ಕಾರ ಹುಣ್ಣಿಮೆ; ಮಣ್ಣಿನ ಎತ್ತುಗಳ ಪೂಜೆಯ ಸಂಭ್ರಮ; ಕನ್ನಡದ ಮೊದಲ ಮಣ್ಣಿನ ಹಬ್ಬ ಕಾರಹುಣ್ಣಿಮೆ


Team Udayavani, Jun 21, 2024, 2:54 PM IST

14-

ರಬಕವಿ-ಬನಹಟ್ಟಿ: ಮುಂಗಾರು ಆರಂಭದ ಮೊದಲ ಹಬ್ಬವಾಗಿರುವ ಕಾರ ಹುಣ್ಣಿಮೆಯು ಹಬ್ಬಗಳನ್ನು ಕರೆದುಕೊಂಡು ಬರುವ ಹಬ್ಬವಾಗಿದೆ ಎಂದು ಗ್ರಾಮೀಣ ಪ್ರದೇಶದ ಜನರ ಮಾತು. ಇಲ್ಲಿಂದಲೇ ನಮ್ಮ ಹಬ್ಬಗಳು ಆರಂಭವಾಗುತ್ತವೆ. ಇಂದು ಶುಕ್ರವಾರ ರಬಕವಿ-ಬನಹಟ್ಟಿಯಲ್ಲಿ ಕಾರ ಹುಣ್ಣಿಮೆ ನಿಮಿತ್ತ ಮಣ್ಣಿನ ಎತ್ತುಗಳ ಖರೀದಿ ಹಾಗೂ ಪೂಜೆಯ ಸಂಭ್ರಮ ನಡೆಯಿತು.

ಕನ್ನಡದ ಮೊದಲ ಮಣ್ಣಿನ ಹಬ್ಬ ಕಾರಹುಣ್ಣಿಮೆ. ಈ ಸಂದರ್ಭದಲ್ಲಿ ಮಣ್ಣಿಗೆ ವಿಶೇಷ ಪೂಜೆಯನ್ನು ಅರ್ಪಿಸಲಾಗುತ್ತದೆ. ಜೊತೆಗೆ ಎತ್ತುಗಳನ್ನು ಅಲಂಕಾರ ಮಾಡಿ ಪೂಜಿಸುವ ಸಂಪ್ರದಾಯ ಈಗಲೂ ಆಚರಣೆಯಲ್ಲಿದೆ.

ಮುಂಬರುವ ದಿನಗಳಲ್ಲಿ ಕೃಷಿ ಚಟುವಟಿಕೆಗಳು ಚೆನ್ನಾಗಿ ನಡೆಯಲಿ ಎಂಬುದು ರೈತರ ಬಯಕೆ ಮತ್ತು ಸಂಕಲ್ಪ. ಆ ನಿಮಿತ್ತವಾಗಿ ರೈತರು ಕಾಲಕ್ಕೆ ತಕ್ಕಂತೆ ಒಂದು ವರ್ಷದಲ್ಲಿ ಒಟ್ಟು ಐದು ಸಲ ಮಣ್ಣಿಗೆ ಪೂಜೆ ಸಲ್ಲಿಸುತ್ತಾರೆ.

ಮೊದಲು ಕಾರಹುಣ್ಣಿಮೆ ಸಂದರ್ಭದಲ್ಲಿ ಎತ್ತುಗಳ ಪೂಜೆ, ಮಣ್ಣೆತ್ತಿನ ಅಮವಾಸ್ಯೆ ಸಂದರ್ಭದಲ್ಲಿ ಗುಳ್ಳವನ ಪೂಜೆ. ಶ್ರಾವಣದಲ್ಲಿ ನಾಗಪೂಜೆ, ಭಾದ್ರಪದದಲ್ಲಿ ಗಣಪತಿ ಮತ್ತು ಗೌರಿ ಹೀಗೆ ನಮ್ಮ ಗ್ರಾಮೀಣ ಪ್ರದೇಶದಲ್ಲಿ ಈ ರೀತಿಯಾಗಿ ಮಣ್ಣಿಗೆ ಪೂಜೆ ಸಲ್ಲಿಸಲಾಗುತ್ತದೆ.

ಮನೆಗಳಲ್ಲಿ ಎತ್ತು ಇಲ್ಲದವರು ಕೂಡಾ ಕುಂಬಾರರು ಮಾಡಿದ ಮಣ್ಣಿನ ಎತ್ತುಗಳನ್ನು ತಂದು ಮನೆಯ ದೇವರ ಕೋಣೆಯ ಜಗಲಿಯ ಮೇಲೆ ಇಟ್ಟು ಅವುಗಳನ್ನು ಪೂಜಿಸುತ್ತಾರೆ. ನಂತರ ಅವುಗಳಿಗೆ ಕೋಡು ಬಳೆಗಳನ್ನು ಮಾಡಿ ಹಾಕುತ್ತಾರೆ.

ಇದೊಂದು ರೀತಿಯಲ್ಲಿ ಎತ್ತುಗಳ ಅಲಂಕಾರವಾಗಿದ್ದು, ಅಂತೆಯೇ ಕಾರ ಹುಣ್ಣಿಮೆಯೂ ರೈತನ ಮಿತ್ರ ಎತ್ತುಗಳನ್ನು ಪೂಜಿಸಿ ಗೌರವಿಸುವ ಹಬ್ಬವಾಗಿದ್ದು, ಈ ಸಂದರ್ಭದಲ್ಲಿ ಎಲ್ಲ ಎತ್ತುಗಳನ್ನು ಬಣ್ಣ ಹಾಗೂ ಹೊಸ ಹೊಸ ಮೂಗುಧಾರ, ಬಾರುಕೋಲುಗಳಿಂದ ಶೃಂಗರಿಸಿ ಸಂಭ್ರಮಪಡುತ್ತಾರೆ.

