![9-Bantwala](https://www.udayavani.com/wp-content/uploads/2024/07/9-Bantwala-415x249.jpg)
Gokarna ಅಪಾಯದ ಕಡಲಿನಲ್ಲಿಯೂ ಮೋಜು-ಮಸ್ತಿ ಮಾಡುವ ಪ್ರವಾಸಿಗರು
ಕಡಲಬ್ಬರಕ್ಕೆ ಕೊಚ್ಚಿಹೋದ ಗೋಕರ್ಣದ ಪ್ರಮುಖ ಕಡಲತೀರ
Team Udayavani, Jun 21, 2024, 5:58 PM IST
![Gokarna ಅಪಾಯದ ಕಡಲಿನಲ್ಲಿಯೂ ಮೋಜು-ಮಸ್ತಿ ಮಾಡುವ ಪ್ರವಾಸಿಗರು](https://www.udayavani.com/wp-content/uploads/2024/06/Gokarna-2-620x377.jpg)
ಗೋಕರ್ಣ : ಕಳೆದೆರಡು ದಿನಗಳಿಂದ ಕಡಿಮೆಯಾಗಿದ್ದ ಮಳೆಯ ಆರ್ಭಟ ಶುಕ್ರವಾರ ಮತ್ತೆ ಅಬ್ಬರಿಸಿದೆ.
ಮಳೆಯ ತೀವ್ರತೆ ಕಡಲಬ್ಬರದಿಂದಾಗಿ ಇಲ್ಲಿಯ ಪ್ರಮುಖ ಕಡಲ ತೀರವನ್ನೇ ಸಮುದ್ರ ನುಂಗಿ ಹಾಕಿದೆ. ವಿಶಾಲವಾಗಿದ್ದ ಕಡಲತೀರ ಈಗ ಸಂಪೂರ್ಣ ಅಯೋಮಯವಾಗಿದೆ.
ದಕ್ಷಿಣದ ಕಾಶಿಯೆನಿಸಿಕೊಂಡಿರುವ ಗೋಕರ್ಣಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಿದ್ದರು. ಹಾಗೇ ದರ್ಶನವಾದ ನಂತರ ಸಮೀಪದಲ್ಲೇ ಇರುವ ಪ್ರಮುಖ ಕಡಲತೀರಕ್ಕೆ ಬಂದು ಹೋಗುವುದು ಸಂಪ್ರದಾಯ ಎನ್ನುವಂತಾಗಿದೆ.
ಹಾಗೇ ಶುಕ್ರವಾರ ಸಮುದ್ರದ ತೀರವನ್ನು ನೋಡಿದರೆ ಹತ್ತಾರು ಎಕರೆಯಷ್ಟು ಪ್ರದೇಶದಲ್ಲಿನ ಮಣ್ಣನ್ನು ಅಲ್ಲಿಯ ರಭಸಕ್ಕೆ ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ ಕಡಲತೀರ ವಿರೂಪಗೊಂಡಿದೆ.
ಇಲ್ಲಿ ಸಾಕಷ್ಟು ಪ್ರಮುಖ ಬೀಚ್ಗಳಿದ್ದರೂ ಕೂಡ ಶ್ರೀ ಮಹಾಬಲೇಶ್ವರ ದೇವಸ್ಥಾನದ ಕಡಲತೀರ ಅತ್ಯಂತ ಸಮೀಪವಾಗಿರುವುದರಿಂದ ಭಕ್ತರು ಇಲ್ಲಿಗೆ ಬಂದು ಸಮುದ್ರಸ್ನಾನ ಮಾಡುವುದು, ಪಿಂಡಪ್ರದಾನ ಮಾಡುವುದು ಹಾಗೂ ವಿವಿಧ ಧಾರ್ಮಿಕ ಕಾರ್ಯಗಳನ್ನು ಮಾಡುತ್ತಿದ್ದರು. ಆದರೆ ಈಗ ಕಡಲತೀರವೇ ಇಲ್ಲ ಎಂಬಾತಾಗಿದೆ.
ಇನ್ನು ಹೊರಗಡೆಯಿಂದ ಬರುವ ಭಕ್ತರಿಗೆ ಇಲ್ಲಿಯ ಸಮುದ್ರದ ಆಳ ಮತ್ತು ತೀವೃತೆಯ ಬಗ್ಗೆ ಅರಿವು ಇಲ್ಲದಿರುವುದರಿಂದ ಸಮುದ್ರದ ಅಬ್ಬರದ ನಡುವೆಯೂ ಸಮುದ್ರ ಸ್ನಾನಕ್ಕೆ ತೆರಳುತ್ತಿರುವುದನ್ನು ನೋಡಿದರೆ ನಿಜಕ್ಕೂ ಭಯ ಹುಟ್ಟಿಸುತ್ತದೆ. ಲೈಫ್ಗಾರ್ಡ್ ಗಳು ಭಕ್ತರಿಗೆ ಪದೇ ಪದೇ ಎಚ್ಚರಿಕೆ ನೀಡಿದರೂ ಕೂಡ ಅವರು ಕ್ಯಾರೇ ಅನ್ನುತ್ತಿಲ್ಲ. ಒಮ್ಮೆಲೆ ನೀರು ಬಂದು ವಾಪಸ್ಸಾಗುವಾಗ ಸ್ವಲ್ಪ ಕಾಲು ತಪ್ಪಿದರೂ ನೀರು ಪಾಲಾಗುವ ಸಾಧ್ಯತೆಯಿದೆ.
