Yoga Day: ಯೋಗ ದಿನ ವಿಶ್ವದಾದ್ಯಂತ ಹೊಸ ದಾಖಲೆಯನ್ನು ಸೃಷ್ಟಿಸಿದೆ: ಪ್ರಧಾನಿ ಮೋದಿ

ವಿಶ್ವಾದ್ಯಂತ ಯೋಗ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ

Team Udayavani, Jun 21, 2024, 8:48 AM IST

Yoga Day: ಯೋಗ ದಿನ ವಿಶ್ವದಾದ್ಯಂತ ಹೊಸ ದಾಖಲೆಯನ್ನು ಸೃಷ್ಟಿಸಿದೆ: ಪ್ರಧಾನಿ ಮೋದಿ

ಶ್ರೀನಗರ: ಇಂದು ಜಗತ್ತಿನಾದ್ಯಂತ ಯೋಗ ಮಾಡುವವರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ, ಯೋಗದತ್ತ ಜನರು ಆಕರ್ಷಿತರಾಗುತ್ತಿದ್ದಾರೆ ಇದರೊಂದಿಗೆ ಯೋಗದಿನ ವಿಶ್ವದಾದ್ಯಂತ ಹೊಸ ದಾಖಲೆಯನ್ನು ಸೃಷ್ಟಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಶ್ರೀನಗರದ ಶೇರ್-ಎ-ಕಾಶ್ಮೀರ್ ಇಂಟರ್‌ನ್ಯಾಶನಲ್ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಯೋಗ ದಿನದಲ್ಲಿ ಭಾಗವಹಿಸಿ ಅಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಾದ್ಯಂತ ಯೋಗ ದಿನದಲ್ಲಿ ಭಾಗಿಯಾಗಿರುವ ಎಲ್ಲಾ ಜನತೆಗೆ ನನ್ನ ಅಭಿನಂದನೆಗೆಳು ಯೋಗದಿಂದ ಮನಸ್ಸಿಗೆ ಏಕಾಗ್ರತೆ ಜೊತೆಗೆ ಶಕ್ತಿಯೂ ಸಿಗುತ್ತದೆ ಎಂಬುದು ಶ್ರೀನಗರಕ್ಕೆ ಬಂದ ನಂತರ ಗೊತ್ತಾಯಿತು ಎಂದು ಪ್ರಧಾನಿ ಹೇಳಿದ್ದಾರೆ. ಶ್ರೀನಗರದ ದಾಲ್ ಸರೋವರದ ದಂಡೆಯಲ್ಲಿ 10ನೇ ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಸುಮಾರು ಏಳು ಸಾವಿರ ಮಂದಿ ಯೋಗ ಭಾಗವಹಿಸಿದ್ದನ್ನು ಕಂಡು ಸಂತಸ ವ್ಯಕ್ತಪಡಿಸಿದ ಪ್ರಧಾನಿ. ಹತ್ತು ವರ್ಷಗಳ ಹಿಂದೆಯೇ ವಿಶ್ವಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಿಸಲು ಮುಂದಾಗಿದ್ದೆ ಎಂದರು. ಭಾರತದ ಪ್ರಸ್ತಾಪವನ್ನು 177 ದೇಶಗಳು ಬೆಂಬಲಿಸಿದವು, ಇದು ಸ್ವತಃ ದಾಖಲೆಯಾಗಿದೆ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಯೋಗದ ಬಗ್ಗೆ ಆಸಕ್ತಿ ಹೆಚ್ಚಾಗತೊಡಗಿದೆ ಇದು ಒಳ್ಳೆಯ ಬೆಳವಣಿಗೆ, ದೇಶದಾದ್ಯಂತ ಇಂದು ಕೋಟ್ಯಾಂತರ ಮಂದಿ ಯೋಗ ದಿನವನ್ನು ಆಚರಿಸುತ್ತಿದ್ದಾರೆ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ ಇದರೊಂದಿಗೆ ಯೋಗ ದಿನ ಹೊಸ ದಾಖಲೆಯನ್ನು ಸೃಷ್ಟಿಸಿದೆ ಎಂದು ಹೇಳಿದ್ದಾರೆ.

ಈ ವರ್ಷ ಫ್ರಾನ್ಸ್‌ನ 101 ವರ್ಷದ ಮಹಿಳಾ ಯೋಗ ಶಿಕ್ಷಕಿಗೆ ಭಾರತದಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ. ಮಹಿಳೆಗೆ ಭಾರತಕ್ಕೆ ಬರಲು ಆಗಲಿಲ್ಲ, ಆದರೆ ಯೋಗದ ಬಗ್ಗೆ ಜಾಗೃತಿ ಮೂಡಿಸಲು ತನ್ನ ಇಡೀ ಜೀವನವನ್ನು ಆ ಮಹಿಳೆ ಮುಡಿಪಾಗಿಟ್ಟಿದ್ದಳು. ಇಂದು ಪ್ರಪಂಚದಾದ್ಯಂತದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳು ಮತ್ತು ಸಂಸ್ಥೆಗಳಲ್ಲಿ ಯೋಗದ ಕುರಿತು ಸಂಶೋಧನೆಗಳನ್ನು ನಡೆಸಲಾಗುತ್ತಿದೆ; ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಲಾಗುತ್ತಿದೆ ಇದು ಉತ್ತಮ ಬೆಳವಣಿಗೆ ಎಂದು ಹೇಳಿದರು.

