ಬಾಗಲಕೋಟೆ: ಏಳು ದಿನಗಳಿಂದ “ಸರ್ವರ್ ಸಮಸ್ಯೆ’ ಸಂಕಟ
Team Udayavani, Jun 21, 2024, 5:28 PM IST
ಉದಯವಾಣಿ ಸಮಾಚಾರ
ಗುಳೇದಗುಡ್ಡ: ಕಳೆದ ಏಳು ದಿನಗಳಿಂದ ಕಂದಾಯ ಇಲಾಖೆಯ ನಾಡಕಚೇರಿ ವೆಬ್ ಸೈಟ್ಗೆ ಸರ್ವರ್ ಸಮಸ್ಯೆ ಉಂಟಾಗಿದ್ದು,
ಇದರಿಂದ ಜಾತಿ ಆದಾಯ ಪಡೆಯಲು ಶಾಲಾ ವಿದ್ಯಾರ್ಥಿಗಳು, ಪೋಷಕರು ಪರದಾಡುವಂತಾಗಿದೆ. ಸರಕಾರದ ಯಾವುದೇ ಯೋಜನೆ ಪಡೆಯಲು ಜಾತಿ-ಆದಾಯ ಕಡ್ಡಾಯ. ಆದರೆ ಜಾತಿ ಆದಾಯ ಪಡೆಯಲು ತಹಶೀಲ್ದಾರ್ ಕಚೇರಿಗೆ ತೆರಳಿದರೆ ಸರ್ವರ್ ಸಮಸ್ಯೆ ಎದುರಾಗಿದೆ. ಇದರಿಂದ ಶಾಲಾ ವಿದ್ಯಾರ್ಥಿಗಳಿಗೆ, ಪೋಷಕರಿಗೆ ದಾರಿ ತೋಚದಂತಾಗಿದೆ.
ಏಕೆ ಸಮಸ್ಯೆ: ನಾಡಕಚೇರಿಯ ವೆಬ್ಸೈಟ್ ಅಪ್ಡೇಟ್ ಮಾಡುವ ಕೆಲಸ ನಡೆಯುತ್ತಿದ್ದು, ಹೀಗಾಗಿ ಸಮಸ್ಯೆಯಾಗುತ್ತಿದೆ ಎನ್ನುತ್ತಾರೆ ಅಧಿಕಾರಿಗಳು. ಮೇಲಧಿಕಾರಿಗಳ ಗಮನಕ್ಕೂ ತರಲಾಗಿದೆ. ಸರ್ವರ್ ಒಮ್ಮೊಮ್ಮೆ ಬರುತ್ತೆ ಮತ್ತೂಮ್ಮೆ ಹೋಗುತ್ತೇ ಇದೇ ರೀತಿಯಾಗುತ್ತದೆ. ಒಂದೆರಡು ದಿನದಲ್ಲಿ ಎಲ್ಲವೂ ಸರಿಯಾಗುತ್ತದೆ ಎಂಬುದು ಅಧಿಕಾರಿಗಳ ಮಾತು.
ತಹಶೀಲ್ದಾರ್ ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಹೋದರೆ ಸರ್ವರ್ ಇಲ್ಲ. ಹೊರಗಡೆ ಇರುವ ನೆಟ್ ಸೆಂಟರ್ಗಳಿಗೆ ತೆರಳಿದರೆ ಅಲ್ಲೂ ಅದೇ ಸಮಸ್ಯೆ ಕಾಡುತ್ತಿದ್ದು, ಇದರಿಂದ ಮಕ್ಕಳಿಗೆ ಸಾಕಷ್ಟು ಸಮಸ್ಯೆಯಾಗಿದೆ.