ಹಾಗೇ ಸಾಕಷ್ಟು ಕಡಲತೀರವನ್ನು ಕೊಚ್ಚಿಕೊಂಡು ಹೋಗಿದ್ದರೂ ಕೂಡ ಪ್ರವಾಸಿಗರು ಅದರಲ್ಲಿಯೂ ಮಹಿಳೆಯರು ನೀರಿನಲ್ಲಿ ಮೋಜು ಮಾಡುತ್ತಿರುವುದು ನೋಡಿದರೆ ನಿಜಕ್ಕೂ ಆತಂಕ ಹುಟ್ಟಿಸುತ್ತದೆ.
ಲೈಫ್ಗಾರ್ಡ್ ಗಳು ಎಚ್ಚರಿಕೆ ನೀಡುತ್ತಿದ್ದರೂ ಕೂಡ ಅವರು ತಲೆಗೆ ಹಾಕಿಕೊಳ್ಳದೇ ತಮ್ಮದೇ ಲೋಕದಲ್ಲಿದ್ದರು. ಇಂತಹ ಅಪಾಯದ ಸನ್ನಿವೇಶದಲ್ಲಿಯೂ ಕೂಡ ಸಮುದ್ರದಲ್ಲಿ ಮೋಜು ಮಾಡುತ್ತಿರುವುದು ನಿಜಕ್ಕೂ ಆತಂಕ ಹುಟ್ಟಿಸುತ್ತಿದೆ.
ದೂರದಿಂದ ಬರುವ ಭಕ್ತರಿಗೆ ದೇವರ ದರ್ಶನವಾದ ನಂತರ ಸಮುದ್ರದಲ್ಲಿ ಸ್ನಾನ ಮಾಡಬೇಕೆಂಬ ಸಹಜ ಬಯಕೆಯಂತೆ ತೆರಳುತ್ತಾರೆ. ಆದರೆ ಸ್ವಲ್ಪವೇ ಹೆಚ್ಚು ಕಡಿಮೆಯಾದರೂ ಪ್ರಾಣ ಹೋಗುತ್ತದೆಂಬ ಕಿಂಚಿತ್ತು ಅಳಕಿಲ್ಲದೇ ನೀರಿನಲ್ಲಿ ಮೋಜು ಮಾಡುತ್ತಿರುವುದು ಎಂತವರಿಗಾದರೂ ಹುಚ್ಚಾಟ ಅನಿಸದೇ ಇರದು.
ಸಮುದ್ರಸ್ನಾನ ಮುಗಿದ ನಂತರ ಪಕ್ಕದಲ್ಲೇ ಇರುವ ಸಿಹಿ ನೀರು ಸ್ನಾನ ಗೃಹದಲ್ಲಿ ಸ್ನಾನ ಮಾಡಿ ಬಟ್ಟೆ ಬದಲಿಸುತ್ತಾರೆ. ಇನ್ನು ಬರುವ ಪ್ರವಾಸಿಗರು ಕೂಡ ಇದೇ ಕತೆಯಾಗಿದೆ.
ಟಾಪ್ ನ್ಯೂಸ್
![9-Bantwala](https://www.udayavani.com/wp-content/uploads/2024/07/9-Bantwala-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![7-sirsi](https://www.udayavani.com/wp-content/uploads/2024/07/7-sirsi-150x90.jpg)
ತುಂಬಿ ಹರಿಯುತ್ತಿರುವ ಚಂಡಿಕಾನದಿ;ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ಮಾರ್ಗ ವ್ಯವಸ್ಥೆ
![Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನKumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ](https://www.udayavani.com/wp-content/uploads/2024/07/kumta-150x113.jpg)
Kumta ದೇವಸ್ಥಾನದ ಚಿನ್ನಾಭರಣ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
![Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ](https://www.udayavani.com/wp-content/uploads/2024/07/Falls-150x107.jpg)
Yellapur: ಪ್ರವಾಸಿಗರ ಗಮನಕ್ಕೆ; ಸಾತೋಡ್ಡಿ ಜಲಪಾತಕ್ಕೆ ನಿಷೇಧ
![2-dandeli](https://www.udayavani.com/wp-content/uploads/2024/07/2-dandeli-150x90.jpg)
Dandeli: ಅರಣ್ಯ ಪ್ರದೇಶದಲ್ಲಿ ಆನೆ ದಾಳಿ : ಓರ್ವನಿಗೆ ಗಾಯ, ಚಿಕಿತ್ಸೆಗೆ ದಾಖಲು
![1-honnavara](https://www.udayavani.com/wp-content/uploads/2024/07/1-honnavara-150x90.jpg)
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
![9-Bantwala](https://www.udayavani.com/wp-content/uploads/2024/07/9-Bantwala-150x90.jpg)
Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್
![Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ](https://www.udayavani.com/wp-content/uploads/2024/07/1-4-150x90.jpg)
Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್ – ಶಿವಣ್ಣ
![Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ](https://www.udayavani.com/wp-content/uploads/2024/07/rohiit-150x83.jpg)
Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ
![8-udupi](https://www.udayavani.com/wp-content/uploads/2024/07/8-udupi-150x90.jpg)
Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್
![Herbal: ಪಂಕಜ ಕಸ್ತೂರಿ ಹರ್ಬಲ್ ಗೆ ಅತ್ತ್ಯುತ್ತಮ ಹೆಲ್ತ್ ಕೇರ್ ಬ್ರ್ಯಾಂಡ್ ಮನ್ನಣೆ](https://www.udayavani.com/wp-content/uploads/2024/07/Pankaja-150x98.jpg)
Herbal: ಪಂಕಜ ಕಸ್ತೂರಿ ಹರ್ಬಲ್ ಗೆ ಅತ್ತ್ಯುತ್ತಮ ಹೆಲ್ತ್ ಕೇರ್ ಬ್ರ್ಯಾಂಡ್ ಮನ್ನಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.