ಮನುಷ್ಯನ ಮನಸ್ಸಿಗೆ ಶಾಂತಿ ಸಿಗಬೇಕಾದರೆ ಏಕಾಗ್ರತೆ ಮುಖ್ಯ ಇದು ಸಿಗುವುದು ಯೋಗದಲ್ಲಿ ಮಾತ್ರ ಹಾಗಾಗಿ ಇಂದು ಹೆಚ್ಚಿನ ಜನ ಯೋಗದತ್ತ ಚಿತ್ತ ಹರಿಸಿದ್ದಾರೆ. ಯೋಗದಿಂದ ಧನಾತ್ಮಕ ಬದಲಾವಣೆಗಳು ಬರುತ್ತವೆ. ಯೋಗದ ಮೂಲಕ ನಮಗೆ ಜ್ಞಾನೋದಯವಾಗುತ್ತದೆ. ನಾವು ಇದನ್ನು ಅನುಭವಿಸುತ್ತಿದ್ದೇವೆ. ಯೋಗವು ಉದ್ಯೋಗಾವಕಾಶಗಳನ್ನು ಸೃಷ್ಟಿಸಿದೆ. ಜಗತ್ತಿನಾದ್ಯಂತ ಜನರು ಭಾರತಕ್ಕೆ ಬಂದು ಯೋಗ ಕಲಿಯುತ್ತಿದ್ದಾರೆ. ಪ್ರತಿ ವರ್ಷ ಯೋಗ ದಿನ ದಾಖಲೆಗಳನ್ನು ಮಾಡುತ್ತಿದೆ. ಯೋಗದ ಪಯಣ ನಿರಂತರವಾಗಿ ಮುಂದುವರಿಯುತ್ತದೆ. ಅದರ ಕಡೆಗೆ ಹೆಚ್ಚಿನ ಆಕರ್ಷಣೆ ಇದೆ. ನಾನು ಭೇಟಿಯಾಗುವ ಪ್ರತಿಯೊಬ್ಬ ವಿಶ್ವ ನಾಯಕರು ಯೋಗದ ಬಗ್ಗೆ ಮಾತನಾಡುತ್ತಾರೆ. ಜರ್ಮನಿಯಲ್ಲೂ ಜನರು ಯೋಗ ಮಾಡುತ್ತಿದ್ದಾರೆ. ಪ್ರಪಂಚದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಯೋಗವನ್ನು ಅಭ್ಯಾಸ ಮಾಡಲಾಗುತ್ತಿದೆ. ಯೋಗ ಈಗ ತನ್ನ ಸೀಮಿತ ವ್ಯಾಪ್ತಿಯನ್ನು ಮೀರಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-lo

Police; ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-anurag

Constitution ನಲ್ಲಿ ಎಷ್ಟು ಪುಟಗಳಿವೆ?: ವಿಪಕ್ಷಗಳಿಗೆ ಅನುರಾಗ್ ಠಾಕೂರ್ ಪ್ರಶ್ನೆ ವೈರಲ್

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ

1993 Mumbai riot accused arrested after 31 years

Mumbai; 31 ವರ್ಷ  ಬಳಿಕ ಸೆರೆಸಿಕ್ಕ 1993 ಮುಂಬೈ ಗಲಭೆ ಆರೋಪಿ

Annamalai to resign as Tamil Nadu BJP president?

Annamalai; ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?

Don’t act like Rahul, answer with facts: Modi

Lok Sabha; ರಾಹುಲ್‌ ರೀತಿ ವರ್ತಿಸಬೇಡಿ, ಸತ್ಯ ಸಂಗತಿ ಮೂಲಕ ಉತ್ತರಿಸಿ: ಮೋದಿ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್‌ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು

ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್‌ ಪತ್ತೆಗಾಗಿ 250 ಸಿಸಿ ಕ್ಯಾಮೆರಾ ಶೋಧಿಸಿದ್ದ ಪೊಲೀಸರು

New Criminal Law: 3 ಹೊಸ ಕ್ರಿಮಿನಲ್‌ ಕಾಯ್ದೆಯಡಿ ನಗರದಲ್ಲಿ ಮೊದಲ ದಿನ 39 ಕೇಸ್‌

New Criminal Law: 3 ಹೊಸ ಕ್ರಿಮಿನಲ್‌ ಕಾಯ್ದೆಯಡಿ ನಗರದಲ್ಲಿ ಮೊದಲ ದಿನ 39 ಕೇಸ್‌

1-asdsada

Yellapur; ಪಣಸಗುಳಿ ಸೇತುವೆ ಮುಳುಗಡೆ: ಸಂಚಾರ ಸ್ಥಗಿತ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

1-sp

Ballari: ನೂತನ ಎಸ್ ಪಿಯಾಗಿ ಶೋಭಾ ರಾಣಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.