![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-415x249.jpg)
ರೇಣುಕಾಸ್ವಾಮಿ-ಪವಿತ್ರಾ ಸಂದೇಶ: ಇನ್ಸ್ಟಾ ಮೊರೆ
ಪವಿತ್ರಾ ಫೋನ್ ಎಫ್ಎಸ್ಎಲ್ಗೆ ರವಾನೆ ; ರೇಣುಕಾಸ್ವಾಮಿ ಮೊಬೈಲ್ ಮೋರಿ ಪಾಲು
Team Udayavani, Jun 22, 2024, 6:46 AM IST
![ರೇಣುಕಾಸ್ವಾಮಿ-ಪವಿತ್ರಾ ಸಂದೇಶ: ಇನ್ಸ್ಟಾ ಮೊರೆ](https://www.udayavani.com/wp-content/uploads/2024/06/Renukaswamy-Pavithra-Gowda-620x358.jpg)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹಾಗೂ ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ನಡುವಿನ ಸಂದೇಶಗಳ ವಿವರ ನೀಡುವಂತೆ ಕೋರಿ ಇನ್ಸ್ಟಾಗ್ರಾಂಗೆ ಪತ್ರ ಬರೆಯಲು ಪೊಲೀಸರು ಮುಂದಾಗಿದ್ದಾರೆ.
ನಟಿ ಪವಿತ್ರಾ ಗೌಡ ಫೋನ್ ವಶಪಡಿಸಿಕೊಂಡು ರಿಟ್ರೈವ್ ಮಾಡಲು ಎಫ್ಎಸ್ಎಲ್ಗೆ ಕಳುಹಿಸಲಾಗಿದೆ. ಆದರೆ ರೇಣುಕಾಸ್ವಾಮಿ ಮೊಬೈಲ್ ಡೇಟಾವನ್ನು ಪಡೆಯಬೇಕಿದೆ. ಆತನನ್ನು ಹತ್ಯೆ ಮಾಡಿದ ಬಳಿಕ ಆತನ ಮೊಬೈಲ್ ಅನ್ನು ಸುಮನಹಳ್ಳಿ ಸಮೀಪದ ಮೋರಿಗೆ ಎಸೆದಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದರು. ಕಳೆದ ಕೆಲ ದಿನಗಳಿಂದ ಪೊಲೀಸರು ರೇಣುಕಾಸ್ವಾಮಿ ಫೋನ್ಗಾಗಿ ಸುಮನಹಳ್ಳಿಯ ಅಪಾರ್ಟ್ಮೆಂಟ್ ಬಳಿಯ ಮೋರಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಆದರೆ ರೇಣುಕಾಸ್ವಾಮಿ ಮೊಬೈಲ್ ಮಾತ್ರ ಪತ್ತೆಯಾಗಿಲ್ಲ.
ಡಿಸಿಪಿ (ಪಶ್ಚಿಮ) ಗಿರೀಶ್ ನೇತೃತ್ವದಲ್ಲಿ ವಿಜಯನಗರ ಎಸಿಪಿ ಚಂದನ್ ತನಿಖೆ ನಡೆಸುತ್ತಿದ್ದು, ತಾಂತ್ರಿಕ ಸಾಕ್ಷ್ಯ ಸಂಗ್ರಹಿಸುವ ನಿಟ್ಟಿನಲ್ಲಿ ಇನ್ಸ್ಟಾಗ್ರಾಂಗೆ ಪತ್ರ ಬರೆದು ಇಬ್ಬರ ನಡುವೆ ನಡೆದ ಸಂಭಾಷಣೆಯ ಮಾಹಿತಿ ಪಡೆಯಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ರೇಣುಕಾಸ್ವಾಮಿ ಮೊಬೈಲ್ ಸಿಕ್ಕಿದರೆ, ಅದರಲ್ಲಿ ಆತ ಪವಿತ್ರಾ ಜತೆಗೆ ಏನೆಲ್ಲ ಚಾಟ್ ಮಾಡಿದ್ದಾನೆ ಎಂಬಿತ್ಯಾದಿ ವಿವರಗಳು, ತಾಂತ್ರಿಕ ಸಾಕ್ಷ್ಯಗಳು ಸಿಗಲಿವೆ. ಇದು ಪ್ರಕರಣಕ್ಕೆ ಪ್ರಮುಖ ಸಾಕ್ಷ್ಯವಾಗಲಿದೆ. ಇದು ಕೊಲೆಯ ಹಿಂದಿನ ಉದ್ದೇಶವನ್ನು ಸಾಬೀತುಪಡಿಸಲು ಪೊಲೀಸರಿಗೆ ಸಹಕಾರಿ ಆಗಲಿದೆ.
ಟಾಪ್ ನ್ಯೂಸ್
![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
![vijayapura](https://www.udayavani.com/wp-content/uploads/2024/07/vijayapura-2-150x90.jpg)
Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ
![1-raju](https://www.udayavani.com/wp-content/uploads/2024/07/1-raju-150x85.jpg)
Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ
![Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?](https://www.udayavani.com/wp-content/uploads/2024/07/HIV-150x90.jpg)
Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?
![Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್](https://www.udayavani.com/wp-content/uploads/2024/07/dinesh-gundu-rao-150x87.jpg)
Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್
MUST WATCH
ಹೊಸ ಸೇರ್ಪಡೆ
![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-150x90.jpg)
SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
![1-honnavara](https://www.udayavani.com/wp-content/uploads/2024/07/1-honnavara-150x90.jpg)
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.