Manipal ಮಾಹೆ ವಿ.ವಿ. ಅಂತಾರಾಷ್ಟ್ರೀಯ ಯೋಗ ದಿನ

ಮಣಿಪಾಲದ ಯೋಗ ಸಾಧಕಿಯರಾದ ವನಿತಾ ಪೈ, ಲಕ್ಷ್ಮೀ ದಿವಾಕರ್‌ ಅವರಿಗೆ ಸಮ್ಮಾನ

Team Udayavani, Jun 21, 2024, 10:42 PM IST

Manipal ಮಾಹೆ ವಿ.ವಿ. ಅಂತಾರಾಷ್ಟ್ರೀಯ ಯೋಗ ದಿನ

ಮಣಿಪಾಲ: ಮಾಹೆ ವಿ.ವಿ.ಯ ಯೋಗ ವಿಭಾಗದಿಂದ ಮರೇನಾ ಕ್ರೀಡಾ ಸಂಕೀರ್ಣದಲ್ಲಿ ಗುರುವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಇದೇ ವೇಳೆ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಹಾಗೂ ಯೋಗದ ಬಗ್ಗೆ ಸಾರ್ವಜನಿಕವಾಗಿ ಅರಿವು ಮೂಡಿಸುತ್ತಿರುವ ಮಣಿಪಾಲದ “ಮಣಿಪ್ರಾಣ ಯೋಗ ಸ್ಟುಡಿಯೋ’ದ ಅಯ್ಯಂಗಾರ್‌ ಯೋಗ ಇನ್‌ಸ್ಟ್ರಕ್ಟರ್‌ ವನಿತಾ ಪೈ ಹಾಗೂ ಯೋಗ ಥೆರಪಿಸ್ಟ್‌ ಲಕ್ಷ್ಮೀ ದಿವಾಕರ್‌ ಅವರನ್ನು ಸಮ್ಮಾನಿಸಲಾಯಿತು.

ಎಂಎಂಎನ್‌ಎಲ್‌ ಕಾರ್ಯ ನಿರ್ವಾಹಕ ಅಧ್ಯಕ್ಷ ಟಿ. ಸತೀಶ್‌ ಯು.ಪೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾಹೆ ವಿ.ವಿ. ಸಹ ಕುಲಾಧಿಪತಿ ಡಾ| ಎಚ್‌.ಎಸ್‌.ಬಲ್ಲಾಳ್‌ ಮಾತನಾಡಿ, ಭಾರತವು ವಿಶ್ವಕ್ಕೆ ನೀಡಿದ ಬಹುದೊಡ್ಡ ಕೊಡುಗೆಗಳಲ್ಲಿ ಯೋಗವೂ ಒಂದು. ಪ್ರಸ್ತುತ ಯೋಗವು ಅತ್ಯಂತ ಮಹತ್ವದ ವಿಷಯವಾಗಿದೆ. ಮನಸ್ಸಿನ ನಿಯಂತ್ರಣ ಹಾಗೂ ಮಾನಸಿಕ ಸಮಸ್ಯೆಗಳ ನಿವಾರಣೆಗೂ ಯೋಗ ಸಹಕಾರಿಯಾಗಲಿದೆ. ನಮ್ಮನ್ನು ಬಾಧಿಸುವ ರೋಗಗಳಲ್ಲಿ ಶೇ.75ರಷ್ಟು ಮನಸ್ಸಿಗೆ ಸಂಬಂಧಿಸಿದ್ದಾಗಿವೆ. ಹೀಗಾಗಿ ಯೋಗ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಉತ್ತಮ ಗುಣಮಟ್ಟದ ಜೀವನ ನಡೆಸಲು ಯೋಗ ಸಹಕಾರಿಯಾಗಲಿದೆ ಎಂದು ಹೇಳಿದರು.

“ಉದಯವಾಣಿ’ ದಿನಪತ್ರಿಕೆಯಲ್ಲಿ ಶುಕ್ರವಾರ ಪ್ರಕಟವಾಗಿರುವ ಯೋಗ ಗುರು ಬಿಕೆಎಸ್‌ ಅಯ್ಯಂಗಾರ್‌ ಅವರ ನುಡಿ ಮತ್ತು ಶ್ವಾಸಗುರು ವಚನಾನಂದ ಸ್ವಾಮೀಜಿಯರ ಲೇಖನದ ತುಣುಕಗಳನ್ನು ಸಭೆಯಲ್ಲಿ ಉಲ್ಲೇಖಿಸುವ ಮೂಲಕ ಗಮನ ಸೆಳೆದರು.