ಏನೆಲ್ಲ ಸೇವೆಗಳು ಬಂದ್?: ಸರ್ವರ್ ಸಮಸ್ಯೆಯಾಗುತ್ತಿರುವುದರಿಂದ ತಹಶೀಲ್ದಾರ್ ಕಚೇರಿಯಲ್ಲಿ ಸದ್ಯ ಜಾತಿ ಆದಾಯ, ಒಬಿಸಿ, ಕೃಷಿ ಸೇವೆಗಳಾದ ಬೋನೊಪೈಡ್ ವ್ಯವಸಾಯಗಾರರ ಪ್ರಮಾಣಪತ್ರ, ಸಣ್ಣ-ಅತಿ ಸಣ್ಣ ಹಿಡುವಳಿದಾರರ ಪ್ರಮಾಣಪತ್ರ,
ಸಾಮಾಜಿಕ ಭದ್ರತಾ ಸೇವೆಗಳು ಈ ಎಲ್ಲ ಸೇವೆಗಳು ನಾಡಕಚೇರಿ ವೆಬ್ಸೈಟ್ನಲ್ಲಿ ಬರುವುದರಿಂದ ಆ ವೆಬ್ಸೈಟ್ ಸರ್ವರ್
ಸಮಸ್ಯೆ ಎದುರಾಗಿರುವುದರಿಂದ ಜನರು ಪರದಾಡುವಂತಾಗಿದೆ. ಸದ್ಯ ಶಾಲೆಗಳಿಗೆ ಪ್ರವೇಶ ಪಡೆಯಲು ಜಾತಿ ಆದಾಯ ಅತಿ
ಮುಖ್ಯವಾಗಿ ಬೇಕಿದ್ದು, ಅದೇ ಸರ್ವರ್ ಇಲ್ಲದಿರುವುದರಿಂದ ಪಾಲಕರಲ್ಲಿ ಆತಂಕ ಹೆಚ್ಚಿದೆ. ತಹಶೀಲ್ದಾರ್ ಕಚೇರಿಗೆ, ನೆಟ್
ಸೆಂಟರ್ಗಳಿಗೆ ಜನರು ಅಲೆದಾಡುವಂತಾಗಿದೆ.
ಸರ್ವರ್ ಅಪ್ಡೇಟ್
ಮಾಡಲಾಗುತ್ತಿದೆ. ಎಲ್ಲ ಕಡೆಗಳಲ್ಲಿ ಸರ್ವರ್ ಸಮಸ್ಯೆಯಾಗಿದೆ. ನಡು ನಡುವೆ ಸರ್ವರ್ ಬರುತ್ತಿದೆ. ಆದರೆ ನಿರಂತರವಾಗಿ
ಬರುತ್ತಿಲ್ಲ. ಮೇಲಧಿಕಾರಿಗಳ ಗಮನಕ್ಕೂ ತರಲಾಗಿದೆ. ಈ ಸಮಸ್ಯೆ ರಾಜ್ಯದಲ್ಲಿದ್ದು, ಶೀಘ್ರ ಬಗೆಹರಿಯುತ್ತದೆ. ಸರ್ವರ್ ಬಂದ್
ಕೂಡಲೇ ಯಾವುದೇ ಜಾತಿ ಆದಾಯ ಅರ್ಜಿಗಳ ವಿಲೇವಾರಿ ವಿಳಂಬ ಮಾಡಲ್ಲ.
ಮಂಗಳಾ ಎಂ.,
ತಹಶೀಲ್ದಾರ್, ಗುಳೇದಗುಡ್ಡ
*ಮಲ್ಲಿಕಾರ್ಜುನ ಕಲಕೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ
MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ
Muda ಸೈಟ್ ಹಿಂತಿರುಗಿಸಿರುವ ಸಿದ್ದರಾಮಯ್ಯ ಪತ್ನಿಯ ಕ್ರಮಕ್ಕೆ ತಿಮ್ಮಾಪುರ ಪ್ರತಿಕ್ರಿಯೆ
Mudhol: ಪ್ರಕರಣ ಹಿಂಪಡೆಯದಿದ್ದರೆ ಹಿಂದೂ ಪರ ಸಂಘಟನೆಯಿಂದ ಜಿಲ್ಲಾದ್ಯಂತ ಹೋರಾಟದ ಎಚ್ಚರಿಕೆ
Rabkavi Banhatti: ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೇಕು: ಶಾಸಕ ಸಿದ್ದು ಸವದಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.