![Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್](https://www.udayavani.com/wp-content/uploads/2024/07/pl-415x226.jpg)
Team India; ರಾಹುಲ್ ಬಳಿಕ ಕೋಚಿಂಗ್ ಜವಾಬ್ದಾರಿ ವಿವಿಎಸ್ ಲಕ್ಷ್ಮಣ್ ಗೆ; ಏನಿದು ಟ್ವಿಸ್ಟ್
Team Udayavani, Jun 21, 2024, 4:05 PM IST
![Team India; ರಾಹುಲ್ ಬಳಿಕ ಕೋಚಿಂಗ್ ಜವಾಬ್ದಾರಿ ವಿವಿಎಸ್ ಲಕ್ಷ್ಮಣ್ ಗೆ; ಏನಿದು ಟ್ವಿಸ್ಟ್](https://www.udayavani.com/wp-content/uploads/2024/06/laxman-620x342.jpg)
ಮುಂಬೈ: ಸದ್ಯ ಕೆರಿಬಿಯನ್ ನಲ್ಲಿ ನಡೆಯುತ್ತಿರುವ ಐಸಿಸಿ ಟಿ20 ವಿಶ್ವಕಪ್ ಕೂಟದ ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ಅಧಿಕಾರವಧಿ ಮುಕ್ತಾಯವಾಗಲಿದೆ. ಹೀಗಾಗಿ ವಿಶ್ವಕಪ್ ಬಳಿಕ ಟೀಂ ಇಂಡಿಯಾಗೆ ಹೊಸ ಕೋಚ್ ಬರಲಿದ್ದಾರೆ. ಈಗಾಗಲೇ ಸುದ್ದಿಯಾಗಿರುವಂತೆ ಮಾಜಿ ಆಟಗಾರ, ಇತ್ತೀಚೆಗಷ್ಟೇ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಐಪಿಎಲ್ ಗೆಲುವು ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಗೌತಮ್ ಗೌಂಭೀರ್ ಅವರು ಮುಂದಿನ ಕೋಚ್ ಆಗುವ ಸಿದ್ದತೆಯಲ್ಲಿದ್ದಾರೆ.
ಬಿಸಿಸಿಐ ಮೂಲಗಳ ಪ್ರಕಾರ ಗೌತಿ ಅವರು ರಾಹುಲ್ ದ್ರಾವಿಡ್ ಸ್ಥಾನಕ್ಕೆ ಬರುವುದು ಬಹುತೇಕ ಖಚಿತ. ಕೆಲವೇ ದಿನಗಳ ಹಿಂದೆ ಅವರ ಸಂದರ್ಶನವೂ ನಡೆದಿತ್ತು. ಗೌತಮ್ ಗಂಭೀರ್ ಅವರು ಕೆಲವು ನಿಬಂಧನೆಗಳನ್ನು ಕೂಡಾ ಬಿಸಿಸಿಐ ಮುಂದಿಟ್ಟಿದ್ದಾರೆ ಎಂಬ ವರದಿಗಳು ಬಂದಿದ್ದವು.
ಆದರೆ ಇದೀಗ ವಿಶ್ವಕಪ್ ಮುಗಿದ ಬಳಿಕದ ಸರಣಿಗೆ ಮುಖ್ಯ ಕೋಚ್ ಆಗಿ ಗೌತಿ ಬದಲಿಗೆ ವಿವಿಎಸ್ ಲಕ್ಷ್ಮಣ್ ಹೆಸರು ಕೇಳಿಬಂದಿದೆ. ಟಿ20 ವಿಶ್ವಕಪ್ ಮುಗಿದ ಬಳಿಕ ಟೀಂ ಇಂಡಿಯಾ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ. ಐದು ಪಂದ್ಯಗಳ ಟಿ20 ಸರಣಿ ಜುಲೈ 6 ರಿಂದ ಆರಂಭವಾಗಲಿದೆ. ಇದಕ್ಕೆ ವಿವಿಎಸ್ ಲಕ್ಷ್ಮಣ್ ಅವರು ಮುಖ್ಯ ಕೋಚ್ ಆಗಿರಲಿದ್ದಾರೆ ಎಂದು ವರದಿಯಾಗಿದೆ.
