರು ಎಂದು ಕಂಡುಬರುವ ಎನ್‌ಟಿಎಯ ಯಾವುದೇ ಅಧಿಕಾರಿಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದೂ ಭರವಸೆ ನೀಡಿದರು.
ಸರಕಾರ ವಿದ್ಯಾರ್ಥಿಗಳ ಹಿತರಕ್ಷಣೆಗೆ ಬದ್ಧವಾಗಿದೆ ಎಂಬ ಭರವಸೆಯನ್ನು ನಾನು ನೀಡುತ್ತೇನೆ. ಪರೀಕ್ಷೆ ನಡೆಸುವ ವಿಷಯದಲ್ಲಿ ಪಾರದರ್ಶಕತೆಗೆ ಸಂಬಂಧಿಸಿದಂತೆ ಯಾವುದೇ ರಾಜಿಯನ್ನು ಮಾಡಿಕೊಳ್ಳುವುದಿಲ್ಲ ಎಂದರು.

ಹಿಂದಿನ ರಾತ್ರಿಯೇ ಪ್ರಶ್ನೆಪತ್ರಿಕೆ ಸೋರಿಕೆ ಆಗಿತ್ತು: ಆರೋಪಿ ತಪ್ಪೊಪ್ಪಿಗೆ
ಪಟ್ನಾ: ನೀಟ್‌-ಯುಜಿ ಪರೀಕ್ಷೆಗೂ ಮುನ್ನ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು ನಿಜ ಎಂದು ನಾಲ್ವರು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಪರೀಕ್ಷೆಯ ಹಿಂದಿನ ದಿನ ರಾತ್ರಿಯೇ ನಮಗೆ ಪ್ರಶ್ನೆಪತ್ರಿಕೆ ನೀಡಿ, ಉತ್ತರ ಬಾಯಿಪಾಠ ಮಾಡಿಸಲಾಗಿತ್ತು. ಮಾರನೇ ದಿನ ಪರೀಕ್ಷೆ ವೇಳೆ ಅದೇ ಪ್ರಶ್ನೆಗಳನ್ನು ಕೇಳಲಾಗಿತ್ತು ಎಂದು ಬಂಧಿತ ನೀಟ್‌ ಆಕಾಂಕ್ಷಿ ಹೇಳಿದ್ದಾನೆ.

ನಿರ್ದಿಷ್ಟ ಪ್ರದೇಶದಲ್ಲಿ ನೀಟ್‌ ಅಕ್ರಮ
ಪ್ರಾಥಮಿಕ ತನಿಖೆಯ ಪ್ರಕಾರ ನೀಟ್‌ ಪರೀಕ್ಷೆಯ ಅಕ್ರಮವು ನಿರ್ದಿಷ್ಟ ಪ್ರದೇಶದಲ್ಲಿ ಮಾತ್ರ ನಡೆದಿರುವ ಸಾಧ್ಯತೆಗಳಿವೆ. ಈ ಕುರಿತು ನಾವು ಬಿಹಾರ ಸರಕಾರದಿಂದ ಮಾಹಿತಿ ಪಡೆದುಕೊಂಡಿದ್ದೇವೆ. ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತಂತೆ ಪಟ್ನಾ ಪೊಲೀಸರು ಈಗಾಗಲೇ ಆಳವಾಗಿ ತನಿಖೆ ಕೈಗೊಂಡಿದ್ದು, ಶೀಘ್ರವೇ ಕೇಂದ್ರಕ್ಕೆ ವರದಿ ನೀಡಲಿದ್ದಾರೆ ಎಂದು ಸಚಿವ ಪ್ರಧಾನ್‌ ಹೇಳಿದರು.