ರಬಕವಿ ಬನಹಟ್ಟಿ ಹಾಗೂ ಸುತ್ತ-ಮುತ್ತಲಿನ ಗ್ರಾಮೀಣ ಪ್ರದೇಶದಲ್ಲಿ ಕಾರ ಹುಣ್ಣಿಮೆಯ ಮುನ್ನಾ ದಿನ ಮಣ್ಣಿನ ಎತ್ತುಗಳನ್ನು ಮನೆಗೆ ತೆಗೆದುಕೊಂಡು ಬಂದು ಅವುಗಳನ್ನು ಪೂಜಿಸುತ್ತಾರೆ. ನಂತರ ಕೋಡುಬಳೆಗಳಿಂದ ಅವುಗಳ ಕೋಡುಗಳನ್ನು ಶೃಂಗರಿಸುತ್ತಾರೆ.

ರೈತರು ಕೂಡಾ ಎತ್ತುಗಳಿಗೆ ಸ್ನಾನ ಮಾಡಿಸಿ ಅವುಗಳನ್ನು ಬಣ್ಣಗಳಿಂದ ಶೃಂಗಾರ ಮಾಡಿ ಪೂಜಿಸುತ್ತಾರೆ.

ಬನಹಟ್ಟಿಯಲ್ಲಿ ಕಾರ ಹುಣ್ಣಿಮೆಯ ಅಂಗವಾಗಿ ಸ್ಥಳೀಯ ಮಂಗಳವಾರ ಪೇಟೆಯಲ್ಲಿ ಮಣ್ಣಿನ ಎತ್ತುಗಳ ಮಾರಾಟ ಜೋರಾಗಿತ್ತು. ಸಮೀಪದ ಹೊಸೂರಿನ 20ಕ್ಕೂ ಹೆಚ್ಚು ಕುಟುಂಬಗಳು ಬೆಳಗ್ಗೆ 6 ಗಂಟೆಗೆ ಮಣ್ಣಿನ ಎತ್ತುಗಳನ್ನು ಮಾಡಲು ಆರಂಭಿಸಿ ಸಂಜೆ 7 ಗಂಟೆಯವರೆಗೆ ಮಾರಾಟ ಮಾಡುತ್ತಾರೆ.

ರಬಕವಿ ಬನಹಟ್ಟಿಯಲ್ಲಿ ಅಂದಾಜು 5-6 ಸಾವಿರಕ್ಕೂ ಹೆಚ್ಚು ಜೋಡಿ ಎತ್ತುಗಳನ್ನು ಮಾರಾಟ ಮಾಡುತ್ತಾರೆ. ಇನ್ನೂ ಕೆಲವರು ಎತ್ತುಗಳನ್ನು ತಲೆಯ ಮೇಲಿಟ್ಟುಕೊಂಡು ಮನೆ ಮನೆಗೆ ತೆರಳಿ ಮಾರಾಟ ಮಾಡಿ ಬರುತ್ತಾರೆ. 30 ರಿಂದ 250ರೂ. ವರೆಗೆ ಎತ್ತುಗಳು ಮಾರಾಟಗೊಂಡವು.

ಹೊಸೂರ ಗ್ರಾಮದ 91 ವರ್ಷದ ಚಂದ್ರವ್ವ ಕುಂಬಾರ ಏಳು ದಶಕಗಳಿಂದ ಎತ್ತುಗಳ ನಿರ್ಮಾಣ ಮಾಡುತ್ತ ಬಂದಿದ್ದಾರೆ. ” ತಮ್ಮ ಒಂದು ಆಣೆಕ್ಕ ಎತ್ತುಗಳನ್ನು ಮಾರಿದಾಕಿ ನಾನು” ಎಂದು ಹೇಳುತ್ತಾರೆ. ಅವರ ಮನೆಯ ಸದಸ್ಯರಾದ ಯಲ್ಲವ್ವ, ಸುಜಾತಾ, ರಾಜೇಶ್ವರಿ, ಶಾಂತವ್ವ ಹಾಗೂ ಹೊಸ ತಲೆಮಾರಿನ ಮೊಮ್ಮಕ್ಕಳಾದ ಆಶಾ ಕುಂಬಾರ ರೇಣುಕಾ ಕುಂಬಾರ, ಕೂಡಾ ಎತ್ತುಗಳ ನಿರ್ಮಾಣದಲ್ಲಿ ತೊಡಗಿದ್ದಾರೆ.

ಕಾರ ಹುಣ್ಣಿಮೆಯ ದಿನದಂದು ಸಂಜೆ ಎತ್ತುಗಳ ಓಟದ ಸ್ಪರ್ಧೆಯೊಂದಿಗೆ ಕಾರ ಹುಣ್ಣಿಮೆ ಮುಕ್ತಾಯಗೊಂಡರೆ ಇದು ಮುಂದೆ ಯಾವ ಬೆಳೆಗಳನ್ನು ಬೆಳೆಯಬಹುದು ಎಂಬುದಕ್ಕೆ ಮುನ್ನುಡಿಯಾಗುತ್ತದೆ.

ಜಗತ್ತು ಆಧುನಿಕತೆಯತ್ತ ಸಾಗಿದ್ದರೂ ನಮ್ಮ ಗ್ರಾಮೀಣ ಭಾಗದ ಜನರು ಇನ್ನೂ ನಮ್ಮ ದೇಸಿ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೊರಟಿರುವುದಕ್ಕೆ ಕಾರು ಹುಣ್ಣಿಮೆ ಸಾಕ್ಷಿಯಾಗಿದೆ.

ಕಿರಣ ಶ್ರೀಶೈಲ ಆಳಗಿ

 

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.