ಜಿಂಬಾಬ್ವೆ ಸರಣಿಗೆ ಸೀನಿಯರ್ ಆಟಗಾರರಿಗೆ ವಿರಾಮ ನೀಡಿ ಹೊಸ ಹುಡುಗರಿಗೆ ಅವಕಾಶ ನೀಡುವ ಸಾಧ್ಯತೆಯಿದೆ. ಹಾರ್ದಿಕ್ ಪಾಂಡ್ಯ ವಿರಾಮ ಬಯಸಿದರೆ ಸೂರ್ಯಕುಮಾರ್ ಯಾದವ್ ಅವರು ತಂಡವನ್ನು ಮುನ್ನಡೆಸಬಹುದು. ಐಪಿಎಲ್ ನಲ್ಲಿ ಮಿಂಚಿದ ಪ್ರತಿಭೆಗಳಾದ ರಿಯಾನ್ ಪರಾಗ್, ಅಭಿಷೇಕ್ ಶರ್ಮಾ, ನಿತೀಶ್ ರೆಡ್ಡಿ ಮುಂತಾದವರು ಅವಕಾಶ ಪಡೆಯುವ ಸಾಧ್ಯತೆಯಿದೆ.
🚨VVS Laxman, along with NCA coaches,is expected to travel with the Indian team to Zimbabwe for a five-match T20I series starting July 6.
Gautam Gambhir is likely to begin his coaching tenure from the Sri Lanka tour in mid-July.🚨 pic.twitter.com/u5srGMC2yZ
— Sujeet Suman (@sujeetsuman1991) June 21, 2024
ಅದಾದ ಬಳಿಕದ ಶ್ರೀಲಂಕಾ ಸರಣಿಯಿಂದ ಮುಂದಿನ ಮುಖ್ಯ ಕೋಚ್ ಜವಾಬ್ದಾರಿ ವಹಿಸುವ ಸಾಧ್ಯತೆಯಿದೆ. ಹೀಗಾಗಿ ಜಿಂಬಾಬ್ವೆ ಸರಣಿಗೆ ಎನ್ ಸಿಎ ಮುಖ್ಯಸ್ಥ ಲಕ್ಷ್ಮಣ್ ಮತ್ತು ಅವರ ತಂಡ ಕೋಚಿಂಗ್ ಮಾಡಲಿದೆ. ಜೂನ್ 22 ಅಥವಾ 23ರಂದು ತಂಡ ಪ್ರಕಟವಾಗಬಹುದು.
ಟಾಪ್ ನ್ಯೂಸ್
![Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್](https://www.udayavani.com/wp-content/uploads/2024/07/pl-415x226.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Team-india](https://www.udayavani.com/wp-content/uploads/2024/07/Team-india-2-150x90.jpg)
T-20 World Champion: ತವರಿಗೆ ಬರುವ ಟೀಂ ಇಂಡಿಯಾದ ನಾಳೆಯ ಕಾರ್ಯಕ್ರಮವೇನು?
![ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ](https://www.udayavani.com/wp-content/uploads/2024/07/13-1-150x90.jpg)
ICC T20I Rankings: ವಿಶ್ವಕಪ್ನಲ್ಲಿ ಶ್ರೇಷ್ಠ ಸಾಧನೆ; ನಂ.1 ಆಲ್ ರೌಂಡರ್ ಆದ ಪಾಂಡ್ಯ
![1-asddasdsa](https://www.udayavani.com/wp-content/uploads/2024/07/1-asddasdsa-1-150x100.jpg)
Hurricane; ಯಾವುದೇ ವಿಳಂಬಗಳಾಗದಿದ್ದಲ್ಲಿ ನಾಳೆ ಬೆಳಗ್ಗೆ ದಿಲ್ಲಿಗೆ ಟೀಮ್ ಇಂಡಿಯಾ
![Barbados](https://www.udayavani.com/wp-content/uploads/2024/07/huricanbe-150x83.jpg)
Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?
![India will play 34 matches till 2026 T20 World Cup](https://www.udayavani.com/wp-content/uploads/2024/07/t20-150x83.jpg)
T20 Cricket; 2026ರ ಟಿ20 ವಿಶ್ವಕಪ್ ತನಕ ಭಾರತ ಆಡಲಿದೆ 34 ಪಂದ್ಯ
MUST WATCH
ಹೊಸ ಸೇರ್ಪಡೆ
![Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್](https://www.udayavani.com/wp-content/uploads/2024/07/pl-150x82.jpg)
Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್
![Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು](https://www.udayavani.com/wp-content/uploads/2024/07/PADDY-150x72.jpg)
Siruguppa ಕಳ್ಳತನ ಪ್ರಕರಣ: 330 ಭತ್ತದ ಚೀಲ ವಶಪಡಿಸಿಕೊಂಡ ಪೊಲೀಸರು
![DK-Shivakumar](https://www.udayavani.com/wp-content/uploads/2024/07/DK-Shivakumar-150x90.jpg)
Chennapattana ನನ್ನ ನಾಯಕತ್ವದಲ್ಲೇ ಬೆಂಗಳೂರಿಗೆ ಸೇರಲಿದೆ: ಡಿಕೆಶಿ
![Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನKumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ](https://www.udayavani.com/wp-content/uploads/2024/07/kumta-150x113.jpg)
Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
![Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ](https://www.udayavani.com/wp-content/uploads/2024/07/magu-150x82.jpg)
Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.