ಸಹ ಕುಲಪತಿ ಡಾ| ಶರತ್‌ ಕುಮಾರ್‌ ರಾವ್‌ ಮಾತನಾಡಿ, ಅಲೋಪತಿಯ ಜತೆಗೆ ಭಾರತೀಯ ಔಷಧ ಪದ್ಧತಿಯೂ ಮುನ್ನೆಲೆಗೆ ಬರಬೇಕಿದೆ. ಮಾಹೆ ವಿ.ವಿ.ಯು ಈ ನಿಟ್ಟಿನಲ್ಲಿ ಸಾಕಷ್ಟು ಕ್ರಮ ತೆಗೆದುಕೊಳ್ಳುತ್ತಿದೆ. ಭಾರತೀಯ ವೈದ್ಯ ಪದ್ಧತಿಗೆ ಪ್ರಾಮುಖ್ಯತೆ ನೀಡುವ ಉದ್ದೇಶದಿಂದ ವಿಶೇಷ ಯೋಜನೆಗಳನ್ನು ಮಾಹೆ ಹಾಕಿಕೊಂಡಿದೆ. ಭಾರತೀಯ ಸಂಸ್ಕೃತಿಯ ದೊಡ್ಡ ಭಾಗವಾಗಿರುವ ಯೋಗದಿಂದ ಎಲ್ಲವೂ ಸಾಧ್ಯವಿದೆ ಎಂದರು.

ಫಿಲಾಂತ್ರಪಿಸ್ಟ್‌ ಇಂದಿರಾ ಬಲ್ಲಾಳ್‌ ಅವರು ಯೋಗ ಸಾಧಕರನ್ನು ಸಮ್ಮಾನಿಸಿದರು.ಮಾಹೆ ಕುಲಸಚಿವ ಡಾ| ಗಿರಿಧರ್‌ ಕಿಣಿ ಅವರು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.

ಸಂಶೋಧನ ವಿಭಾಗದ ನಿರ್ದೇಶಕ ಡಾ| ಬಿ.ಎಸ್‌. ಸತೀಶ್‌ ಸ್ವಾಗತಿಸಿ, ಯೋಗ ವಿಭಾಗದ ಮುಖ್ಯಸ್ಥೆ ಡಾ| ಅನ್ನಪೂರ್ಣಾ ಕೆ. ಪ್ರಸ್ತಾವಿಸಿದರು. ಡಾ| ನಿತಿನ್‌ ಕುಮಾರ್‌ ಪಾಟೀಲ್‌ ವಂದಿಸಿ, ಡಾ| ಲಾವ್ಯಾ ಶೆಟ್ಟಿ ಹಾಗೂ ಡಾ| ದಿವ್ಯಾ ಪೂಜಾರಿ ನಿರೂಪಿಸಿದರು.

ಡಾ| ಅನ್ನಪೂರ್ಣಾ ಕೆ. ಅವರ ಮುಂದಾಳತ್ವದಲ್ಲಿ ಯೋಗ ಪ್ರದರ್ಶನ ಹಾಗೂ ಪ್ರಯೋಗ ನಡೆಯಿತು.

ಅಯ್ಯಂಗಾರ್‌ ಯೋಗ ಪದ್ಧತಿಯು ಅತ್ಯಂತ ಪ್ರಚಲಿತವಾದದ್ದು ಮತ್ತು ಮನಸ್ಸಿನ ನೋವು ನಿವಾರಣೆಯ ಜತೆಗೆ ಏಕಾಗ್ರತೆ ಶಕ್ತಿ ಹೆಚ್ಚಿಸಲು ಅನುಕೂಲಕರ. ಇತ್ತೀಚಿನ ದಿನಗಳಲ್ಲಿ ಮನಸ್ಸಿಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗುತ್ತಿವೆ. ಇದಕ್ಕಾಗಿ ಯುವ ಜನತೆ ಸೇರಿದಂತೆ ಬಹುತೇಕರು ಯೋಗದ ಮೊರೆ ಹೋಗುತ್ತಿದ್ದಾರೆ. ನಿತ್ಯ ಯೋಗ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಿದೆ.
-ವನಿತಾ ಪೈ, ಅಯ್ಯಂಗಾರ್‌ ಯೋಗ ಇನ್‌ಸ್ಟ್ರಕ್ಟರ್‌, ಮಣಿಪ್ರಾಣ ಯೋಗ ಸ್ಟುಡಿಯೋ, ಮಣಿಪಾಲ

ಯೋಗವು ಎಲ್ಲ ರೀತಿಯ ನೋವು ನಿವಾರಕವಾಗಿದೆ. ಯೋಗದಿಂದ ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಿದೆ.
-ಲಕ್ಷ್ಮೀ ದಿವಾಕರ್‌,
ಯೋಗ ಥೆರಪಿಸ್ಟ್‌

 

ಟಾಪ್ ನ್ಯೂಸ್

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ಪತ್ರಿಕಾ ದಿನಾಚರಣೆ: ಸಮ್ಮಾನ, ಪ್ರತಿಭಾ ಪುರಸ್ಕಾರ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Udupi ವಾಯ್ಸ ಆಫ್ ಹೀಲಿಂಗ್ಸ್‌: ಸಾಧಕರಿಗೆ ಸಮ್ಮಾನ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Manipal ಬ್ಯಾಂಕ್‌ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Nandikur ಪರಿಸರ ಮಾಲಿನ್ಯ?ಪರಿಸರ ಅಧಿಕಾರಿಗಳಿಂದ ಪರಿಶೀಲನೆ: ನೀರಿನ ಸ್ಯಾಂಪಲ್‌ ಸಂಗ್ರಹ

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!

12

Chowkidar Movie: ಚೌಕಿದಾರ್‌ಗೆ ಮುಹೂರ್ತ ಇಟ್ರಾ!

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್…  25 ಲಕ್ಷಕ್ಕೆ ಡೀಲ್

Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.