Music, ನೃತ್ಯ ಪರೀಕ್ಷೆ: 10 ದಿನಗಳಲ್ಲಿ ವರದಿ ನೀಡಲು ಕುಲಪತಿ ಸೂಚನೆ
ಗಂಗೂಬಾಯಿ ವಿವಿಯಿಂದ ಸಿಂಡಿಕೇಟ್ ಸದಸ್ಯರ ಉಪಸಮಿತಿ ರಚನೆ
Team Udayavani, Jun 21, 2024, 11:42 PM IST
ಮಂಗಳೂರು: ಮೈಸೂರಿನ ಗಂಗೂಬಾಯಿ ಹಾನಗಲ್ ಸಂಗೀತ, ಪ್ರದರ್ಶನ ಕಲೆಗಳ ವಿಶ್ವವಿದ್ಯಾನಿಲಯದಿಂದ ನಡೆಯಲಿರುವ ವಿಶೇಷ ಸಂಗೀತ, ನೃತ್ಯ, ತಾಳವಾದ್ಯ ಪರೀಕ್ಷೆಗೆ ಸಂಬಂಧಿಸಿ ಶುಕ್ರವಾರ ನಡೆದ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭೆಯಲ್ಲಿ ಚರ್ಚೆ ನಡೆದಿದೆ.
ಪರೀಕ್ಷೆ ಆಯೋಜಿಸುವ ಕುರಿತು ಇರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ನಾಲ್ಕು ಮಂದಿ ಸಿಂಡಿಕೇಟ್ ಸದಸ್ಯರ “ಉಪಸಮಿತಿ’ ರಚಿಸಲಾಗಿದೆ.
ಸಮಿತಿ ಸದಸ್ಯರು ವಿವಿಧ ಕಲಾ ಸಂಸ್ಥೆಗಳ ಪ್ರಮುಖರು ಹಾಗೂ ಶಿಕ್ಷಣ ಸಂಸ್ಥೆಗಳ ಪ್ರಮುಖರೊಂದಿಗೆ ಚರ್ಚಿಸಿ 10 ದಿನಗಳಲ್ಲಿ ವರದಿ ನೀಡುವಂತೆ ಸಮಿತಿಗೆ ಕುಲಪತಿ ನಾಗೇಶ್ ವಿ.ಬೆಟ್ಟಕೋಟೆ ನಿರ್ದೇಶನ ನೀಡಿದ್ದಾರೆ.
ಪ್ರಸ್ತುತ ಶಾಲೆಗಳು ಆರಂಭವಾಗಿರುವುದರಿಂದ ಯಾವ ರೀತಿ ಪರೀಕ್ಷೆ ಆಯೋಜಿಸಬಹುದು. ಸಾವಿರಾರು ಅಭ್ಯರ್ಥಿಗಳ ಅರ್ಜಿ ಪರಿಶೀಲನೆ, ಪರೀಕ್ಷಾ ಮೇಲ್ವಿಚಾರಕ ನೇಮಕವೂ ಬಾಕಿ ಇರುವುದು, ಮೊದಲಾದ ಅಂಶಗಳ ಬಗ್ಗೆಯೂ ಸಮಿತಿ ಪರಿಶೀಲನೆ ನಡೆಸಲಿದೆ. ಸಮಿತಿ ವರದಿ ನೀಡಿದ ಬಳಿಕ ಪರಿಶೀಲಿಸಿ ಪರೀಕ್ಷೆಗೆ ಸಂಬಂಧಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕುಲಪತಿ ನಾಗೇಶ್ ಬೆಟ್ಟಕೋಟೆ ಅವರು “ಉದಯವಾಣಿ’ಗೆ ತಿಳಿಸಿದ್ದಾರೆ.
ಉದಯವಾಣಿ ವರದಿ
ಈ ಬಾರಿ ವಿಶೇಷ ಸಂಗೀತ, ನೃತ್ಯ, ತಾಳವಾದ್ಯ ಪರೀಕ್ಷೆಗಳು ವಿಳಂಬವಾಗಿರುವ ಕುರಿತು “ಉದಯವಾಣಿ’ ಜೂ.21ರ ಸಂಚಿಕೆಯಲ್ಲಿ “ಸಂಗೀತ, ನೃತ್ಯ, ಪರೀಕ್ಷೆಗೆ ಮುಹೂರ್ತ ಸನ್ನಿಹಿತ’ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್
Mangaluru ಅಡಿಕೆಯ ಮೇಲಿನ ಜಿಎಸ್ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ
Fraud Case ಬಿಟ್ ಕಾಯಿನ್ ಹೂಡಿಕೆ ಮಾಡಿಸಿ ಲಕ್ಷಾಂತರ ವಂಚನೆ; ದೂರು
Traffic Jam: ಬಿ.ಸಿ.ರೋಡು-ಕಲ್ಲಡ್ಕ ಮಧ್ಯೆ ಹದಗೆಟ್ಟ ಹೆದ್ದಾರಿ
Bridge ದುಃಸ್ಥಿತಿ; ಘನ ವಾಹನ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಆದೇಶ
MUST WATCH
ಹೊಸ ಸೇರ್ಪಡೆ
NASA; ಅಂತರಿಕ್ಷದಲ್ಲೇ ಅತಂತ್ರ! ಬಾಹ್ಯಾಕಾಶದಿಂದ ಅಮೆರಿಕದ ಗಗನಯಾತ್ರಿಗಳು ಮರಳ್ಳೋದು ಯಾವಾಗ?
Annamalai; ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ?
Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್
Byndoor ತುಂಬಿದ ಹೊಳೆ ಮಧ್ಯೆ ಮಕ್ಕಳನ್ನು ಹೊತ್ತೊಯ್ಯುವ ನಿತ್ಯದ ಕಸರತ್ತು
ಡಿಕೆಶಿ ಕಾಂಗ್ರೆಸ್ಗೆ ಕಾಲಿಡುವ ಮೊದಲೇ ನೋಟಿಸ್, ಉಚ್ಚಾಟನೆ ಎಲ್ಲಾ ನೋಡಿದ್ದೀನಿ…; ರಾಜಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.