Super 8; ಇಂಗ್ಲೆಂಡ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ 7 ರನ್ ಜಯ: ಸೆಮಿ ಹಾದಿಯಲ್ಲಿ


Team Udayavani, Jun 22, 2024, 12:06 AM IST

1-S-A

ಗ್ರಾಸ್‌ ಐಲೆಟ್‌: ಇಂಗ್ಲೆಂಡ್‌ ಎದುರಿನ ಶುಕ್ರವಾರದ ಸೂಪರ್‌-8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ 7 ರನ್ ಗಳ ರೋಚಕ ಜಯ ಸಾಧಿಸಿ ಸೆಮಿ ಫೈನಲ್ ಪ್ರವೇಶಕ್ಕೆ ಸಿದ್ದವಾಗಿ ನಿಂತಿದೆ. ಎರಡೂ ಸೂಪರ್‌-8 ಪಂದ್ಯ ಗೆದ್ದಿರುವ ದಕ್ಷಿಣ ಆಫ್ರಿಕಾ ಮುಂದಿನ ಪಂದ್ಯವನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ.

ಮೊದಲು ಬ್ಯಾಟಿಂಗ್ ನಡೆಸಿದ ದಕ್ಷಿಣ ಆಫ್ರಿಕಾ 6 ವಿಕೆಟಿಗೆ 163 ರನ್‌ ಗಳಿಸಿದೆ. ಆರಂಭಕಾರ ಕ್ವಿಂಟನ್‌ ಡಿ ಕಾಕ್‌ ಸತತ 2ನೇ ಅರ್ಧ ಶತಕ ಬಾರಿಸಿ ಮಿಂಚಿದರು.ಅಮೆರಿಕ ಎದುರಿನ ಮೊದಲ ಮುಖಾಮುಖಿಯಲ್ಲಿ 74 ರನ್‌ ಹೊಡೆದಿದ್ದ ಡಿ ಕಾಕ್‌, ಇಂಗ್ಲೆಂಡ್‌ ವಿರುದ್ಧ 65 ರನ್‌ ಬಾರಿಸಿ ಪಂದ್ಯ ಶ್ರೇಷ್ಠ ಎನಿಸಿಕೊಂಡರು. 38 ಎಸೆತಗಳ ಈ ಸೊಗಸಾದ ಆಟದಲ್ಲಿ 4 ಬೌಂಡರಿ, 4 ಸಿಕ್ಸರ್‌ ಸೇರಿತ್ತು.

ಗುರಿ ಬೆನ್ನಟ್ಟಿದ ಇಂಗ್ಲೆಂಡ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 156 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ಇಂಗ್ಲೆಂಡ್ ಪರ ಮಧ್ಯಮ ಕ್ರಮಾಂಕದಲ್ಲಿ ಹ್ಯಾರಿ ಬ್ರೂಕ್ 53(37 ಎಸೆತ) ಮತ್ತು ಲಿಯಾಮ್ ಲಿವಿಂಗ್‌ಸ್ಟೋನ್33(17 ಎಸೆತ) ಗೆಲುವಿನ ಆಸೆ ಮೂಡಿಸಿದರಾದರೂ ಇಬ್ಬರೂ ಔಟಾಗಿ ಸೋಲಿನತ್ತ ಮುಖ ಮಾಡಿತು. ಕೊನೆಯಲ್ಲಿ 10 ರನ್ ಗಳಿಸಿ ಸ್ಯಾಮ್ ಕರ್ರನ್ ಔಟಾಗದೆ ಉಳಿದರು. ಆರಂಭಿಕರಾದ ಸಾಲ್ಟ್ 11, ನಾಯಕ ಬಟ್ಲರ್ 17 ರನ್ ಗಳಿಸಿ ನಿರ್ಗಮಿಸಿದರು. ಜಾನಿ ಬೈರ್ಸ್ಟೋವ್ 16 ರನ್ ಗಳಿಸಿ ಔಟಾದರು.ಕೇಶವ್ ಮಹಾರಾಜ್ ಮತ್ತು ರಬಾಡ ತಲಾ 2 ವಿಕೆಟ್ ಕಿತ್ತರು.

43 ರನ್‌ ಹೊಡೆದ ಡೇವಿಡ್‌ ಮಿಲ್ಲರ್‌ ಮತ್ತೋರ್ವ ಪ್ರಮುಖ ಸ್ಕೋರರ್‌ (28 ಎಸೆತ, 4 ಬೌಂಡರಿ, 2 ಸಿಕ್ಸರ್‌). ಅರ್ಧ ಶತಕದ ಹಾದಿಯಲ್ಲಿದ್ದ ಅವರು ಅಂತಿಮ ಓವರ್‌ನಲ್ಲಿ ಔಟಾದರು. ರೀಝ ಹೆಂಡ್ರಿಕ್ಸ್‌ ಗಳಿಕೆ 19 ರನ್‌. ಇಂಗ್ಲೆಂಡ್‌ ಪರ ಜೋಫ್ರಾ ಆರ್ಚರ್‌ 40 ರನ್ನಿಗೆ 3 ವಿಕೆಟ್‌ ಉರುಳಿಸಿದರು. ಮೊಯಿನ್‌ ಅಲಿ ಮತ್ತು ಆದಿಲ್‌ ರಶೀದ್‌ ಒಂದೊಂದು ವಿಕೆಟ್‌ ಕೆಡವಿದರು. ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್‌ ತಂಡಗಳೆರಡೂ ಮೊದಲ ಸೂಪರ್‌-8 ಪಂದ್ಯದಲ್ಲಿ ಜಯ ಸಾಧಿಸಿದ್ದವು.ಇಂದಿನ ಪಂದ್ಯದ ಸೋಲು ಇಂಗ್ಲೆಂಡ್ ಗೆ ಆಘಾತ ನೀಡಿದೆ ಆದರೂ ಸೆಮಿ ಪ್ರವೇಶಕ್ಕೆ ಇನ್ನೂ ಅವಕಾಶವಿದೆ.

ಟಾಪ್ ನ್ಯೂಸ್

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ…  ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rewew

ICC ತಂಡದಲ್ಲಿ ಚಾಂಪಿಯನ್‌ ಭಾರತದ ಆರು ಆಟಗಾರರು: ದಕ್ಷಿಣ ಆಫ್ರಿಕಾದ ಒಬ್ಬರೂ ಇಲ್ಲ

1-asddasdsa

Storm: ವಿಂಡೀಸ್‌ನಲ್ಲೇ ಉಳಿದ ಭಾರತ ಕ್ರಿಕೆಟ್‌ ತಂಡ

badminton

Badminton ಆಡುತ್ತಿದ್ದಾಗಲೇ ಕುಸಿದು ಬಿದ್ದು  ಶಟ್ಲರ್‌ ಸಾವು

1-sikka

India ಸರಣಿಗೆ ಜಿಂಬಾಬ್ವೆ ತಂಡ : ಸಿಕಂದರ್‌ ರಝ ನಾಯಕ

jay-shah

Sri Lanka ಪ್ರವಾಸದಿಂದ ಭಾರತ ತಂಡಕ್ಕೆ ಹೊಸ ಕೋಚ್‌: ಶಾ

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್‌ ವಂಚನೆ, ಹೂಡಿಕೆದಾರರು ಕಂಗಾಲು!

10

Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.