T20 World Cup; ಹ್ಯಾಟ್ರಿಕ್ ವಿಕೆಟ್ ಕಿತ್ತ ಕಮಿನ್ಸ್; 17 ವರ್ಷದ ಬಳಿಕ ಆಸೀಸ್ ಬೌಲರ್ ಸಾಧನೆ


Team Udayavani, Jun 21, 2024, 12:39 PM IST

Pat Cummins becomes the 2nd Australian to pick a hat-trick in the T20 World Cup history

ಆ್ಯಂಟಿಗುವಾ: ಐಸಿಸಿ ಟಿ20 ವಿಶ್ವಕಪ್ ನ ಗುಂಪು ಹಂತದಲ್ಲಿ ಅಜೇಯ ಆಟವಾಡಿದ್ದ ಆಸ್ಟ್ರೇಲಿಯಾ ಸೂಪರ್ 8 ಹಂತದಲ್ಲಿ ತನ್ನ ಗೆಲುವಿನ ಓಟ ಮುಂದುವರಿಸಿದೆ. ಆ್ಯಂಟಿಗುವಾದ ಸರ್ ವಿವಿಯನ್ ರಿಚರ್ಡ್ ಸ್ಟೇಡಿಯಂನಲ್ಲಿ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಆಸ್ಟ್ರೇಲಿಯಾ 28 ರನ್ ಅಂತರದಿಂದ ಸೋಲಿಸಿತು.

ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆಲ್ ರೌಂಡರ್ ಪ್ಯಾಟ್ ಕಮಿನ್ಸ್ ಅವರು ಹ್ಯಾಟ್ರಿಕ್ ವಿಕೆಟ್ ತೆಗೆದು ಮಿಂಚಿದರು. ಬಾಂಗ್ಲಾದ ಮೊಹಮದುಲ್ಲಾ, ಮೆಹದಿ ಹಸನ್ ಮತ್ತು ತೌಹಿದ್ ಹ್ರದೋಯ್ ಅವರ ವಿಕೆಟ್ ಗಳನ್ನು ಕಿತ್ತ ಕಮಿನ್ಸ್ ಸಂಭ್ರಮಿಸಿದರು.

ನಾಲ್ಕು ಓವರ್ ಎಸೆದ ಪ್ಯಾಟ್ ಕಮಿನ್ಸ್ 29 ರನ್ ನೀಡಿ ಮೂರು ವಿಕೆಟ್ ಪಡೆದರು. ಸ್ಪಿನ್ನರ್ ಆ್ಯಡಂ ಜಂಪಾ ನಾಲ್ಕು ಓವರ್ ನಲ್ಲಿ 24 ರನ್ ನೀಡಿ ಎರಡು ವಿಕೆಟ್ ಕಿತ್ತರು.

ಕಮಿನ್ಸ್ ಅವರು ಟಿ20 ವಿಶ್ವಕಪ್‌ ನ ಇತಿಹಾಸದಲ್ಲಿ ಹ್ಯಾಟ್ರಿಕ್ ಪಡೆದ ಎರಡನೇ ಆಸ್ಟ್ರೇಲಿಯಾ ಆಟಗಾರನಾಗಿದ್ದಾರೆ. 2007ರ ಆವೃತ್ತಿಯಲ್ಲಿ ಬ್ರೆಟ್ ಲಿ ಅವರು ವಿಶ್ವಕಪ್ ಹ್ಯಾಟ್ರಿಕ್ ಪಡೆದಿದ್ದರು.

ಈ ಮಧ್ಯೆ ಮಿಚೆಲ್ ಸ್ಟಾರ್ಕ್ ಅವರು ಆರಂಭಿಕ ಓವರ್‌ನಲ್ಲಿ ತಂಜಿದ್ ಹಸನ್ ಅವರನ್ನು ಔಟ್ ಮಾಡುವ ಮೂಲಕ ವೈಟ್ ಬಾಲ್ ಕ್ರಿಕೆಟ್ ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆದರು. ತಂಜಿದ್ ಹಸನ್ ವಿಕೆಟ್ ಸ್ಟಾರ್ಕ್ ಅವರ 95 ನೇ ವಿಶ್ವಕಪ್ ವಿಕೆಟ್‌ ಆಗಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡವು 8 ವಿಕೆಟ್ ಕಳೆದುಕೊಂಡು 140 ರನ್ ಗಳಿಸಿತ್ತು. ಗುರಿ ಬೆನ್ನತ್ತಿದ ಆಸೀಸ್ 11.2 ಓವರ್ ಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು 100 ರನ್ ಗಳಿಸಿದ್ದಾಗ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿತು. ಡಕ್ ವರ್ತ್ ಲೂಯಿಸ್ ನಿಯಮದ ಪ್ರಕಾರ ಈ ಸಮಯದಲ್ಲಿ ಆಸೀಸ್ 28 ರನ್ ಗಳಿಂದ ಮುಂದಿತ್ತು. ಹೀಗಾಗಿ ಮಾರ್ಷ್ ಪಡೆಯನ್ನು ವಿಜಯಿ ಎಂದು ಘೋಷಿಸಲಾಯಿತು.

ಟಾಪ್ ನ್ಯೂಸ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ…  ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rewew

ICC ತಂಡದಲ್ಲಿ ಚಾಂಪಿಯನ್‌ ಭಾರತದ ಆರು ಆಟಗಾರರು: ದಕ್ಷಿಣ ಆಫ್ರಿಕಾದ ಒಬ್ಬರೂ ಇಲ್ಲ

1-asddasdsa

Storm: ವಿಂಡೀಸ್‌ನಲ್ಲೇ ಉಳಿದ ಭಾರತ ಕ್ರಿಕೆಟ್‌ ತಂಡ

badminton

Badminton ಆಡುತ್ತಿದ್ದಾಗಲೇ ಕುಸಿದು ಬಿದ್ದು  ಶಟ್ಲರ್‌ ಸಾವು

1-sikka

India ಸರಣಿಗೆ ಜಿಂಬಾಬ್ವೆ ತಂಡ : ಸಿಕಂದರ್‌ ರಝ ನಾಯಕ

jay-shah

Sri Lanka ಪ್ರವಾಸದಿಂದ ಭಾರತ ತಂಡಕ್ಕೆ ಹೊಸ ಕೋಚ್‌: ಶಾ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.