ಡಾರ್ಕ್‌ನೆಟ್‌, ಟೆಲಿಗ್ರಾಮ್‌ನಲ್ಲಿ ನೆಟ್‌ ಪ್ರಶ್ನೆಪತ್ರಿಕೆ ಸೋರಿಕೆ
2024ರ ಯುಜಿಸಿ ನೆಟ್‌ ಪ್ರಶ್ನೆ ಪತ್ರಿಕೆಯು ಡಾರ್ಕ್‌ನೆಟ್‌ ಮತ್ತು ಟೆಲಿಗ್ರಾಮ್‌ನಲ್ಲಿ ಸೋರಿಕೆಯಾಗಿತ್ತು. ಹಾಗಾಗಿ ಪರೀಕ್ಷೆಯನ್ನು ರದ್ದು ಮಾಡಲಾಯಿತು ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಹೇಳಿದರು. ಡಾರ್ಕ್‌ನೆಟ್‌ನಲ್ಲಿದ್ದ ನೆಟ್‌ ಪ್ರಶ್ನೆಪತ್ರಿಕೆಯು ಒರಿಜನಲ್‌ ಪ್ರಶ್ನೆ ಪತ್ರಿಕೆ ನಡುವೆ ಸಾಮ್ಯತೆ ಇದ್ದಿದ್ದರಿಂದ ನಾವು ಪರೀಕ್ಷೆ ರದ್ದು ಮಾಡಲು ನಿರ್ಧರಿಸಿದೆವು ಎಂದು ಸಚಿವ ಪ್ರಧಾನ್‌ ಅವರು ತಿಳಿಸಿದರು.

ಟಾಪ್ ನ್ಯೂಸ್

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ

Court-Symbol

Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Train ಶಿವಮೊಗ್ಗ-ಶೃಂಗೇರಿ-ಮಂಗಳೂರು ಹೊಸ ರೈಲು ಮಾರ್ಗ ಮಂಜೂರಾತಿಗೆ ಮನವಿ

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

Pen Drive Case 4 ತಿಂಗಳಿಗೊಮ್ಮೆ ಎಚ್‌ಐವಿ ಟೆಸ್ಟ್‌ ಮಾಡಿಸುತ್ತಿದ್ದ ಪ್ರಜ್ವಲ್‌?

When will American astronauts return from space?

NASA; ಅಂತರಿಕ್ಷದಲ್ಲೇ ಅತಂತ್ರ! ಬಾಹ್ಯಾಕಾಶದಿಂದ ಅಮೆರಿಕದ ಗಗನಯಾತ್ರಿಗಳು ಮರಳ್ಳೋದು ಯಾವಾಗ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1993 Mumbai riot accused arrested after 31 years

Mumbai; 31 ವರ್ಷ  ಬಳಿಕ ಸೆರೆಸಿಕ್ಕ 1993 ಮುಂಬೈ ಗಲಭೆ ಆರೋಪಿ

Annamalai to resign as Tamil Nadu BJP president?

Annamalai; ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?

Don’t act like Rahul, answer with facts: Modi

Lok Sabha; ರಾಹುಲ್‌ ರೀತಿ ವರ್ತಿಸಬೇಡಿ, ಸತ್ಯ ಸಂಗತಿ ಮೂಲಕ ಉತ್ತರಿಸಿ: ಮೋದಿ

Lok Sabha; Many parts of Rahul Gandhi’s speech deducted from file

Lok Sabha; ರಾಹುಲ್‌ ಗಾಂಧಿ ಭಾಷಣದ ಹಲವು ಭಾಗಗಳಿಗೆ ಕಡತದಿಂದ ಕೊಕ್‌!

Fragment of rocks discovered by Pragyan at Moon Shivashakti Point!

Shivashakti: ಚಂದ್ರನ ಶಿವಶಕ್ತಿ ಪಾಯಿಂಟ್‌ನಲ್ಲಿ ಪ್ರಜ್ಞಾನ್‌ನಿಂದ ಶಿಲೆಗಳ ತುಣುಕು ಪತ್ತೆ!

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ

Court-Symbol

Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

Dina Bhavishya

Daily Horoscope; ಹಿತಶತ್ರುಗಳ ಕಾಟ, ಉದ್ಯೋಗಸ್ಥರಿಗೆ ವೇತನ ಏರಿಕೆಯಲ್ಲಿ ವಿಳಂಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.